ಕಲಬುರಗಿ: ಮಹಾಮಾರಿ ಕೊರೊನಾ ವೈರಸ್ ತಡೆಗಟ್ಟಲು ಎಲ್ಲರೂ ಮಾಸ್ಕ್ ಧರಿಸಿಕೊಳ್ಳಿ. ಜನರಿಗೂ ತಿಳುವಳಿಕೆಯಿದ್ದರೂ ಸಾಮಾಜಿಕ ಅಂತರ ಮರೆತು ಮಾಸ್ಕ್ ಧರಿಸದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಇದರಿಂದ ಕೊರೊನಾಕ್ಕೆ ಮತ್ತೆ ಆಹ್ವಾನಕ್ಕೆ ದಾರಿ ಮಾಡಿಕೊಟ್ಟಂತೆ ಆಗುತ್ತದೆ. ಆರೋಗ್ಯ ಭಾಗ್ಯಕ್ಕಿಂತ ದೊಡ್ಡ ಭಾಗ್ಯ ಇನ್ನೊಂದಿಲ್ಲ. ಆರೋಗ್ಯದಿಂದ ಇದ್ದಾಗ ಮಾತ್ರ ಮತ್ತೊಂದು ಮಾಡಲು ಸಾಧ್ಯ ಎಂಬ ಅರಿವು ಜನರು ಮನದಟ್ಟು ಮಾಡಿಕೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಹೇಳಿದರು.
ನಗರದ ವಿಶ್ವೇಶ್ವರಯ್ಯ ಭವನದಲ್ಲಿ ದಿ ಇನ್ಸಟ್ಯೂಟ್ ಆಫ್ ಇಂಜಿನಿಯರ್ ಇಂಡಿಯಾ, ವಿಶ್ವಜ್ಯೋತಿ ಪ್ರತಿಷ್ಠಾನ, ನಾಲ್ಕು ಚಕ್ರ ಚಾರಿಟೇಬಲ್ ಟ್ರಸ್ಟ್, ಛಪ್ಪರಬಂದಿ ಫೌಂಡೇಷನ್ ಇವುಗಳ ಸಂಯುಕ್ತಾಶ್ರಯದಲ್ಲಿ ಬುಧವಾರ ಹಮ್ಮಿಕೊಂಡ ಕೋವಿಡ್ ಲಸಿಕೆ ಶಿಬಿರ ಮತ್ತು ಕೊರೊನಾ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಾಂಸ್ಕೃತಿಕ ಸಂಘಟಕ ವಿಜಯಕುಮಾರ ತೇಗಲತಿಪ್ಪಿ ಮಾತನಾಡಿ, ಕೊರೊನಾ ಕುರಿತು ಯಾರೂ ಭಯ ಪಡುವ ಅಗತ್ಯವಿಲ್ಲ. ಮುನ್ನೆಚ್ಚರಿಕೆ ಕ್ರಮ ಅನುಸರಿಸುವ ಮೂಲಕ ಈ ರೋಗದ ವಿರುದ್ಧ ಪ್ರತಿಯೊಬ್ಬರೂ ಹೋರಾಡಬೇಕು. ಈ ನಿಟ್ಟಿನಲ್ಲಿ ಸರ್ಕಾರದ ಜತೆಗೆ ನಮ್ಮ ವಿಶ್ವಜ್ಯೋತಿ ಪ್ರತಿಷ್ಠಾನ, ನಾಲ್ಕು ಚಕ್ರ ಚಾರಿಟೇಬಲ್ ಟ್ರಸ್ಟ್, bಪ್ಪರಬಂದಿ ಫೌಂಡೇಷನ್ಗಳು ಈ ಕೊರೊನಾ ವಿರುದ್ಧ ವಿವಿಧ ರೀತಿಯ ನಿರಂತರ ಹೋರಾಟ ಮಾಡುತ್ತಿದೆ ಎಂದರು.
