ಭೂ ಸುಧಾರಣೆ ಕಾಯ್ದೆ ಮತ್ತು ದೇವರಾಜ ಅರಸೂ: ಬದಲಾವಣೆಯ ಹರಿಕಾರನಾದದ್ದೂ

ದೇವರಾಜ ಅರಸು ಭೂ ಸುಧಾರಣೆಯ ಶಾಸನ ರಚನೆ ಮಾಡುವ, ಜಾರಿಗೆ ತರುವ, ವಿಧಾನಮಂಡಲದಲ್ಲಿ ಈ ಶಾಸನವನ್ನು ಮಂಡಿಸುವ ಮಹತ್ವದ ಜವಾಬ್ದಾರಿಯನ್ನು ಅಂದಿನ ಕಂದಾಯ ಸಚಿವ ಹುಚ್ಚಮಾಸ್ತಿಗೌಡರಿಗೆ ವಹಿಸಿಕೊಟ್ಟರು. ಭೂ ಸುಧಾರಣೆ ಖಾತೆ ಮಂತ್ರಿ ಸುಬ್ಬಯ್ಯ ಶೆಟ್ಟರನ್ನು ಜಂಟಿ ಸಮಿತಿಗೆ ನೇಮಕ ಮಾಡಿದರು. ಜೆ.ಎಚ್.ಪಟೇಲ್ ರಂತಹ ಬಹುದೊಡ್ಡ ಜಮೀನ್ದಾರರು ಅರಸು ಬೆಂಬಲಕ್ಕಿದ್ದರು.

ಅಲ್ಲಿಗೆ ಭೂ ಮಾಲೀಕರಾದ ಒಕ್ಕಲಿಗರು, ಕರಾವಳಿಯ ಬಂಟರು ಮತ್ತು ಲಿಂಗಾಯತರು ಅರಸು ಅವರ ಪರ ನಿಂತಂತಾಯಿತು. ಅದೆಲ್ಲಕ್ಕಿಂತ ಹೆಚ್ಚಾಗಿ ಬಹುಸಂಖ್ಯಾತ ಬಡವರು, ಭೂರಹಿತರು ಅರಸರ ಬೆನ್ನಿಗಿದ್ದರು. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಬಹುಮತ ಗೇಣಿದಾರರ ಪರವಾಯಿತು, ಸೋಲು ಭೂ ಮಾಲೀಕರದ್ದಾಯಿತು.

ಮತ್ತೊಂದು ಮುಖ್ಯವಾದ ಗಮನಿಸಲೇಬೇಕಾದ ಅಂಶವೆಂದರೆ, ಭೂ ಶಾಸನ ಮಸೂದೆಯನ್ನು ಬಹಳ ಪ್ರಮುಖವಾಗಿ ಕೋರ್ಟ್ ಗಳ ವ್ಯಾಪ್ತಿಯಿಂದ ಹೊರಗಿಟ್ಟು ಶಾಸನಸಭೆ ತೀರ್ಮಾನಿಸಿತ್ತು. ಕಾಯ್ದೆಯನ್ನು ಜಾರಿಗೆ ತರುವಾಗ ಹಿಂದುಳಿದ ವರ್ಗಗಳ ವರ್ಗೀಕರಣ, ಅರ್ಹರನ್ನು ಆಯ್ಕೆ ಮಾಡಲು ತಾಲೂಕು ಮಟ್ಟದಲ್ಲಿ ಭೂ ನ್ಯಾಯಮಂಡಳಿ ರಚಿಸಲಾಗಿತ್ತು. ಮಂಡಳಿಯಲ್ಲಿ ಸ್ಥಳೀಯ ಶಾಸಕರು, ಹಿಂದುಳಿದ ವರ್ಗದವರೊಬ್ಬರು, ಎಸ್ಸಿ-ಎಸ್ಟಿ ವರ್ಗದವರೊಬ್ಬರು, ಗೇಣಿದಾರ ರೈತರೊಬ್ಬರು ಸದಸ್ಯರಾಗಿರಬೇಕೆಂದು ಕಡ್ಡಾಯ ಮಾಡಿದ್ದಲ್ಲದೇ, ಭೂಮಾಲೀಕ ಮೇಲಿನ ಕೋರ್ಟಿಗೆ ಹೋಗದಂತೆ ಭೂ ನ್ಯಾಯಮಂಡಳಿ ತೀರ್ಮಾನವೇ ಅಂತಿಮ ಎಂಬ ಆದೇಶವನ್ನು ಹೊರಡಿಸಿ, ಗೇಣಿದಾರರನ್ನು ರಕ್ಷಿಸುವ ಕೆಲಸವೂ ನಡೆದಿತ್ತು. ಇದರ ಫಲವಾಗಿ 7,80,000ಕ್ಕಿಂತ ಹೆಚ್ಚು ಬಡ ಗೇಣಿದಾರರು ಭೂ ಮಾಲೀಕರಾದರು. ಇದು ದೇಶದ ಯಾವ ರಾಜ್ಯದಲ್ಲೂ ಆಗದ ಮತ್ತು ಕರ್ನಾಟಕದಲ್ಲಿ ಮಾತ್ರ ಸಾಧ್ಯವಾದ ಕ್ರಾಂತಿಕಾರಕ ಕಾಯ್ದೆಯ ಫಲ.

