ಶಹಾಬಾದ:ನಗರದ ಇಎಸ್ಐ ಆಸ್ಪತ್ರೆಗೆ ಮಂಗಳವಾರ ಗಣಿ ಮತ್ತು ಭೂ ವಿಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ.ಆರ್.ನಿರಾಣಿ ಅವರು ಬೇಟಿ ನೀಡಿ ಆಸ್ಪತ್ರೆಯಲ್ಲಿ ನಡೆಯುತ್ತಿರುವ ನವೀಕರಣ ಕಾರ್ಯವನ್ನು ವೀಕ್ಷಿಸಿದರು.
ಆಸ್ಪತ್ರೆಯ ನೆಲಮಹಡಿ, ಮೇಲ್ ಮಹಡಿ ಸೇರಿದಂತೆ ಎಲ್ಲಾ ಕಡೆಗಳಲ್ಲಿ ಸುತ್ತಾಡಿ ನಡೆಯುತ್ತಿರುವ ಕಾಮಗಾರಿಯನ್ನು ಪರಿಶೀಲಿಸಿದರು. ನಂತರ ಕಾಮಗಾರಿಯ ಬಗ್ಗೆ ಲೋಕೋಪಯೋಗಿ ಇಲಾಖೆಯ ಕಾರ್ಯಾನಿರ್ವಾಹಕ ಅಭಿಯಂತರ ಕೃಷ್ಣ ಅಗ್ನಿಹೋತ್ರಿ ಅವರಲ್ಲಿ ಮಾಹಿತಿ ಕೇಳಿದರು.
ಈಗಾಗಲೇ ನವೀಕರಣ ಕಾರ್ಯ ೭೦% ಕಾರ್ಯ ಕೈಗೊಳ್ಳಲಾಗಿದೆ. ನೆಲ ಮಹಡಿ ಹಾಗೂ ಮೇಲಮಹಡಿಯಲ್ಲಿ ಕಾಂಕ್ರೇಟ್ ಬೆಡ್ ಹಾಕಿ ಗ್ರೈನೇಟ್ ನೆಲ ಹಾಸಿಗೆ ಸಂಪೂರ್ಣ ಹಾಕಲಾಗಿದೆ.ಕೋಣೆಗಳಲ್ಲಿನ ನೆಲಹಾಸಿಗೆಯೂ ಹಾಕಲಾಗಿದೆ. ವಿದ್ಯುತ್ತೀಕರಣ ಕಾರ್ಯವೂ ಬಹುತೇಖ ಮುಗಿಯಲು ಬಂದಿದೆ. ಪೆಂಟಿಂಗ್, ಕಂಪೌಂಡ ಗೋಡೆ, ಕಿಟಕಿಗಳನ್ನು ಕೂಡಿಸುವುದು, ರಸ್ತೆ ನಿರ್ಮಾಣ ಕಾರ್ಯ ಕೈಗೊಳ್ಳಬೇಕಾಗಿದೆ ಎಂದು ಮಾಹಿತಿ ಒದಗಿಸಿದರು.
