ಸುರಪುರ: ತಾಲೂಕಿನ ತಿಂಥಣಿ ಗ್ರಾಮದಲ್ಲಿನ ಪ್ರತಿಶತ ೧೦೦ರಷ್ಟು ಕೊರೊನಾ ಲಸಿಕೆ ವಿತರಣೆಗೆ ಶ್ರಮಿಸಿದ ಕೊರೊನಾ ವಾರಿಯರ್ಸ್ಗಳಿಗೆ ಅಭಿನಂಧನಾ ಕಾರ್ಯಕ್ರಮವನ್ನು ನಡೆಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಹಾಗು ಶಾಸಕ ನರಸಿಂಹ ನಾಯಕ (ರಾಜುಗೌಡ) ಮಾತನಾಡಿ,ಇಡೀ ಸುರಪುರ ಮತ್ತು ಹುಣಸಗಿ ತಾಲೂಕಿಲ್ಲಿ ತಿಂಥಣಿ ಗ್ರಾಮ ಪಂಚಾಯತಿ ಕೊರೊನಾ ಲಸಿಕೆ ವಿತರಣೆಯಲ್ಲಿ ಪ್ರತಿಶತ ನೂರರಷ್ಟು ಸಾಧನೆಗೈದು ರಾಜ್ಯದಲ್ಲಿ ಮಾದರಿಯಾಗಿದೆ ಎಂದರು.
ಇದೇ ರೀತಿಯಲ್ಲಿ ಮತಕ್ಷೇತ್ರದ ಯಾವುದೇ ಗ್ರಾಮ ಪಂಚಾಯತಿ ಮತ್ತು ಪುರಸಭೆ ಅಥವಾ ನಗರಸಭೆಯ ಯಾವುದೇ ವಾರ್ಡ್ ಕೊರನಾ ಲಸಿಕೆ ವಿತರಣೆಯಲ್ಲಿ ಪ್ರತಿಶತ ನೂರರಷ್ಟು ಸಾಧನೆ ಮಾಡಿದಲ್ಲಿ ಕೆಕೆಆರ್ಡಿಬಿ ಇಂದ ಬರುವ ಶಾಸಕರ ಅನುದಾನದಲ್ಲಿ ೨೫ ಲಕ್ಷ ರೂಪಾಯಿಗಳ ವಿಶೇಷ ಅನುದಾನ ನೀಡಲಾಗುವುದು.ಅದರಂತೆ ಈಗ ತಿಂಥಣಿ ಗ್ರಾಮ ಪಂಚಾಯತಿಗೆ ೨೫ ಲಕ್ಷ ನೀಡುವುದಾಗಿ ಘೋಷಿಸಿದರು.
ನಂತರ ತಿಂಥಣಿ ಗ್ರಾಮದಲ್ಲಿ ಶೇ ೧೦೦ ಲಸಿಕೆ ಹಾಕಿಸುವಲ್ಲಿ ಶ್ರಮವಹಿಸಿದ ಎಲ್ಲಾ ಅಂಗನವಾಡಿ ಆಶಾ ಕಾರ್ಯಕರ್ತೆಯರು ಮತ್ತು ಗ್ರಾಮ ಪಂಚಾಯತಿ ಸಿಬ್ಬಂದಿಗೆ ಸನ್ಮಾನಿಸಿ ಅಭಿನಂದಿಸಿದರು ಹಾಗು ಇದೇ ಸಂದರ್ಭದಲ್ಲಿ ಕೊರೊನಾ ಸಲಿಕೆ ವಿತರಣೆಯನ್ನೂ ಮಾಡಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಡಾ:ರಾಗಪ್ರಿಯ ಆರ್,ಜಿ.ಪಂ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ (ತಾತಾ) ಸಹಾಯಕ ಆಯುಕ್ತ ಪ್ರಶಾಂತ ಹನಗಂಡಿ ಜಿಲ್ಲಾ ಆರೋಗ್ಯಾಧಿಕಾರಿ ಇಂದುಮತಿ ಕಾಮಶೆಟ್ಟಿ ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ತಾ.ಪಂ ಇಒ ಅಂಬ್ರೇಶ ತಾಲೂಕು ಆರೋಗ್ಯಾಧಿಕಾರಿ ಡಾ:ಆರ್.ವಿ.ನಾಯಕ ಸೇರಿದಂತೆ ಅನೇಕ ಜನ ಮುಖಂಡರು ಹಾಗು ಕೊರೊನಾ ವಾರಿಂiiರ್ಸ್ಗಳಿದ್ದರು.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…