ಬಿಸಿ ಬಿಸಿ ಸುದ್ದಿ

ಜಿಲ್ಲಾ ಪಂಚಾಯತಿ ಕ್ಷೇತ್ರಗಳ ಮೀಸಲಾತಿ ಹಂಚಿಕೆ ಸರಿಪಡಿಸಿ: ಉಸ್ತಾದ ವಜಾಹತ್

ಸುರಪುರ: ಈ ಬಾರಿಯ ಜಿಲ್ಲಾ ಪಂಚಾಯತಿ ಚುನಾವಣೆ ಅಂಗವಾಗಿ ಘೋಷಣೆ ಮಾಡಲಾಗಿರುವ ಮೀಸಲಾತಿ ಹಂಚಿಕೆಯಲ್ಲಿ ಆದ ಅನ್ಯಾಯವನ್ನು ಸರಿಪಡಿಸುವಂತೆ ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಉಸ್ತಾದ ವಜಾಹತ್ ಹುಸೇನ್ ಒತ್ತಾಯಿಸಿದರು.

ನಗರದ ತಹಸೀಲ್ ಕಚೇರಿಯಲ್ಲಿ ತಹಸೀಲ್ದಾರರನ್ನು ಭೇಟಿ ಮಾಡಿ ಮಾತನಾಡಿ,ಸುರಪುರ ಮತಕ್ಷೇತ್ರದ ಎಲ್ಲಾ ೮ ಜಿಲ್ಲಾ ಪಂಚಾಯತಿ ಕ್ಷೇತ್ರಗಳಲ್ಲಿ ೭ ಸ್ಥಾನಗಳು ಮಹಿಳೆಯರಿಗೆ ಮತ್ತು ೧ ಸ್ಥಾನ ಪುರುಷರಿಗೆ ಎಂದು ಘೋಷಣೆ ಮಾಡಿರುವುದು ಅನ್ಯಾಯ.ಕಾನೂನಿನಂತೆ ಪ್ರತಿಶತ ೫೦ ರಷ್ಟು ಮಹಿಳೆಯರಿಗೆ ಮೀಸಲಿಡಲು ನಮ್ಮ ಅಭ್ಯಾಂತರವಿಲ್ಲ.ಅದರಂತೆ ಮಹಿಳೆಯರಿಗೆ ೪ ಸ್ಥಾನ ಮತ್ತು ಪುರುಷರಿಗೆ ೪ ಸ್ಥಾನ ನೀಡಿದರೆ ತೊಂದರೆಯಿಲ್ಲ.ಆದರೆ ಮಹಿಳೆಯರಿಗೆ ೭ ಸ್ಥಾನ ನೀಡಿರುವುದು ಅನ್ಯಾಯವಾಗಿದೆ.ಆದ್ದರಿಂದ ಈಗ ಆಗಿರುವ ಅನ್ಯಾರವನ್ನು ಸರಿಪಡಿಸಬೇಕು,ಇಲ್ಲವಾದಲ್ಲಿ ಜೆಡಿಎಸ್ ಪಕ್ಷದಿಂದ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.

ನಂತರ ಚುನಾವಣಾ ಆಯೋಗಕ್ಕೆ ಬರೆದ ಮನವಿಯನ್ನು ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರಾದ,ಮಲ್ಲನಗೌಡ ಬಾಚಿಮಟ್ಟಿ,ದೇವರಾಜ ಕಕ್ಕೇರಾ ಇತರರಿದ್ದರು.

emedialine

Recent Posts

371 (ಜೆ) ವಿಧಿಯ ನಿಬಂಧನೆಗಳ ಪರಿಣಾಮಕಾರಿ ಅನುμÁ್ಠನಕ್ಕೆ ಒತ್ತಾಯ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…

33 mins ago

ಮರಗಮ್ಮ ದೇವಿ ಮೂರ್ತಿ ಗಂಗಾಸ್ನಾನ | ಎಂಟು ಗಂಟೆಗಳ ಕಾಲ ಮೆರವಣಿಗೆ

ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…

38 mins ago

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

42 mins ago

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

46 mins ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

49 mins ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

56 mins ago