ವಿಧಾನಸೌಧದಲ್ಲಿ ಬಸವೇಶ್ವರ ಪುತ್ಥಳಿ ಶಾಸಕ ಗುತ್ತೇದಾರ ಹರ್ಷ

0
22

ಆಳಂದ: ಮಹಾ ಮಾನವತಾವಾದಿ ಬಸವೇಶ್ವರರ ಪುತ್ಥಳಿಯನ್ನು ವಿಧಾನಸೌಧದ ಆವರಣದಲ್ಲಿ ಅಳವಡಿಸಲು ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪನವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸೂಕ್ತ ಪ್ರಸ್ತಾವನೆ ಸಲ್ಲಿಸಿ ಕಡತ ಮಂಡಿಸಲು ಸೂಚನೆ ನೀಡಿರುವುದಕ್ಕೆ ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಹರ್ಷ ವ್ಯಕ್ತಪಡಿಸಿದ್ದಾರೆ.

೧೨ನೇ ಶತಮಾನದಲ್ಲಿ ತಳ ಸಮುದಾಯಗಳನ್ನು ಗುರುತಿಸಿ ಅವುಗಳಿಗೆ ಸಾಮಾಜಿಕ ಸ್ಥಾನಮಾನಗಳನ್ನು ಹೆಚ್ಚಿಸಿ ಕಾಯಕದ ಮಹತ್ವ ಸಾರಿದ್ದ ಶ್ರೇಷ್ಠ ವ್ಯಕ್ತಿಗೆ ಪ್ರಜಾಪ್ರಭುತ್ವದ ದೇಗುಲದಲ್ಲಿ ಮನ್ನಣೆ ನೀಡುತ್ತಿರುವುದಕ್ಕೆ ಅತೀವ ಸಂತೋಷವಾಗುತ್ತಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here