ಬಿಸಿ ಬಿಸಿ ಸುದ್ದಿ

ಪತ್ರಕರ್ತರ ಬೇಡಿಕೆಗಳನ್ನು ಈಡೇರಿಸುವೆನು: ಶಾಸಕ ರಾಜುಗೌಡ

ಸುರಪುರ: ಪತ್ರಕರ್ತರ ಯಾವುದೇ ಬೇಡಿಕೆಗಳಿದ್ದರು ಅವುಗಳನ್ನು ಈಡೇರಿಸುವ ಕೆಲಸ ಮಾಡುವೆನು ಎಂದು ಕರ್ನಾಟಕ ನಗರ ನೀರು ಸರಬರಾಜು ಮಂಡಳಿ ಅಧ್ಯಕ್ಷರು ಹಾಗು ಶಾಸಕ ರಾಜುಗೌಡ ತಿಳಿಸಿದರು.

ನಗರದ ತಮ್ಮ ನಿವಾಸದಲ್ಲೀ ಭೇಟಿ ಮಾಡಿದ ಕರ್ನಾಟಕ ಜರ್ನಲಿಸ್ಟ್ಸ್ ಯೂನಿಯನ್ ವತಿಯಿಂದ ಸಲ್ಲಿಸಿದ ಮನವಿಯನ್ನು ಸ್ವೀಕರಿಸಿ ಮಾತನಾಡಿ,ಪತ್ರಿಕಾ ಭವನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.ಅಲ್ಲದೆ ಕೆಜೆಯು ಸಂಘಟನೆಯ ಕಾರ್ಯಾಲಯಕ್ಕೆ ಕೋಣೆಯನ್ನು ಒದಗಿಸುವಂತೆ ಸಲ್ಲಿಸಿದ ಮನವಿಗೆ ಸೂಕ್ತವಾಗಿ ಸ್ಪಂಧಿಸಿ,ನಿಮ್ಮ ಮನವಿಯನ್ನು ಪುರಸ್ಕರಿಸಿ ಶೀಘ್ರದಲ್ಲಿಯೆ ತಮಗೆ ಕಾರ್ಯಾಲಯಕ್ಕೆ ಕೋಣೆಗಳ ಒದಗಿಸುವುದಾಗಿ ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ಕೆಜೆಯು ತಾಲೂಕು ಅಧ್ಯಕ್ಷ ರಾಜು ಕುಂಬಾರ ಮಾತನಾಡಿ,ತಾವು ನಮ್ಮ ಕೆಜೆಯು ಮನವಿಗೆ ಸ್ಪಂಧಿಸಿ ಕಳೆದ ವರ್ಷದ ಕೋವಿಡ್ ಸಂದರ್ಭದಲ್ಲಿ ಮೃತರಾಗಿದ್ದ ಮೂವರು ಪತ್ರಕರ್ತರಿಗೆ ವೈಯಕ್ತಿಕವಾಗಿ ತಲಾ ೫೦ ಸಾವಿರ ರೂಪಾಯಿಗಳ ನೆರವು ನೀಡುವ ಜೊತೆಗೆ ಸರಕಾರದಿಂದಲೂ ಮುಖ್ಯಮಂತ್ರಿಗಳಿಗೆ ಮನವಿ ಮಾಡಿ ತಲಾ ಮೂರು ಲಕ್ಷ ರೂಪಾಯಿಗಳ ಪರಿಹಾರ ಕೊಡಿಸುವಲ್ಲಿ ತಾವು ತೋರಿದಿ ಪತ್ರಕರ್ತರೆಡೆಗಿನ ಕಾಳಜಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

ನಂತರ ಕೆಜೆಯುನ ಬೇಡಿಕೆಗಳುಳ್ಳ ಮನವಿಯನ್ನು ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಕೆಜೆಯು ತಾಲೂಕು ಉಪಾಧ್ಯಕ್ಷ ಮಲ್ಲು ಗುಳಗಿ ಪ್ರಧಾನ ಕಾರ್ಯದರ್ಶಿ ಪರಶುರಾಮ ಮಲ್ಲಿಬಾವಿ ಖಜಾಂಚಿ ಮಹಾದೇವಪ್ಪ ಬೊಮ್ಮನಹಳ್ಳಿ ಮನಮೋಹನ ಪ್ರತಿಹಸ್ತ ಪುರುಷೋತ್ತಮ ದೇವತ್ಕಲ್ ಕಲೀಂ ಫರೀದಿ ಮುರುಳಿಧರ ಅಂಬುರೆ ಮದನಲಾಲ ಕಟ್ಟಿಮನಿ ಶ್ರೀಮಂತ ಛಲುವಾದಿ.

emedialine

Recent Posts

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ದೊಡ್ಡಮನಿ ನಿಧನ

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…

2 hours ago

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

14 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

16 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

16 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

16 hours ago

ಮಹಿಳಾ ಘಟಕದ ನೂತನ ಪದಾಧಿಕಾರಿಗಳ ನೇಮಕ

ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…

17 hours ago