ಇಂಜೀನಿಯರ್ ಅಸೋಶಿಯೇಷನ್ ಕಾರ್ಯದರ್ಶಿ ಡಾ.ಬಾಬುರಾವ ಶೇರಿಕಾರ ಮಾತನಾಡಿ, ಕಿಲ್ಲರ್ ಕೊರೊನಾ ವೈರಸ್ನಿಂದ ರಕ್ಷಿಸಿಕೊಳ್ಳಲು ನಾವೆಲ್ಲರೂ ಸರ್ಕಾರ ಸೂಚಿಸಿರುವ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕಿದೆ ಎಂದರು.
ಅಸೋಸಿಯೇಷನ್ ಅಧ್ಯಕ್ಷ ಬಿ.ಎಸ್.ಮೋರೆ ಅಧ್ಯಕ್ಷತೆ ವಹಿಸಿದ್ದರು. ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಬಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಎಂಎಲ್ಸಿಗಳಾದ ಶಶೀಲ್ ಜಿ.ನಮೋಶಿ, ಬಿ.ಜಿ. ಪಾಟೀಲ, ಶಾಸಕ ಡಾ.ಅವಿನಾಶ ಜಾಧವ, ಕಾಡಾ ಅಧ್ಯಕ್ಷ ಶರಣಪ್ಪ ತಳವಾರ, ನಗರ ಪೊಲೀಸ್ ಆಯುಕ್ತ ಡಾ.ವೈ.ಎಸ್.ರವಿಕುಮಾರ, ಡಿಎಚ್ಓ ಡಾ.ಶರಣಬಸಪ್ಪ ಗಣಜಲಖೇಡ, ಮಾಜಿ ಸಿಂಡಿಕೇಟ್ ಸದಸ್ಯ ರಾಘವೇಂದ್ರ ಕುಲಕರ್ಣಿ, ಬಿಜೆಪಿ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಸಂಘಟಕರಾದ ಶರಣರಾಜ್ ಛಪ್ಪರಬಂದಿ, ಮಾಲಾ ದಣ್ಣೂರ, ಮಾಲಾ ಕಣ್ಣಿ, ಕಲ್ಯಾಣರಾವ ಪಾಟೀಲ, ಮಹೇಶ ಪಾಟೀಲ ಕಣ್ಣಿ, ಆರೋಗ್ಯ ಇಲಾಖೆಯ ಡಾ.ಸುನೀಲ ಶೇರಿಕಾರ, ಡಾ.ಸಿದ್ದು ಮಾನಕರ್, ಕಾಪ್ಪ ವಾಂಜರಖೇಡೆ, ಸುಭಾಷ ಸೂಗುರು, ಎಂ.ಎಂ.ಕಾಡಾದಿ, ಕಾಶಿನಾಥ ಬೀದರಕರ್, ಶಿವಪುತ್ರ ಬಾವಿ, ಹನುಮಯ್ಯ ಬೇಲೂರೆ, ಚಂದ್ರಶೇಖರ ಗುರುಗುಂಟಿ, ಸಂತೋಷ ಕುಡ್ಡಳ್ಳಿ, ಶರಣಬಸಪ್ಪ ನರೋಣಿ, ಪ್ರಭವ ಪಟ್ಟಣಕರ್, ಪೂರ್ಣಿಮಾ ಎಸ್.ಎಚ್., ವೈಶಾಲಿ ನಾಟೀಕಾರ್, ಜ್ಯೋತಿ ಕೋಟನೂರ, ಜ್ಯೋತಿ ಪಾಟೀಲ, ಪ್ರಸನ್ನ ವಾಂಜರಖೇಡೆ, ಶಿವಾನಂದ ಮಠಪತಿ ಸೇರಿದಂತೆ ಅನೇಕರು ಹಾಜರಿದ್ದರು.
ಸುಮಾರು ೩೦೦ ಕ್ಕೂ ಹೆಚ್ಚು ಜನರಿಗೆ ಕೋವಿಡ್ ಲಸಿಕೆ ಹಾಕಲಾಯಿತು. ಲಸಿಕೆ ಪಡೆದುಕೊಂಡವರಿಗೆ ನಾಲ್ಕು ಚಕ್ರ ಚಾರಿಟೇಬಲ್ ಟ್ರಸ್ಟ ವತಿಯಿಂದ ಒಂದೊಂದು ಸಸಿ ನೀಡಿ ಗೌರವಿಸಿದ್ದು ಜನರ ಗಮನ ಸೆಳೆಯಿತು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…