ನವದೆಹಲಿ: ಕಲಬುರಗಿ ಜಿಲ್ಲೆಯ ಚಿ೦ಚೋಳಿ ಮತ್ತು ಇತರೆ ಎಲ್ಲಾ ತಾಲೂಕುಗಳಲ್ಲಿ ಅಧಿಕ ಸಂಖ್ಯೆಯಲ್ಲಿ ಅಲ್ಪಸಂಖ್ಯಾತರಿದ್ದು. ಪ್ರಧಾನ ಮಂತ್ರಿ ಜನ ವಿಕಾಸ ಕಾರ್ಯಕ್ರಮದಡಿ ಸೇರಿಸಲು ಕಳೆದ ಫೆಬ್ರವರಿ ತಿಂಗಳಲ್ಲಿ ನಡೆದ ಸಭೆಯಲ್ಲಿ ಸಂಸದ ಡಾ. ಉಮೇಶ ಜಾಧವ ಪ್ರಸ್ತಾಪಿಸಿದ್ದರು. ಅಲ್ಲದೆ ಲೋಕ ಸಭೆಯಲ್ಲಿ ಸಹ ಧ್ವನಿಯತ್ತಿದ್ದಾರೆ.
ಇದೀಗ ಶೀಘ್ರವೇ ಕಲಬುರಗಿ ಜಿಲ್ಲೆಯನ್ನು ಪಿಎಮ್ಜಿವಿಕೆ ಅಡಿಯಲ್ಲಿ ಸೇರಿಸುವುದಾಗಿ ರಾಜ್ಯ ಮುಖ್ಯ ಕಾರ್ಯದರ್ಶಿ. ರವಿಕುಮಾರ ಭರವಸೆ ಸಿಕ್ಕಿದ್ದು, ಅಲ್ಪಸಂಖ್ಯಾತರ ಸಮುದಾಯದ ಸಂರ್ವಾಂಗಿಣ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿ ಜನ ವಿಕಾಸ ಯೋಜನೆಯಡಿಯಲ್ಲಿ ಸೇರಿಸುವುದು ಬಹು ಮುಖ್ಯವಾಗಿದೆ ಎಂದು ಸಂಸದ ಜಾಧವ್ ತಿಳಿಸಿದ್ದಾರೆ.
ಬಿಜೆಪಿ ಕಾರ್ಯಾಕಾರಣಿ ಸದಸ್ಯರಾದ ಕೆ.ಎಮ್ ಬಾರಿ ಇ- ಮೀಡಿಯಾ ಲೈನ್ ಜೊತೆ ದೂರವಾಣಿಯಲ್ಲಿ ಮಾತನಾಡಿ ಕಲಬುರಗಿ ಜಿಲ್ಲೆಯ ಅಲ್ಪಸಂಖ್ಯಾತರ ಸಮಗ್ರ ಏಳಿಗೆಗೆ ಸಂಸದ ಜಾಧವ್ ಹೆಚ್ಚು ಕಾಳಿಜಿ ವಹಿಸಿದ್ದಾರೆ, ಸಂಸದರು ಪ್ರತಿಯೊಂದು ಉನ್ನತ ಸಭೆಗಳಲ್ಲಿ ಪ್ರಸ್ತಾಪ ಮಾಡಿ ಗಮನ ಸೇಳೆಯುತ್ತಿದ್ದಾರೆ.
ಇತ್ತೀಚೆಗೆ ಸಂಸದ ಜಾಧವ್ ಅವರ ನೇತೃತ್ವದಲ್ಲಿ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರ ಅಪ್ತ ಕಾರ್ಯದರ್ಶಿಗೆ ಭೇಟಿ ನೀಡಿ ಮನವಿ ಮಾಡಿದ್ದು, ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ಯುಜಿಡಿ, ಅಂಗನವಾಡಿ, ರಸ್ತೆ ನಿರ್ಮಾಣ, ಉದ್ಯೋಗ ಆಧಾರಿತ ಸ್ಕಿಲ್ ಡೌಲಪಮೆಂಟ್ ಕಾರ್ಯಕ್ರಮ, ಶಿಕ್ಷಣ ಕ್ಷೇತ್ರವಾದ ಮದರಸಾ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಮಟ್ಟದ ಶಿಕ್ಷಣ ನೀಡುವುದು ಮತ್ತು ಹೌಸಿಂಗ್ ಯೋಜನೆಯಲ್ಲಿ ಸಮುದಾಯಕ್ಕೆ 15% ಮಿಸಲಾತಿ ಸಿಗಲಿದೆ ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ನಾಮ ನಿರ್ದೇಶನ ನಿರ್ದೇಶಕರಾದ ಸದ್ದಾಮ್ ಅವರು ಜೊತೆಗಿದ್ದರು.
ಅಲ್ಲದೇ ತೊಗರಿ ಕಣಜವಾಗಿರುವ ಕಲಬುರಗಿ ಜಿಲ್ಲೆಯ ವಾಣಿಜ್ಯ ಕ್ಷೇತ್ರದಲ್ಲಿ ಗುರುತಿಸಿ ಅಭಿವೃದ್ಧಿ ಪಥದಲ್ಲಿ ಸಾಗಿದುವ ನಿಟ್ಟಿನಲ್ಲಿ ಕೇಂದ್ರ ಸರಕಾದ ಜೊತೆ ಸಂಸದ ಜಾಧವ್ ನಿರಂತರ ಸಂಪರ್ಕದಲ್ಲಿ ಇದ್ದಾರೆ ಎಂದು ಬಾರಿ ತಿಳಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…