ಸುರಪುರ ಟ್ರ್ಯಾಕ್ಟರ್,ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.
ಹುಣಸಗಿ ತಾಲ್ಲೂಕಿನ ಕನಗಂಡನಹಳ್ಳಿ ಕ್ರಾಸ್ ಹತ್ತಿರ ಈ ಘಟನೆ ನಡೆದಿದ್ದು, ಅಪಘಾತದಲ್ಲಿ ಯಲ್ಲಪ್ಪ ಸಾಲೋಡಗಿ (17) ಎಂಬ ಯುವಕ ಸಾವನ್ನಪ್ಪಿದ್ದಾನೆ. ಹುಣಸಗಿ ತಾಲ್ಲೂಕಿನ ಮಂಜಲಾಪುರ ಹಳ್ಳಿ ಗ್ರಾಮದ ನಿವಾಸಾದ ಯಲ್ಲಪ್ಪ ಸಾಲೋಡಗಿ ಇಂದು ಮುಂಜಾನೆ ಮನೆಯಿಂದ ಬೈಕ್ ಹತ್ತಿ ಹೋಗಿದ್ದಾನೆ, ಮದ್ಹ್ಯಾನದ ವೇಳೆಗೆ ಅಪಘಾತ ಸಂಭವಿಸಿದ್ದು ಸ್ಥಳದಲ್ಲಿಯೆ ಸಾವನ್ನಪ್ಪಿದ್ದಾನೆ.
ವಿಷಯ ತಿಳಿದು ಹುಣಸಗಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಮೃತದೇಹವನ್ನು ಹುಣಸಗಿ ಸರ್ಕಾರಿ ಆಸ್ಪತ್ರೆಗೆರವಾನಿಸಲಾಗಿದೆ.ವಿಷಯ ತಿಳಿದು ಮೃತನ ಸಂಬಂಧಿಕರು ಹುಣಸಗಿ ಆಸ್ಪತ್ರೆಗೆ ಆಗಮಿಸಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಈ ಕುರಿತು ಹುಣಸಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹುಣಸಗಿ ಠಾಣೆ ಸಿಪಿಐ ದೌಲತ್ ಎನ್.ಕೆ ತಿಳಿಸಿದ್ದಾರೆ.
ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…
ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…
ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…
ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…
ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…
ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…