ಸುರಪುರ: ತಾಲೂಕು ಅಕ್ಷರದಾಸೋಹ ಸಹಾಯಕ ನಿರ್ದೇಶಕ ಮೌನೇಶ ಕಂಬಾರ ತಮ್ಮ ಜನುಮ ದಿನದ ಅಂಗವಾಗಿ ಶಾಲೆಗೆ ರಯಲು ಚಿತ್ರದ ಬಣ್ಣ ಹಾಕಿಸುವ ಮೂಲಕ ಮಾದರಿಯಾಗಿದ್ದಾರೆ.
ತಾಲೂಕಿನ ಶೆಳ್ಳಗಿ ಗ್ರಾಮದ ಸರಕಾರಿ ಶಾಲೆಗೆ ಮಕ್ಕಳ ಓದಿಗೆ ಪ್ರೋತ್ಸಾಹದಾಯಕವಾಗಿರಲೆಂದು ಭಾವಿಸಿ ಶಾಲೆಗೆ ರೈಲು ಚಿತ್ರದ ಬಣ್ಣ ಹಾಕಿಸಿದ್ದಾರೆ.ಅಲ್ಲದೆ ಶಾಲೆಯ ಒಂದನೇ ತರಗತಿಯ ಮಕ್ಕಳಿಗೆ ಕಲಿಕಾ ಸಾಮಗ್ರಿಗಳ ಕಿಟ್ ನೀಡುವ ಮೂಲಕ ಮಕ್ಕಳ ಓದಿಗೆ ಸಹಕಾರ ನೀಡಿದ್ದಾರೆ.ಇದೇ ಸಂದರ್ಭದಲ್ಲಿ ಶಾಲೆಯ ಆವರಣದಲ್ಲಿ ಸಸಿಗಳನ್ನು ನೆಟ್ಟು ನೀರೆರೆಯುವ ಮೂಲಕ ತಮ್ಮ ಜನುಮ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡರು.
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕ ಶರಣಬಸವ ಗೋನಾಲ ಸೇರಿದಂತೆ ಶಾಲಾ ಸುಧಾರಣಾ ಸಮಿತಿಯ ಪದಾಧಿಕಾರಿಗಳು ಮತ್ತು ಗ್ರಾಮದ ಅನೇಕ ಮುಖಂಡರಿದ್ದರು.
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…