ಬಿಸಿ ಬಿಸಿ ಸುದ್ದಿ

ಖುರೇಶಿ ಮೊಹಲ್ಲಾದಲ್ಲಿ ಕೊರೊನಾ ಲಸಿಕೆ ಅಭಿಯಾನ

ಸುರಪುರ: ನಗರದ ವಾರ್ಡ್ ಸಂಖ್ಯೆ ೧೨ರ ಖುರೇಶಿ ಮೊಹಲ್ಲಾದಲ್ಲಿ ಕೊರೊನಾ ಲಸಿಕೆ ಅಭಿಯಾನವನ್ನು ನಡೆಸಲಾಯಿತು.ಭಾನುವಾರ ಬೆಳಿಗ್ಗೆ ನಡೆದ ಅಭಿಯಾನಕ್ಕೆ ವಾರ್ಡ್‌ನ ನಗರಸಭೆ ಸದಸ್ಯೆ ಹೀನಾ ಕೌಸರ್ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಅನೇಕ ಮುಖಂಡರು ಮಾತನಾಡಿ,ಇಂದು ಕೊರೊನಾ ನಿರ್ಮೂಲನೆಯಾಗುತ್ತಿರುವುದು ಲಸಿಕೆಯಿಂದ ಎಂದರೆ ತಪ್ಪಾಗದು.ಲಸಿಕೆ ಹಾಕಿಸಿಕೊಂಡವರಿಗೆ ಕೊರೊನಾ ಸೊಂಕು ತಗುಲಿದರು ಯಾವುದೇ ಹಾನಿಯುಂಟಾಗುವುದಿಲ್ಲ.ಆದ್ದರಿಂದ ಸರಕಾರ ಈಗ ನಿಯಮ ಜಾರಿಗೊಳಿಸಿದಂತೆ ೧೮ ವರ್ಷ ಮೇಲ್ಪಟ್ಟ ಎಲ್ಲರು ಕೊರೊನಾ ಲಸಿಕೆಯನ್ನು ಹಾಕಿಸಿಕೊಳ್ಳೋಣ ಎಂದರು.ಅಲ್ಲದೆ ಕೋವಿಡ್ ನಿಯಮಗಳನ್ನು ಪಾಲಿಸುವ ಮೂಲಕ ಕೊರೊನಾ ನಿರ್ಮೂಲನೆಗೆ ಎಲ್ಲರು ಮುಂದಾಗೋಣ ಎಂದರು.

ಇದೇ ಸಂದರ್ಭದಲ್ಲಿ ಖುರೇಶಿ ಮೊಹಲ್ಲಾದ ೧೮೯ ಜನ ಲಸಿಕೆಯನ್ನು ಪಡೆದುಕೊಂಡರು.ಅಭಿಯಾನ ಉದ್ಘಾಟನೆಯಲ್ಲಿ ಮುಖಂಡರಾದ ಖುರೇಶಿ ಮೊಹಲ್ಲಾ ಸಂಘದ ಅಧ್ಯಕ್ಷ ಅಬ್ದುಲ ಮಜೀದ್ ಸಾಬ್,ಕಾರ್ಯದರ್ಶಿ ಮಹ್ಮದ್ ಜಹೀರ್,ಮಹ್ಮದ್ ಶಕೀಲ್,ಅಬ್ದುಲ್ ಗಫರ್ ಖುರೇಶಿ,ಶಕೀಲ್ ಅಹಮದ್ ಖುರೇಶಿ,ಅಬ್ದುಲ್ ರಹೀಂ ಖುರೇಶಿ,ಅಬ್ದುಲ್ ರಹೀಂ ಖುರೇಶಿ,ಅಬ್ದುಲ್ ಹಮೀರ್ ಸಾಬ್ ಖುರೇಶಿ ಹಾಗು ನಗರಸಭೆ ನರ್ಮಲ್ಯ ನಿರೀಕ್ಷಕ ಶಿವಪುತ್ರ ಹಾಗು ನಗರಸಭೆ ಮತ್ತು ಆರೋಗ್ಯ ಇಲಾಖೆಯ ಅನೇಕ ಸಿಬ್ಬಂದಿಗಳಿದ್ದರು.

emedialine

Recent Posts

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ದೊಡ್ಡಮನಿ ನಿಧನ

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…

1 hour ago

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

13 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

15 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

15 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

15 hours ago

ಮಹಿಳಾ ಘಟಕದ ನೂತನ ಪದಾಧಿಕಾರಿಗಳ ನೇಮಕ

ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…

16 hours ago