ಶಹಾಬಾದ: ನಗರದ ಬಿಜೆಪಿ ಕಾರ್ಯಾಲಯದಲ್ಲಿ ಮಂಗಳವಾರ ಬಿಜೆಪಿಯಿಂದ ಡಾ.ಶ್ಯಾಮ ಪ್ರಸಾದ ಮುಖರ್ಜಿ ಅವರ ಪುಣ್ಯ ಸ್ಮರಣೆ ದಿನವನ್ನು ಆಚರಿಸಲಾಯಿತು.
ಬಿಜೆಪಿ ಹಿರಿಯ ಮುಖಂಡ ಅರುಣ ಪಟ್ಟಣಕರ್ ಮಾತನಾಡಿ, ತತ್ವದ ಆಧಾರದ ಮೇಲೆ ಮಂತ್ರಿ ತ್ಯಾಗ ಮಾಡಿದ ಸ್ವಾತಂತ್ರ್ಯ ಭಾರತದ ಪ್ರಪ್ರಥಮ ರಾಷ್ಟ್ರ ನಾಯಕ ಎಂದರೆ ಶ್ಯಾಮ ಪ್ರಸಾದ ಮುಖರ್ಜಿಯವರು. ದೇಶದ ಪರಿಸ್ಥಿತಿ ಅಧೋಗತಿಗೆ ಇಳಿದಾಗ, ರಾಜಕೀಯ ಅಸ್ಥಿರತೆ, ಆಡಳಿತ ದೋಷ ಕಂಡಾಗ ಅವಿರತ ದುಡಿದು ಭಾರತೀಯ ಜನಸಂಘವನ್ನು ಸ್ಥಾಪನೆ ಮಾಡಿದರು.
ದೇಶದ ಅಖಂಡತೆಗೆ, ಸಾರ್ವಭೌಮತ್ವದ ಉಳಿಕೆಗೆ ಬಲಿದಾನಗೈದ ಅವರ ತ್ಯಾಗ, ಬಲಿದಾನ ವ್ಯರ್ಥವಾಗದಂತೆ ದೇಶದ ಅಖಂಡತೆಯನ್ನು ಉಳಿಸಿ, ದೇಶವನ್ನು ಕಟ್ಟಿ ಬೆಳೆಸುವ ಪ್ರಯತ್ನ ಮಾಡೋಣ ಎಂದು ಹೇಳಿದರು.
ಪ್ರಧಾನ ಕಾರ್ಯದರ್ಶಿ ಸಿದ್ರಾಮ ಕುಸಾಳೆ, ಉಪಾಧ್ಯಕ್ಷರಾದ ದುರ್ಗಪ್ಪ ಪವಾರ, ಮಹಾದೇವ ಗೊಬ್ಬೂರಕರ್, ಭೀಮರಾವ ಸಾಳೂಂಕೆ,ಸುಭಾ? ಜಾಪೂರ,ಬಸವರಾಜ ಬಿರಾದಾರ,ನಗರಸಭೆ ಸದಸ್ಯರಾದ ಜಗದೇವ ಸುಭೆದಾರ, ನಾಮನಿರ್ದೇಶಿತ ನಗರಸಭೆ ಸದಸ್ಯರಾದ ಶರಣು ವಸ್ತ್ರದ, ಆಶ್ರಯ ಸಮಿತಿ ಸದಸ್ಯ ಭೀಮಯ್ಯ ಗುತ್ತೆದಾರ,ಯುವ ಮೋರ್ಚಾ ಅಧ್ಯಕ್ಷರಾದ ದಿನೇಶ ಗೌಳಿ,ಬಸವರಾಜ ಬಿರಾದಾರ, ಶರಣು ವಸ್ತ್ರದ್, ಭೀಮಯ್ಯ ಗುತ್ತೆದಾರ, ಸುನೀಲ ಕುಂಬಾರ ಇತರರು ಇದ್ದರು.