ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕ ರೋಗದ 2ನೇ ಅಲೆಯ ಹರಡುವಿಕೆಯನ್ನು ತಡೆಗಟ್ಟಲು ಸರ್ಕಾರವು ವಿವಿಧ ಚಟುವಟಿಕೆಗಳು/ ಕೈಗಾರಿಕೆಗಳ ಮೇಲೆ ನಿರ್ಬಂಧ ವಿಧಿಸಿದ್ದು, ವಿದ್ಯುತ್ ಮಗ್ಗ ಹಾಗೂ ಪೂರಕ ಚಟುವಟಿಕೆಗಳ ಕೈಗಾರಿಕೆಗಳ ಉದ್ಯೋಗದಲ್ಲಿ ತೊಡಗಿರುವ ವಿದ್ಯುತ್ ಮಗ್ಗ ನೇಕಾರರು/ ಕೆಲಸಗಾರರು ಸಂಕಷ್ಟದಲ್ಲಿರುವುದನ್ನು ಮನಗಂಡು ಪವರ್ಲೂಮ್ ಹಾಗೂ ಪೂರಕ ಚಟುವಟಿಕೆಗಳಲ್ಲಿ ತೊಡಗಿರುವ ಕೆಲಸಗಾರರಿಗೆ ತಲಾ ರೂ.3000/- ಗಳಂತೆ ಆರ್ಥಿಕ ಪ್ಯಾಕೇಜ್ನ್ನು ಘೋಷಿಸಲಾಗಿದೆ.
ಈ ಯೋಜನೆಯಿಂದ ಸುಮಾರು 1.25 ಲಕ್ಷ ಕೆಲಸಗಾರರಿಗೆ ಅನುಕೂಲವಾಗಲಿದೆ. ಸರ್ಕಾರವು ಈಗಾಗಲೇ ಪರಿಹಾರ ನೀಡಲು ಆದೇಶವನ್ನು ಹೊರಡಿಸಿದ್ದು, ಪವರ್ಲೂಮ್ ವಲಯದ ಮತ್ತು ಪ್ರಿ- ಲೂಮ್ ವಲಯದ ಕೆಲಸಗಾರರಿಗೆ ತಲಾ ರೂ.3000/- ಗಳಂತೆ ಪರಿಹಾರಧನ ಪ್ರಸ್ತುತ ಫಲಾನುಭವಿಗಳಿಗೆ ತ್ವರಿತವಾಗಿ ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಪರಿಹಾರ ವಿತರಿಸಲಾಗುವುದು. ಉಳಿದ ಫಲಾನುಭವಿಗಳಿಗೆ ಪರಿಹಾರ ವಿತರಿಸಲು ಆನ್ಲೈನ್ ಸೇವಾಸಿಂಧು ಮೂಲಕ ಅರ್ಜಿಗಳನ್ನು ಪಡೆದು ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…