ಕಲಬುರಗಿ: ಮಳೆಯಾದರೇನು – ಬಿಸಿಲಾದರೇನು ಸಹಾಯ ಮಾಡುವ ಇಚ್ಛಾಶಕ್ತಿ ಹೊಂದಿದವರಿಗೆ ಸೇವೆಯಲ್ಲಿಯೇ ತೃಪ್ತಿ ದೊರೆಯುವುದು. ನಮ್ಮ ಭಾಗದ ಸೇವೆಗೆ ಸದಾ ಸಿದ್ದರಾಗಿದ್ದಾನೆ ಎಂದು ಮಾಜಿ ಸಚಿವ ಹಾಲಿ ಶಾಸಕ ಪ್ರೀಯಾಂಕ್ ಖರ್ಗೆ ನುಡಿದರು.
ನಗರದ ಕಲಬುರ್ಗಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಿವಾನಂದ ಹೊನಗುಂಟಾ ಅವರ ನೇತೃತ್ವದಲ್ಲಿ ಕೋವಿಡನಿಂದ ಬಳಲುತ್ತಿರುವ ಜಿಮ್ಸ್, ಬಸವೇಶ್ವರ ಹಾಗೂ ಇಎಸ್ಐ ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳ ಸಹಾಯಕರಿಗೆ ಮತ್ತು ಸಿಬ್ಬಂದಿಕರಿಗೆ ಲಾಕಡೌನ ಹಿನ್ನೆಲೆಯಲ್ಲಿ ದಿನನಿತ್ಯದ ೨೫ ದಿನದ ಈ ಊಟ ಹಾಗೂ ಮಿನರಲ್ ನೀರು ವಿತರಣಾ ಸೇವೆಗೆ ಚಾಲನೆ ನೀಡಿ ಮಾತನಾಡುತ್ತಾ ಅವರು, ಮಹಾ ಮಾರಿ ಕರೋನಾದ ೨ನೇ ಅಲೆಯಿಂದ ಲಾಕ್ಡೌನ್ ಆದಾಗಿನಿಂದಲೂ ಜನರು ಒಂದು ಹೊತ್ತಿನ ಊಟಕ್ಕೂ ಪರಿತಪಿಸುವಂತಾಗಿದೆ. ಇಂಹತ ಸಂದರ್ಭದಲ್ಲಿ ಊಟ ನೀರು ನೀಡುತ್ತಿರುವುದು ತುಂಬಾನೆ ಒಳ್ಳೆಯ ಕೆಲಸವಾಗಿದೆ. ಪ್ರತಿಯೊಬ್ಬರು ಬಡ ಕಾರ್ಮಿಕರಿಗೆ ತಮ್ಮ ಕೈಲಾದ ಸಹಾಯವನ್ನು ಮಾಡಬೇಕು ಎಂದು ಹೇಳಿದರು.
ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಿಯಾಂಕ್ ಖರ್ಗೆ ಅವರು ಆಗಮಿಸಿದ್ದ ವೇಳೆ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದರು ಜನರು ಕಾಯುತ್ತಿರುವುದನ್ನ ನೋಡಿ ಮಳೆಯಲ್ಲಿಯೇ ಮಳೆಯಲ್ಲೇ ನೆನೆದು ಊಟ, ನೀರು ಮತ್ತು ಬಾಳೆ ಹಣ್ಣು ವಿತರಿಸಲಾಯಿತು ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಿವಾನಂದ ಹೊನಗುಂಟಾ ಹೇಳಿದರು.
ಈ ಸಂದರ್ಭದಲ್ಲಿ ಪ್ರವೀಣ್ ಪಾಟೀಲ್ ಹರವಾ, ಕಿರಣ ದೇಶಮುಖ್, ಮಜರ ಆಲಂ ಖಾನ್, ಫಾರುಖ ಮನಿಯರ್, ರಾಜು ಕಪನೂರ್, ಸಂತೋ? ಬೆನ್ನೂರ್, ಈರಣ್ಣ ಝಳಕಿ, ಖೂಸರೋ ಜಾಗಿರ್ದಾರ್, ಪರಶುರಾಮ್ ನಾಟೇಕರ್, ಅಮರ್ ಶಿರವಾಳ ,ಅಶ್ವಿನ್ ಸಂಕ , ಸಚಿನ್ ಶಿರವಾಳ, ಸೈಯದ್ ರಕಿಬ್, ಅ?ದ್ ಖಾನ್ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ಡಿಸಿಸಿ ನಾಯಕರು ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…