ಸುರಪುರ: ತಾಲೂಕಿನ ತಿಂಥಣಿ ಗ್ರಾಮ ಪಂಚಾಯತಿಗೆ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಗ್ರಾಮ ಪಂಚಾಯತಿಯಿಂದ ಕೈಗೊಂಡಿರುವ ಕ್ರಮಗಳು ಹಾಗು ಉದ್ಯೋಗ ಖಾತ್ರಿ ಯೋಜನೆಯಡಿ ನಡೆದ ಕಾಮಗಾರಿಗಳ ಮಾಹಿತಿ ಪಡೆದರು ಹಾಗು ಕೊರೊನಾ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಲಸಿಕೆ ವಿತರಣೆಗೆ ಕೈಗೊಂಡ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಅಲ್ಲದೆ ಇದೇ ಸಂದರ್ಭದಲ್ಲಿ ಸ್ಥಳಿಯ ಪ್ರಗತಿಪರ ರೈತ ಪರಮಣ್ಣ ಶಾಂತಪೂರ ಅವರ ಜಮೀನಿನಲ್ಲಿ ಮಾಡಲಾಗಿರುವ ಸಮಗ್ರ ಕೃಷಿ ಪದ್ಧತಿ ಅಡಿಯಲ್ಲಿ ನಿಮಿಸಲಾಗಿರುವ ಕಾಮಗಾರಿಗಳನ್ನು ವೀಕ್ಷಣೆ ಮಾಡಿದರು.ಅಲ್ಲದೆ ಹನಿ ನೀರಾವರಿ ಪದ್ಧತಿಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕರಾದ ಗುರುನಾಥ ಗೌಡಪ್ಪನವರ್, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ,ತಾಂತ್ರಿಕ ಸಂಯೋಜಕರು,ಆಯ್.ಇ.ಸಿ ತಾಂತ್ರಿಕ ಸಹಾಯಕರು,ಗ್ರಾಮ ಪಂಚಾಯತಿ ಅಭಿವೃಧ್ಧಿ ಅಧಿಕಾರಿ ಹಾಗು ಸಿಬ್ಬಂದಿಗಳು ಮತ್ತು ಜಮೀನಿನ ಮಾಲೀಕ ಪರಮಣ್ಣ ಶಾಂತಪೂರ ಇತರರಿದ್ದರು.