ಕೊರೊನಾ ವಾರಿಯರ್ಸ್‌ಗೆ ಸತ್ಕರಿಸಿ ಸೂಗುರೇಶ ವಾರದ ಜನುಮ ದಿನಾಚರಣೆ

ಸುರಪುರ: ಕೊರೊನಾ ವಾರಿಯರ್ಸ್‌ಗೆ ಸನ್ಮಾನಿಸಿ ಗೌರವಿಸುವ ಜೊತೆಗೆ ದಿನಸಿ ಕಿಟ್‌ಗಳನ್ನು ವಿತರಿಸುವ ಮೂಲಕ ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸೂಗುರೇಶ ವಾರದ ತಮ್ಮ ಜನುಮ ದಿನವನ್ನು ಆಚರಿಸಿಕೊಂಡರು.

ನಗರದ ಮರಗಮ್ಮ ದೇವಸ್ಥಾನದ ಆವರಣದಲ್ಲಿ ನಡೆದ ಜನುಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಯುವ ಮುಖಂಡ ರಾಜಾ ಶುಶಾಂತ ನಾಯಕ ಮಾತನಾಡಿ,ಕೊರೊನಾ ವಾರಿಯರ್ಸ್‌ಗಳಾಗಿ ಆಶಾ ಕಾರ್ಯಕರ್ತೆಯರ ಸೇವೆ ಅಮೋಘವಾಗಿದೆ.ಜೀವದ ಹಂಗನ್ನು ತೊರೆದು ಹಗಲಿರಳು ಸೇವೆ ಮಾಡಿದ ಆಶಾ ಕಾರ್ಯಕರ್ತೆಯರನ್ನು ಗುರುತಿಸಿ ಅವರಿಗೆ ಸನ್ಮಾನಿಸಿ ಗೌರವಿಸುವ ಜೊತೆಗೆ ದಿನಸಿ ಕಿಟ್‌ಗಳನ್ನು ವಿತರಿಸುವ ಮೂಲಕ ಸೂಗುರೇಶ ವಾರದ ಅವರು ಜನುಮ ದಿನ ಆಚರಿಸಿಕೊಂಡಿರುವುದು ಇತರರಿಗೆ ಮಾದರಿಯಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಸೂಗುರೇಶ ವಾರದ ಮಾತನಾಡಿ,ಅದ್ಧೂರಿಯಾಗಿ ಜನುಮ ದಿನ ಆಚರಿಸಿಕೊಳ್ಳುವ ಬದಲು ಬಡ ಜನರಿಗೆ ನೆರವಾಗುವುದರಲ್ಲಿ ತುಂಬಾ ಸಂತೋಷವಿದೆ.ಆದ್ದರಿಂದ ಇಂದು ೫೦ ಕುಟುಂಬಗಳಿಗೆ ಆಹಾರ ಧಾನ್ಯಗಳ ಕಿಟ್ ವಿತರಿಸಿರುವುದು ಹಾಗು ಆಶಾ ಕಾರ್ಯಕರ್ತೆಯರ ಸೇವೆಗೆ ಗೌರವಿಸಿವುದು ಎಲ್ಲರ ಕರ್ತವ್ಯ ಎಂದು ಭಾವಿಸಿ ಸನ್ಮಾನಿಸಿ ಗೌರವಿಸಿರುವುದಾಗಿ ತಿಳಿಸಿದರು.ಇದೇ ಸಂದರ್ಭದಲ್ಲಿ ಅನೇಕ ಆಶಾ ಕಾರ್ಯಕರ್ತೆಯರು ಮಾತನಾಡಿ ಸೂಗುರೇಶ ವಾರದ ಅವರ ಸೇವೆಗೆ ಧನ್ಯವಾದ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಮಂಜುನಾಥ ಗುಳಗಿ ಮುಖೀದ ಕುಂಡಾಲೆ ಬಸ್ಸಯ್ಯಸ್ವಾಮಿ ಬೋನ್ಹಾಳ ಮಂಜುನಾಥಸ್ವಾಮಿ ತಿಮ್ಮಾಪುರ ಮಲ್ಲು ಖಾದಿ ಮಂಜುಳಾ ಈರಪ್ಪ ಸಜ್ಜನ್ ನಾಗರತ್ನಾ ನಾಗಲಿಕರ್ ಸೇರಿದಂತೆ ಅನೇಕರಿದ್ದರು.

emedialine

Recent Posts

ಎಲೇಕ್ಷನ್’ನಲ್ಲಿ ಗಿಮಿಕ್ ಮಾಡಿ ಮತಪಡೆದುಕೊಳ್ಳುವುದು ಮಾತ್ರ ಗೊತ್ತು; ಮಣಿಕಂಠ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…

36 seconds ago

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

4 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

20 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

21 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420