ಸಮಾಜಿಕ ಬದಲಾವಣಿಯ ಹರಿಕಾರ ದೇವರಾಜ ಅರಸು..!–

70ರ ದಶಕದಲ್ಲಿ ಹಳ್ಳಿಗಳಲ್ಲಿ ಜಮೀನ್ದಾರಿ ಪದ್ಧತಿ ಚಾಲ್ತಿಯಲ್ಲಿತ್ತು. ನೂರಾರು ಎಕರೆ ಭೂಮಿಯುಳ್ಳ ಜಮೀನ್ದಾರರು, ಶ್ರೀಮಂತಿಕೆಯ ಮದದ ಜೊತೆಗೆ ಜಾತಿ ಬಲದೊಂದಿಗೆ ದೌರ್ಜನ್ಯ, ದಬ್ಬಾಳಿಕೆಯಿಂದ ಮೆರೆಯುತ್ತಿದ್ದರು. ಅಧಿಕಾರವರ್ಗ ಕೂಡ ಇವರ ಪರವೇ ಇತ್ತು. ಭೂರಹಿತ ಬಡವರು ಅಸಹಾಯಕತೆಯಿಂದ ನಲುಗಿಹೋಗಿದ್ದರು. ಆದರೆ ದೇವರಾಜ ಅರಸರ ಚಿಂತನಾ ಕ್ರಮಗಳೇ ಬೇರೇಯಾಗಿತ್ತು.

’ಉಳುವವನೆ ಹೊಲದೊಡೆಯ’ ಎಂಬ ಘೋಷವಾಕ್ಯದೊಂದಿಗೆ ಭೂ ಸುಧಾರಣಾ ಕಾಯ್ದೆಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ಸಮಿತಿ ರಚನೆ, ಚರ್ಚೆ, ಕಾನೂನಾತ್ಮಕ ಕ್ರಮಗಳ ಮೂಲಕ ಹೇಳಿದ್ದನ್ನು ಮಾಡಿ ತೋರಿಸಿದರು. ಕಾಯ್ದೆ ಜಾರಿಗೆ ತಂದು, ಬಡವರಿಗೆ ಭೂಮಿಯ ಒಡೆತನ ನೀಡುವ ಮೂಲಕ ದನಿ ಮತ್ತು ಧೈರ್ಯ ನೀಡಿದರು.

ಭೂ ಒಡೆತನ ಎನ್ನುವುದು ಬಡವರಿಗೆ ಸಮಾಜದಲ್ಲಿ ಸ್ಥಾನಮಾನ ತಂದುಕೊಟ್ಟಿತು. ಆರ್ಥಿಕ ಸ್ಥಿತಿಗತಿಯನ್ನು ಸುಧಾರಿಸಿತು. ಸ್ವಾಭಿಮಾನದಿಂದ ಬದುಕುವ ವಾತಾವರಣವನ್ನು ಸೃಷ್ಟಿಸಿತು. ಆ ಮೂಲಕ ದೇವರಾಜ ಅರಸರು ಸಮಾಜದಲ್ಲಿ ಚಾಲ್ತಿಯಲ್ಲಿದ್ದ ಶ್ರೀಮಂತ-ಬಡವ ಎಂಬ ತಾರತಮ್ಯವನ್ನು ಹೊಡೆದುಹಾಕಿದರು.

ಕಾಯ್ದೆ ಜಾರಿಗೆ ತರುವಲ್ಲಿ ಅರಸು ತೋರಿದ ಇಚ್ಛಾಶಕ್ತಿ, ಜನರಲ್ಲಿ ನಂಬಿಕೆ ಹುಟ್ಟಿಸಿತು. ಬಡವರು ಸಹಜವಾಗಿಯೇ ಅರಸರನ್ನು ನಂಬಿದರು, ಬೆಂಬಲಿಸಿದರು. ಸಾಮಾಜಿಕ ಬದಲಾವಣೆಯ ಹರಿಕಾರ ಎಂಬ ಬಿರುದನ್ನೂ ಕೊಟ್ಟರು.

# ಕೃಪೆ– ಬಸುವರಾಜು

# ಕೆ.ಶಿವು.ಲಕ್ಕಣ್ಣವರ

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

3 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

19 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

21 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

21 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

21 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420