ಸಂಸದ ಡಾ. ಉಮೇಶ್ ಜಾಧವ್‌ಗೆ ಕೇಂದ್ರ ಸಚಿವ ಸ್ಥಾನ ನೀಡಲು ಮಲ್ಲು ಮರಗುತ್ತಿ ಮನವಿ

0
136

ಕಲಬುರಗಿ: ಜಿಲ್ಲೆಯ ಜನಸೇವೆಗೆ ಸದಾ ಮುಂದಾಗಿರುವ ಲೋಕಸಭಾ ಸದಸ್ಯರಾದ ಡಾ. ಉಮೇಶ್‌ ಜಾಧವ್ ಅವರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಿ ಕಲ್ಯಾಣ ಕರ್ನಾಟಕ ಜನರ ಭರವಸೆ ಈಡೇರಿಸಬೇಕೆಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಚಿಂಚೋಳಿ ಬಿಜೆಪಿ ಮಂಡಲ ಸಂಘಟನಾ ಕಾರ್ಯದರ್ಶಿ ಮಲ್ಲು ಎಸ್ ಮರಗುತ್ತಿ ಮನವಿ ಮಾಡಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಮಲ್ಲು, ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಕೇಂದ್ರೀಯ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಲಕ್ಷಕ್ಕೂ ಅಧಿಕ ಮತಗಳಿಂದ ಸೋಲಿಸಿದಲ್ಲದೇ, ಚಿಂಚೋಳಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ ಪಕ್ಷವನ್ನು ಗಟ್ಟಿಗೊಳಿಸಿದ್ದಾರೆ ಎಂದು ತಿಳಿಸಿದ್ದಾರೆ.

Contact Your\'s Advertisement; 9902492681

ರಾಜ್ಯದಲ್ಲಿ ಸಮಿಶ್ರ ಸರ್ಕಾರ ಪತನಗೊಳಿಸಿ ಬಿಜೆಪಿ
ಸರ್ಕಾರ ರಚನೆಗೆ ಪ್ರಮುಖ ಪಾತ್ರವಹಿಸಿರುವ ಜಾಧವ್, ರಾಷ್ಟ್ರದಲ್ಲೇ ಕೊರೊನಾ ಸೋಂಕು ಉಲ್ಬಣವಾಗಿದ್ದ ವೇಳೆ ವೈದ್ಯನಾಗಿ, ಚುನಾಯಿತ ಪ್ರತಿನಿಧಿಯಾಗಿ, ಸಮಾಜ ಸೇವಕನಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಿರಂತರ ಸಭೆ ಕರೆದು ಕೊರೊನಾ ಹತೋಟಿಗೆ ತರುವಲ್ಲಿ ಸಫಲರಾಗಿದ್ದಾರೆ.

ಕೊರೊನಾ ಮಹಾಮಾರಿ ವೇಳೆಯಲ್ಲಿ ಸಂಸದ ಜಾಧವ್ ವಿಮಾನದಲ್ಲಿ ಕ್ಷೇತ್ರದ ಜನರಿಗಾಗಿ ಔಷಧಿ ತಂದು ಜನರ ಬಗ್ಗೆ ಅವರಿಗಿರುವ ಕಾಳಿಜಿ ಜಗಜಾಹಿರಾತಾಗಿದೆ.

ಸಂಸದ ಜಾಧವ್ ಅವರ ಜನರ ಬಗ್ಗೆ ಇರುವ ಕಾಳಜಿ ಮತ್ತು ಪಕ್ಷಕ್ಕೆ ಇರುವ ನಿಷ್ಠೆಯನ್ನು ಗುರುತಿಸಿ ಇಲ್ಲಿನ ಪ್ರಾದೇಶಿಕ ಅಸಮಾನತೆ ನಿವಾರಣೆ ಮತ್ತು ಪಕ್ಷವನ್ನು ಮತ್ತಷ್ಟು ಬಲಪಡಿಸಲು ಜಾಧವ ಅವರಿಗೆ ಕೇಂದ್ರ ಸಂಪುಟದಲ್ಲಿ ಮಂತ್ರಿ ಸ್ಥಾನ ನೀಡಬೇಕೆಂದು ಮನವಿ ಮಾಡಿ ಒತ್ತಾಯಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here