ಸುರಪುರ: ಚಿಕ್ಕ ವಯಸ್ಸಿನಲ್ಲಿಯೆ ಸೇನೆಗೆ ಸೇರುವ ಮೂಲಕ ದೇಶ ಸೇವೆಗೆ ಮುಂದಾಗಿ ಹುತಾತ್ಮನಾಗಿರುವ ವೀರಯೋಧ ಶರಣಬಸವ ಕೆಂಗುರಿ ಎಲ್ಲಾ ಯುವಕರಿಗು ಮಾದರಿಯಾಗಿದ್ದಾನೆ ಎಂದು ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ಮಾತನಾಡಿದರು.
ನಗರದ ತಹಸೀಲ್ ರಸ್ತೆಯಲ್ಲಿನ ಹುತಾತ್ಮ ಯೋಧ ಶರಣಬಸವ ಕೆಂಗುರಿ ವೃತ್ತದಲ್ಲಿ ಹಮ್ಮಿಕೊಂಡಿದ್ದ ಶರಣಬಸವ ಅವರ ೯ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ,ಇಂದಿನ ಎಲ್ಲಾ ಹೆತ್ತವರು ತಮ್ಮ ಮಕ್ಕಳನ್ನು ಸೈನ್ಯಕ್ಕೆ ಸೇರಿಸುವತ್ತ ಮುಂದಾಗಬೇಕು,ದೇಶಪ್ರೇಮ ಎನ್ನುವುದು ಕೇವಲ ಬಾಯಿ ಮಾತಾಗದೆ ಯುವಕರು ಸೇನೆಗೆ ಸೇರುವತ್ತ ಗಮನಹರಿಸಬೇಕೆಂದು ಅಭಿಪ್ರಾಯಪಟ್ಟರು.
ನಂತರ ಗೃಹರಕ್ಷಕ ದಳದ ಕಂಪನಿ ಕಮಾಂಡರ ಯಲ್ಲಪ್ಪ ಹುಲಿಕಲ್ ಮಾತನಾಡಿ,ಶರಣಬಸವ ನಮ್ಮ ಗೃಹರಕ್ಷಕ ದಳದಲ್ಲಿ ಸೇವೆ ಸಲ್ಲಿಸಿ ನಂತರ ಸೇನೆಗೆ ಸೇರುವ ಮೂಲಕ ನಮ್ಮ ಗೃಹರಕ್ಷಕ ದಳಕ್ಕೆ ಗೌರವ ತಂದಿದ್ದರು,ಅಂತಹ ಒಬ್ಬ ಹುತಾತ್ಮ ಯೋಧ ನಮ್ಮೊಂದಿಗೆ ಸೇವೆಯಲ್ಲಿ ಭಾಗವಹಿಸಿದ್ದು ನಮಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ನೆನಪಿಸಿಕೊಂಡರು.
ಕಾರ್ಯಕ್ರಮದ ಆರಂಭದಲ್ಲಿ ವೀರಯೋಧನ ಪುತ್ಥಳಿಗೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ನಮಿಸಲಾಯಿತು.ಈ ಸಂದರ್ಭದಲ್ಲಿ ಯೋಧ ಶರಣಬಸವನ ತಂದೆ ಹಯ್ಯಾಳಪ್ಪ ಕೆಂಗುರಿ ಅಧಿಕಾರಿಗಳಾದ ವೆಂಕಟೇಶ್ವರ ಸುರಪುರ ರಮೇಶ ಅಂಬುರೆ ಭೀಮರಾಯ ಹುಲಿಕಲ್ ಮಲ್ಲಿಕಾರ್ಜುನ ಗುಡಗುಂಟಿ ಮಾನಯ್ಯ ನಾಯಕ ಬುಡ್ಡಪ್ಪ ಚವಲ್ಕರ್ ಶರಣು ಯಾದಗಿರ ವೀರಪ್ಪ ಸೂಗುರು ಚಂದ್ರು ದೊಡ್ಮನಿ ದೀವಳಗುಡ್ಡ ಸೇರಿದಂತೆ ಗೃಹರಕ್ಷಕ ದಳದ ಸಿಬ್ಬಂದಿಗಳಿದ್ದರು.
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…
ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…