ಕಲಬುರಗಿ: ವೈದ್ಯರು ಹಾಗೂ ಪತ್ರಿಕೋದ್ಯಮಿಗಳು ಸಮಾಜದ ಸ್ವಾಸ್ಥ್ಯ ಕಾಪಾಡುವ ಸೇನಾನಿಗಳು ಎಂದು ಬಣ್ಣಿಸಿರುವ ವಿಧಾನಸಬೆ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಜೇವರ್ಗಿ ಮತಕ್ಷೇತ್ರದ ಶಾಸಕರಾದ ಡಾ. ಅಜಯ್ ಸಿಂಗ್ ಸಮಾಜದ ಪ್ರಮುಖ ಅಂಗವಾಗಿರುವ ಪತ್ರಕರ್ತರು ಹಾಗೂ ವೈದ್ಯ ಸಮೂಹಕ್ಕೆ ಪ್ರತಿ ವರ್ಷ ಜುಲೈ 1 ರಂದು ಆಚರಿಸಲ್ಪಡುವÀ ವೈದ್ಯರ ದಿನ ಹಾಗೂ ಕನ್ನಡ ಪತ್ರಿಕೋದ್ಯಮ ದಿನದ ಶುಭಾಷಯಗಳನ್ನು ಕೋರಿದ್ದಾರೆ.
ಪ್ರಜಾಪ್ರಭುತ್ವದ 4 ನೇ ಅಂಗವಾಗಿ ಪತ್ರಿಕೋದ್ಯಮ ಬೆಳೆದು ನಿಂತಿದೆ. ಪ್ರಜಾಪ್ರಭುತ್ವ ಲವಲವಿಕೆಯಿಂದ ಇರಲು ಪತ್ರಿಕೋದ್ಯಮ ಸಹಕಾರಿಯಾಗಿರುತ್ತದೆ. ಪ್ರಜಾಪ್ರಭುತ್ವದ ಜೀವಂತಿಕೆ ಕಾಪಾಡುವ ಮಹತ್ತರ ಹೊಣೆಗಾರಿಕೆ ಪತ್ರಿಕೋದ್ಯಮಿಗಳು, ಪತ್ರಕರ್ತರು ಕ್ಷಣಕ್ಷಣಕ್ಕೂ ನಿಭಾಯಿಸುತ್ತಿರುತ್ತಾರೆಂದು ಪತ್ರರ್ಕರ ಹಗಲಿರುಳು ಕೆಲಸಗಳನ್ನು ಡಾ. ಅಜಯ್ ಸಿಂಗ್ ಮೆಚ್ಚಿಕೊಂಡಿದ್ದಾರೆ.
ವೈದ್ಯ ಸಮೂಹವೂ ಜನಾರೋಗ್ಯ ಕಾಪಾಡುವಲ್ಲಿ ಮಹತ್ವದ ಪಾತ್ರ ನಿಭಾಯಿಸುತ್ತಿದ್ದಾರೆ. ಕೊರೋನಾ ಕಾಲದಲ್ಲಂತೂ ವೈದ್ಯರ ತಂಡ ಹಗಲು- ರಾತ್ರಿ ತಮ್ಮ ಜೀವ ಪಣಕ್ಕಿಟ್ಟು ಜನರ ಆರೋಗ್ಯ ರಕ್ಷಿಸಲು ಮುಂದಾಗಿ ನಿಂತಿದ್ದು ನೋಡಿದರೆ ಅವರ ಸೇವೆಯನ್ನು ನಾವೆಲ್ಲರೂ ಕೊಂಡಾಲೇಬೇಕು. ಸಂಸ್ಕøತದ ಉಕ್ತಿಯಂತೆ ವೈದ್ಯೋ ನಾರಾಯಣೋ ಹರೀ, ವೈದ್ಯರೆಂದರೆ ಸಾಕ್ಷಾತ್ ದೇವರು ಎಂಬುದನ್ನು ಸಾಂಕ್ರಾಮಿಕ ರೋಗ ಕೋರೋನಾ ಆತಂಕದ ದಿನಗಳಲ್ಲಿ ವೈದ್ಯ ಸಮೂಹ ಸಾಬೀತು ಪಡಿಸಿ ತೋರಿಸಿದೆ.
ವೈದ್ಯರ ಸೇವೆ ಸಮಾಜದ ಜನರ ಸ್ವಾಸ್ಥ್ಯ ಕಾಪಾಡಲು ಸದಾ ಬೇಕೇಬೇಕು. ಹೀಗಾಗಿ ವೈದ್ಯರು ಹಾಗೂ ಪತ್ರಿಕೋದ್ಯಮಿಗಳಿಬ್ಬರೂ ಕೊರೋನಾ ಕಾಲದಲ್ಲಿ ಮುಂಚೂಣಿಯಲ್ಲಿದ್ದು ಜನರ ರೋಗ, ರುಜಿನೆ, ಸಮಾಜದಲ್ಲಿನ ಭೀತಿ ಹೋಗಲಾಡಿಸಲು ಹಾಗೂ ರೋಗದ ಬಗ್ಗೆ ಜಾಗೃತಿ ಮೂಡಿಸಲು ಅತ್ಯಂತ ಸಂವೇದನಶೀಲ ಹಾಗೂ ಮಹತ್ವದ ಸೇವೆ ಸಲ್ಲಿಸಿದ್ದಾರೆಂದು ಡಾ. ಅಜಯ್ ಸಿಂಗ್ ವೈದ್ಯರು- ಪತ್ರಿಕೋದ್ಯಮಿಗಳ ಸೇವಾ ಪ್ರವೃತ್ತಿಯನ್ನು ಮನಸಾರೆ ಕೊಂಡಾಡಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…