ಮೈಸೂರು: ಅರಸು ಪ್ರತಿಮೆ ಪ್ರತಿಷ್ಠಾಪನಾ ಸಮಿತಿಯ ಮನವಿಗೆ ಸ್ಪಂದಿಸಿ ಮೈಸೂರಿನ ಜಿಲ್ಲಾಧಿಕಾರಿಗಳಿಗೆ ಅಧಿಕೃತ ಆದೇಶವನ್ನು ಮುಖ್ಯಮಂತ್ರಿಗಳ ಸಚಿವಾಲಯ ಪ್ರಸ್ತಾವನೆಯನ್ನು ಕಳುಹಿಸಿದ್ದು. ಜಿಲ್ಲಾ ಉಸ್ತುವಾರಿ ಮಂತ್ರಿ ತಮ್ಮ ಕಾಲಘಟ್ಟದಲ್ಲಿ ಅರಸುರವರ ಪ್ರತಿಮೆಯನ್ನು ನಿರ್ಮಾಣ ಮಾಡಲು ಕೂಡಲೇ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಅರಸು ಪ್ರತಿಮೆ ಪ್ರತಿಷ್ಠಾಪನಾ ಸಮಿತಿಯ ಅಧ್ಯಕ್ಷರಾದ ಜಾಕೀರ್ ಹುಸೇನ್ ಒತ್ತಾಯಿಸಿದ್ದಾರೆ.
ಇಂದು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಜಾಕೀರ್ ಅವರು ಇತ್ತೀಚೆಗೆ ದೇವರಾಜ ಅರಸ್ ಹಿಂದುಳಿದ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಆರ್. ರಘು ಕೌಟಲ್ಯ ಅವರ ನೇತೃತ್ವದಲ್ಲಿ ಅರಸು ಪ್ರತಿಮೆ ಪ್ರತಿಷ್ಠಾಪನಾ ಸಮಿತಿಯ ನಿಯೋಗವು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರನ್ನು ಭೇಟ ಮಾಡಿ ಮನವಿ ಸಲ್ಲಿಸಲಾಗಿತ್ತು ಎಂದು ತಿಳಿಸಿದರು.
ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿ ಹಿಂದುಳಿದ. ಅಲ್ಪಸಂಖ್ಯಾತರ, ದೀನ ದಲಿತರ ಏಳಿಗೆಗಾಗಿ ಹತ್ತು ಹಲವಾರು ಆಡಳಿತಾತ್ಮಕ ಕಾರ್ಯಕ್ರಮಗಳ ಮೂಲಕ ಜಾರಿಗೆ ತಂದು. ಚಿರಸ್ಥಾಯಿಯಾಗಿರುವ ಮಾಜಿಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸ್ ಅವರ ಪ್ರತಿಮೆಯನ್ನು ಮೈಸೂರು ನಗರದಲ್ಲಿ (ಸಿದ್ದಾರ್ಥನಗರ) ನೂತನವಾಗಿ ನಿರ್ಮಾಣವಾಗಿರುವ ಜಿಲ್ಲಾಧಿಕಾರಿಗಳ ಆವರಣದ ಮುಂಭಾಗ ಅರಸು ರವರ ಪ್ರತಿಮೆಯನ್ನು ಪ್ರತಿಷ್ಠಾಪಿಸಲು ಹಲವಾರು ದಿನಗಳಿ೦ದ ಪ್ರಯತ್ನಿಸಲಾಗಿತ್ತು.
ಜಿಲ್ಲಾ ಉಸ್ತುವಾರಿ ಮಂತ್ರಿಗಳ ಕಾಲಘಟ್ಟದಲ್ಲಿ ಅರಸುರವರ ಪ್ರತಿಮೆಯನ್ನು ನಿರ್ಮಾಣ ಮಾಡಲು ಕೂಡಲೇ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡುವುದರ ಮುಖಾಂತರ ಇದೇ ಆಗಸ್ಟ್ 20ರಂದು ಅರಸುರವರ ಜನ್ಮದಿನವಾಗಿದ್ದು, ಅವರ ಪ್ರತಿಮೆಯನ್ನು ಲೋಕಾರ್ಪಣೆ ಮಾಡಬೇಕೆಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಸಮಿತಯ ಗೌರಧ್ಯಕ್ಷರಾದ ಎಂ. ಚಂದ್ರಶೇಖರ್, ರಾಜ್ಯ ಸಂಚಾಲಕ ಡೈರಿ ವೆಂಕಟೇಶ್, ಗೌರ ಸಲಹೆಗಾರರಾದ ಮಡ್ಡೀಕೆರೆ ಗೋಪಾಲ್, ಡಾ. ಡಿ ತಿಮ್ಮಯ್ಯ ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…