ಬಿಸಿ ಬಿಸಿ ಸುದ್ದಿ

ಹಣಮಂತ ಕೂಡಲಗಿ ಕೊಲೆ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಯಲಿ: ಶಾಸಕ ಡಾ. ಅಜಯ್ ಸಿಂಗ್ ಆಗ್ರಹ

ಕಲಬುರಗಿ: ಜೇವರ್ಗಿ ತಾಲೂಕಿನ ಬಳ್ಳೂಂಡಗಿ ಹತ್ತಿರ ಜೂನ್ ತಿಂಗಳ 8 ರಂದು ನಡೆದಿರುವ ಹಣಮಂತ ಹೊಸ್ಮನಿ ಕೂಡಲಗಿಯವರ ಕೊಲೆ ಪ್ರಕರಣವನ್ನು ಖಂಡಿಸಿರುವ ವಿಧಾನಸಭೆ  ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಜೇವರ್ಗಿ ಶಾಸಕರೂ ಆಗಿರುವ ಡಾ. ಅಜಯ್ ಸಿಂಗ್ ಸಾಮರಸ್ಯದ ಜೇವರ್ಗಿ ಮತಕ್ಷೇತ್ರದಲ್ಲಿ ಕೊಲೆ, ಸುಲಿಗೆಯತಂಹ ಅಪರಾಧ ಸಂಸ್ಕøತಿಗೆ ಅವಕಾಶವೇ ಇಲ್ಲ, ಆದಾಗ್ಯೂ ಇಂತಹ ನಡೆಯಬಾರದ ಘಟನೆ ನಡೆದಿದೆ. ಈ ಘಟನೆಯ ತನಿಖೆ ಕೈಗೆತ್ತಿಕೊಂಡಿರುವ ಕಲಬುರಗಿ ಪೆÇಲೀಸರು ನಿಷ್ಪಕ್ಷಪಾತವಾಗಿ ತನಿಖೆ ನಡೆಸುವ ಮೂಲಕ ಹಂತಕರನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಕುರಿತಂತೆ ಪತ್ರಿಕಾ ಹೇಳಿಕೆ ನೀಡಿರುವ ಡಾ. ಅಜಯ್ ಸಿಂಗ್ ಅವರು, ಶರಣರು, ಶಿವಯೋಗಿಗಳು, ಸಂತರು, ದಾಸೋಹಿಗಳು ಬಾಳಿ ಬದುಕಿರುವ ನಾಡು, ದಾಸೋಹ ಸಂಸ್ಕøತಿಯ ಬೀಡು ಜೇವರ್ಗಿ. ಯಾವ ಕಾಲದಲ್ಲೂ ಇಲ್ಲಿನ ಜನತೆ ರಾಗ- ದ್ವೇಷಗಳಿಗೆ, ಕೊಲೆಯಂತಹ ಹೀನ ಕೆಲಸಗಳಿಗೆ  ಅವಕಾಶವನ್ನೇ ನೀಡಿಲ್ಲ. ಆದಾಗ್ಯೂ ನಡೆಯಬಾರದ ಘಟನೆ ನಡೆದು ಹೋಗಿದೆ. ಕೊಲೆ ಸಂಸ್ಕøತಿ ಯಾರೂ ಕೂಡ ಬೆಂಬಲಿಸಬಾರದು.

ಆರೋಪಿಗಳನ್ನು ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸುವ ನಿಟ್ಟಿನಲ್ಲಿ ಪೆÇಲೀಸರು ತಮ್ಮ ತನಿಖೆಯ ಜಾಣ್ಮೆ ಪ್ರದರ್ಶಿಸಲಿ. ಹಂತಕರನ್ನು ಬಯಲಿಗೆಳೆದು ಇಂತಹ ಹೀನ ಕೃತ್ಯಗಳು ಮರುಕಳಿಸದಂತೆ ಹಾಗೂ ಜೇವರ್ಗಿಯಲ್ಲಿ ಎಂದಿನಂತೆ ಶಾಂತಿ- ಸಾಮರಸ್ಯ ಕಾಯಂ ನೆಲೆಸುವಂತೆ ಕ್ರಮ ಕೈಗೊಳ್ಳಲಿ ಎಂದು ಡಾ. ಅಜಯ್ ಸಿಂಗ್ ಆಗ್ರಹಿಸಿದ್ದಾರೆ.

emedialine

Recent Posts

371 (ಜೆ) ವಿಧಿಯ ನಿಬಂಧನೆಗಳ ಪರಿಣಾಮಕಾರಿ ಅನುμÁ್ಠನಕ್ಕೆ ಒತ್ತಾಯ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…

6 hours ago

ಮರಗಮ್ಮ ದೇವಿ ಮೂರ್ತಿ ಗಂಗಾಸ್ನಾನ | ಎಂಟು ಗಂಟೆಗಳ ಕಾಲ ಮೆರವಣಿಗೆ

ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…

6 hours ago

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

6 hours ago

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

6 hours ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

6 hours ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

6 hours ago