ಕಲಬುರಗಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕ್ರಿಶ್ಚಿಯನ್ ಅಭಿವೃದ್ಧಿ ಯೋಜನೆಯಡಿ ಚರ್ಚ್ ನವೀಕರಣ, ಆವರಣ ಗೋಡೆ, ಸ್ಮಶಾನ ಆವರಣ ಗೋಡೆ, ಸಮುದಾಯ ಭವನ, ಅನಾಥಾಶ್ರಮ ಹಾಗೂ ವೃದ್ಧಾಶ್ರಮಗಳಿಗೆ ಸರ್ಕಾರದಿಂದ ಅನುದಾನ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮಹೆಮೂದ್ ಎಸ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಚರ್ಚ್ಗಳ ನವೀಕರಣ/ಆವರಣ ಗೋಡೆ, ಸ್ಮಶಾನ ಆವರಣ ಗೋಡೆ ನಿರ್ಮಾಣ, ಸಮುದಾಯ ಭವನ ನಿರ್ಮಾಣ ಮತ್ತು ಕ್ರಿಶ್ಚಿಯನ್ ಸಂಘ-ಸಂಸ್ಥೆಯಿಂದ ಕಾರ್ಯನಿರ್ವಹಿಸುತ್ತಿರುವ ಅನಾಥಾಲಯ, ವೃದ್ಧಾಶ್ರಮ, ಹೆಚ್.ಐ.ವಿ./ಏಡ್ಸ್ ಸೋಂಕಿತ ವ್ಯಕ್ತಿಗಳ ಆಶ್ರಯಧಾಮ ಮತ್ತು ಮಾನಸಿಕ ಹಾಗೂ ದೈಹಿಕ ವಿಕಲಚೇತನರ ಆಶ್ರಯಧಾಮಗಳಿಗೆ ಸರ್ಕಾರದಿಂದ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಸಹಾಯ ಅನುದಾನ ನೀಡಲಾಗುತ್ತಿದ್ದು, ಈ ಯೋಜನೆ ಹಾಗೂ ಕಾರ್ಯಕ್ರಮದಡಿ ಸೌಲಭ್ಯ ಪಡೆಯಬೇಕೆಂದು ಅವರು ತಿಳಿಸಿದ್ದಾರೆ.
ನಿಗದಿತ ಅರ್ಜಿ ನಮೂನೆ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಯನ್ನು ಆಯಾ ತಾಲ್ಲೂಕಿನ ಮಾಹಿತಿ ಕೇಂದ್ರದಿಂದ ಪಡೆಯಬೇಕು. ಇಲಾಖೆಯ ವೆಬ್ಸೈಟ್http://www.gokdom.kar.nic.in ದಿಂದ ಪಡೆಯಬಹುದಾಗಿದೆ.
ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಪ್ರಸ್ತಾವನೆಯನ್ನು ಕಲಬುರಗಿ ನಗರಾಭಿವೃಧ್ಧಿ ಪ್ರಾಧಿಕಾರ ಕಟ್ಟಡದ ಮೊದಲನೇ ಮಹಡಿಯಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿಯಲ್ಲಿ ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…