ಕಲಬುರಗಿ: ಸಂಪೂರ್ಣ ಜಜ್ಜಿ ಹೋಗಿದ್ದ ಕೈಯನ್ನು ಜೋಡಿಸುವ ಮೂಲಕ ನಗರದ ಹುಮನಾಬಾದ್ ರಿಂಗ್ ರಸ್ತೆಯಲ್ಲಿನ ಮನೂರ ಮಲ್ಟಿಸ್ಪೇಷಾಲಿಟಿ ಆಸ್ಪ್ಪತ್ರೆ ವೈದ್ಯರ ತಂಡ ಅಮೋಘ ಸಾಧನೆ ಮಾಡಿದೆ.
ಶಹಾಪುರ ತಾಲೂನ ತಡಿಬಡಿ ಗ್ರಾಮದ ೩೬ ವರ್ಷದ ಯುವಕ ಕಬ್ಬಿನ ರಸ ತೆಗೆಯುವ ಯಂತ್ರದಲ್ಲಿ ಕೈ ಸಿಲುಕಿಸಿಕೊಂಡಿದ್ದ. ಇದರಿಂದ ಕೈ ಸಂಪೂರ್ಣ ಹಾಳಾಗಿತ್ತು. ಕೈ ಕತ್ತರಿಸುವುದೇ ಒಂದೆ ಮಾರ್ಗ ವಾಗಿತ್ತು. ಇಂಥ ಸಂದರ್ಭದಲ್ಲಿ ಮನೂರ ಆಸ್ಪತ್ರೆ ವೈದ್ಯರು ಕೈ ಕತ್ತರಿಸದೇ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ.
ಕೈಯಲ್ಲಿನ ಎಲ್ಲ ಎಲಬು, ನರಗಳು ಕಟ್ ಆಗಿದ್ದವು ಒಂದು ನರ ಮಾತ್ರ ಉಳಿದಿತ್ತು. ದೇಹದ ಬೇರೆ ಅಂಗದಲ್ಲಿನ ನರ ತೆಗೆದು ಕೈಯಲ್ಲಿ ಜೋಡಿಸಲಾಗಿದೆ. ಕತ್ತರಿಸಬೇಕಿದ್ದ ಕೈ ಯನ್ನು ಉಳಿಸುವ ಮೂಲಕ ವೈದ್ಯರ ತಂಡ ಸಾಧನೆ ಮಾಡಿದೆ. ಇಂಥ ಶಸ್ತ್ರ ಚಿಕಿತ್ಸೆ ಜಿಲ್ಲೆಯಲ್ಲಿ ಇದೇ ಮೊದಲನೇಯದ್ದು ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಫಾರೂಕ್ ಮನೂರ ತಿಳಿಸಿದ್ದಾರೆ.
ಶಸ್ತ್ರ ಚಿಕಿತ್ಸೆ ಮಾಡಲು ಸುಮಾರು ಹತ್ತು ಲಕ್ಷ ರೂ. ಖರ್ಚಾಗುತ್ತಿತ್ತು. ರೋಗಿಯು ಬಡವನಾಗಿದ್ದರಿಂದ ಕೇವಲ ಒಂದು ಲಕ್ಷ ಹತ್ತು ಸಾವಿ ರೂ. ಬಿಲ್ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಕಳೆದ ಹದಿನೈದು ದಿನಗಳ ಹಿಂದೆ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಯುವಕ ಈಗ ಸಂಪೂರ್ಣ ಗುಣಮುಖನಾಗಿದ್ದಾರೆ. ಯಶಸ್ವಿ ಶಸ್ತ್ರಿ ಚಿಕಿತ್ಸೆ ತಂಡದಲ್ಲಿ ಡಾ. ಫಾರೂಕ್ ಮನೂರ, ಡಾ.ವಿವೇಕ, ಡಾ. ಅನೀಲ್ಕುಮಾರ, ಡಾ. ಪವನ್ ಪಾಟೀಲ್, ಡಾ. ಅನೀಲ್ ಪಾಲ್ಗೊಂಡಿದ್ದರು.
ಕಲಬುರಗಿ: ನಗರದ ಸಂಗಮೇಶ್ವರ ಸಭಾಗೃಹದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ವಲಯದ ವಿಭಾಗ ಮಟ್ಟದ 2ನೇ ದಾಸ ಸಾಹಿತ್ಯ ಸಮ್ಮೇಳನ…
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…