ಕಲಬುರಗಿ: ಹೊರವಲಯದ ಅಪ್ಪಾಜಿ ಶಿಕ್ಷಣ ಟ್ರಸ್ಟ್ ವತಿಯಿಂದ ಶಾಲಾ ಆವರಣದಲ್ಲಿಂದು ಹಮ್ಮಿಕೊಂಡ ಪರಿಸರ ಸಂರಕ್ಷಣೆ ಸಪ್ತಾಹ ಕಾರ್ಯಕ್ರಮ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರಾಜು ಲೇಂಗಟಿ ಅವರು ಸಸಿ ನೆಡುವ ಮೂಲಕ ಉದ್ಘಾಟಿಸಿದರು.
ಸಂಸ್ಥೆ ಅಧ್ಯಕ್ಷೆ ಭಾಗಮ್ಮಾ ಆರ್ ಉದನೂರ, ಪ್ರಮುಖರಾದ ಮಾಲಾ ದಣ್ಣೂರ, ಮಾಲಾ ಕಣ್ಣಿ, ಭುವನೇಶ್ವರಿ ಹಳ್ಳಿಖೇಡ, ಸುರೇಶ ಬಡಿಗೇರ, ವಿಜಯಕುಮಾರ ತೇಗಲತಿಪ್ಪಿ, ರಾಜಕುಮಾರ ಉದನೂರ, ಸುರೇಶ ವಗ್ಗೆ, ಶರಣರಾಜ್ ಛಪ್ಪರಬಂದಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.