ಡಾ. ಸಿದ್ದಲಿಂಗಯ್ಯ ವ್ಯಕ್ತಿಯಲ್ಲ ಮಹಾನ್ ಶಕ್ತಿಯಾಗಿದ್ದರು: ನೀಲಕಂಠ ಬಡಿಗೇರ್

ಶಹಾಪುರ : ಸಮಾಜದಲ್ಲಿನ ಹಸಿವು, ಬಡತನ, ಅಸ್ಪೃಶ್ಯತೆ, ಅಸಮಾನತೆ,ಮೂಢನಂಬಿಕೆ ಹೋಗಲಾಡಿಸಲು ಸಾಕಷ್ಟು ಶ್ರಮವಹಿಸಿ ಜೊತೆಗೆ ಕ್ರಾಂತಿಗೀತೆಗಳ ರಚಿಸುವುದರ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದ ಡಾ. ಸಿದ್ಧಲಿಂಗಯ್ಯನವರು ಒಬ್ಬ ವ್ಯಕ್ತಿ ಇಲ್ಲದೇ ಮಹಾನ್ ಶಕ್ತಿಯಾಗಿದ್ದರು ಎಂದು ಪ್ರಗತಿಪರ ಚಿಂತಕ ನೀಲಕಂಠ ಬಡಿಗೇರ ಹೇಳಿದರು.

ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಹಮ್ಮಿಕೊಂಡಿರುವ ಇತ್ತೀಚೆಗೆ ಅಗಲಿದ ಬಂಡಾಯ ಹಾಗೂ ದಲಿತ ಸಾಹಿತಿ ಡಾ. ಸಿದ್ದಲಿಂಗಯ್ಯ ಹಾಗೂ ಕಲಬುರಗಿಯ ಹಿರಿಯ ಸಾಹಿತಿಗಳಾದ ಪ್ರೊ.ವಸಂತ ಕುಷ್ಟಗಿಯವರ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು

ಡಾ.ಸಿದ್ದಲಿಂಗಯ್ಯನವರ ಸಮಗ್ರ ಸಾಹಿತ್ಯ ಬಡವರ,ದೀನ ದಲಿತರ,ಶೋಷಿತರ ಹಿಂದುಳಿದ ಜನರ, ತುಳಿತಕ್ಕೊಳಗಾದವರ ಪರವಾಗಿ ಎಳೆಎಳೆಯಾಗಿ ಇಲ್ಲಿ ಅಕ್ಷರ ರೂಪದಲ್ಲಿ ತೆರೆದಿಟ್ಟಿದ್ದಾರೆ ಅಲ್ಲದೆ ಅವರ ಬಹುತೇಕ ಕೃತಿಗಳು ವೈಚಾರಿಕತೆಯಿಂದ ಕೂಡಿದ್ದು ಸಮಾಜದ ಏಳಿಗೆಗೆ ಅವರು ಮನಸ್ಸು ಸದಾ ತುಡಿಯುತ್ತಿರುವುದನ್ನು ನಾವಿಲ್ಲಿ ಕಾಣಬಹುದು ಎಂದು ಉಪನ್ಯಾಸಕರಾದ ಡಾ. ರವೀಂದ್ರನಾಥ್ ಹೊಸಮನಿ ಹೇಳಿದರು.

ಹಿರಿಯ ಸಾಹಿತಿ ಶಿವಣ್ಣ ಇಜೇರಿ ಮಾತನಾಡಿ ಪ್ರೊ. ವಸಂತ ಕುಷ್ಟಗಿಯವರು ಸಾಹಿತಿಗಳಾಗಿ, ಸಂಘಟಕರಾಗಿ,ವೃತ್ತಿಯಿಂದ ಪ್ರಾಧ್ಯಾಪಕರಾಗಿ ಒಳ್ಳೆಯ ಸುಸಂಸ್ಕೃತ ಮನೆತನದಿಂದ ಬಂದಂಥವರು ಸರಳ ಹಾಗೂ ಸಜ್ಜನಿಕೆಗೆ ಹೆಸರುವಾಸಿಯಾಗಿದ್ದರು ಎಂದು ಅವರನ್ನು ಗುಣಗಾನ ಮಾಡಿದರು

ಈ ಸಂದರ್ಭದಲ್ಲಿ ಹಿರಿಯ ಸಾಹಿತಿಗಳಾದ ಶ್ರೀ ಸಿದ್ಧರಾಮ ಹೊನಕಲ್,ಗುರುಬಸಯ್ಯ ಗದ್ದುಗೆ,ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಲಿಂಗಣ್ಣ ಪಡಶೆಟ್ಟಿ,ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸಿದ್ದಲಿಂಗಣ್ಣ ಆನೇಗುಂದಿ, ಬಸವರಾಜ್ ಜಿ ಹಿರೇಮಠ,ನಿವೃತ್ತ ಉಪತಹಸೀಲ್ದಾರ್ ಸಾಯಿಬಣ್ಣ ಮಡಿವಾಳಕರ್,ಶರಣಪ್ಪ ಮುಂಡಾಸ್, ದೇವಿಂದ್ರಪ್ಪ ಕನ್ಯಾಕೋಳೂರ,ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಪಂಚಾಕ್ಷರಿ ಹಿರೇಮಠ,ಬಸವರಾಜ ಸಿನ್ನೂರ ಹಾಗೂ ಇತರರು ಉಪಸ್ಥಿತರಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

7 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

9 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

10 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

10 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

10 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

10 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420