ನಂತರ ಮಾತನಾಡಿದ ಗಣಿ ಮತ್ತು ಭೂ ವಿಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ.ಆರ್.ನಿರಾಣಿ ಅವರು ಇನ್ನೂ ಉಳಿದಿರುವ ೩೦% ಕಾರ್ಯವನ್ನು ಆದಷ್ಟು ತೀವ್ರಗೊಳಿಸಿ ಮುಗಿಸಿದರೇ, ಜುಲೈ ೭ ರಂದು ಕಟ್ಟಡವನ್ನು ವೀಕ್ಷಿಸಲು ಮುಖ್ಯಮಂತ್ರಿ ಯಡಿಯೂರಪ್ಪನವರು ಕರೆತರುತ್ತೆನೆ. ಜಿಲ್ಲೆಗೆ ೧೦ ಅಂಬುಲೆನ್ಸ್ ಹಾಗೂ ೨೦ ಅತ್ಯಾಧುನಿಕ ವೆಂಟಿಲೇಟರ್ ಬರುತ್ತಿದ್ದು, ಅದರಲ್ಲಿ ವೆಂಟಿಲೇಟರ್ಗಳನ್ನು ಹಾಗೂ ಒಂದು ಅಂಬುಲೆನ್ಸ್ ತಾಲೂಕಾಗೆ ನೀಡಲಾಗುವುದು.ಕುಡಿಯುವ ನೀರು, ಡಾಕ್ಟರ್ ಹಾಗೂ ಸಿಬ್ಬಂದಿಗಳ ಕೋಣೆಗಳನ್ನು ದುರಸ್ತಿಗೊಳಿಸಿ ನವೀಕರಿಸಿ, ಅದಕ್ಕೆ ಬೇಕಾದ ಅನುದಾನವನ್ನು ಒದಗಿಸಲಾಗುತ್ತದೆ.ಆಸ್ಪತ್ರೆಯ ಮುಂಭಾಗದ ವಿನ್ಯಾಸ ಮಾತ್ರ ನೀಲನಕ್ಷೆಯಲ್ಲಿರುವಂತೆ ಆಗಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.ಅಲ್ಲದೇ ಸದ್ಯದಲ್ಲೇ ಉದ್ಘಾಟನೆಯ ದಿನಾಂಕವನ್ನು ತಿಳಿಸಲಾಗುವುದೆಂದು ಹೇಳಿದರು.
ಎನ್ಇಕೆಆರಟಿಸಿ ಅಧ್ಯಕ್ಷರಾದ ರಾಜಕುಮಾರ ಪಾಟೀಲ ತೇಲ್ಕೂರ್, ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮಡು, ವಿಧಾನ ಪರಿ?ತ್ ಸದಸ್ಯ ಬಿ.ಜಿ.ಪಾಟೀಲ, ಚಿಂಚೋಳಿ ಶಾಸಕ ಅವಿನಾಶ ಜಾಧವ, ಕೃ? ಕಾಡಾ ಅಧ್ಯಕ್ಷ ಶರಣಪ್ಪ ತಳವಾರ, ನಗರ ಪ್ರಾಧಿಕಾರದ ಅಧ್ಯಕ್ಷ ಕನಕಪ್ಪ ದಂಡಗುಲಕರ್, ಬಿಜೆಪಿ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ಎಸಿ ರಮೇಶ ಕೋಲಾರ, ತಹಸೀಲ್ದಾರ ಸುರೇಶ ವರ್ಮಾ, ನಗರಸಭೆಯ ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ, ಅಧಿಸೂಚಿತ ಕ್ಷೇತ್ರ ಸಮಿತಿಯ ಅಧಿಕಾರಿ ಪೀರಶೆಟ್ಟಿ, ನಗರಸಭೆಯ ಮಾಜಿ ಅಧ್ಯಕ್ಷ ಗಿರೀಶ ಕಂಬಾನೂರ, ಸ್ಥಾಯಿ ಸಮಿತಿ ಅಧ್ಯಕ್ಷ ತಿಪ್ಪಣ್ಣ ನಾಟೇಕಾರ, ನಗರಸಭೆಯ ಸದಸ್ಯರಾದ ರವಿ ರಾಠೋಡ, ರಜನಿಕಾಂತ ಕಂಬಾನೂರ, ಸೂರ್ಯಕಾಂತ ಕೋಬಾಳ,ನಿಂಗಣ್ಣ ಹುಳಗೋಳಕರ್, ನಾಗರಾಜ ಮೇಲಗಿರಿ, ,ಭೀಮಯ್ಯ ಗುತ್ತೆದಾರ, ವಿರೇಶ ಬಂದಳ್ಳಿ, ಮಹಾದೇವ ಗೊಬ್ಬೂರಕರ್,ಕಾಶಣ್ಣ ಚನ್ನೂರ್, ದೇವೆಂದ್ರಪ್ಪ ಯಲಗೋಡಕರ್, ಸಂಜಯ ಸೂಡಿ, ಸಿದ್ರಾಮ ಕುಸಾಳೆ, ಬಸವರಾಜ ಬಿರಾದಾರ, ಕಂದಾಯ ಅಧಿಕಾರಿ ವೀರಭದ್ರಪ್ಪ, ಗ್ರಾಮಲೆಕ್ಕಿಗ ಶಿವಾನಂದ್ ಹೂಗಾರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…