ಗೀತಾಸಾರ ಬಿಡುಗಡೆ ಇಂದು

0
5

ಕಲಬುರಗಿ: ಪತ್ರಕರ್ತ ಶಾಮಸುಂದರ ಕುಲಕರ್ಣಿ ರಚಸಿದ ಗೀತಾಸಾರ ಪುಸ್ತಕ ಬಿಡುಗಡೆ ಸಮಾರಂಭ ಜಯತೀರ್ಥ ನಗರದ ಶ್ರೀ ಲಕ್ಷ್ಮೀ ನಾರಾಯಣ ಮಂದಿರದಲ್ಲಿ ಬುಧವಾರ ಸಂಜೆ ೭ಕ್ಕೆ ಜರುಗಲಿದೆ.

ಪಂ.ಗೋಪಾಲಾಚಾರ್ಯ ಅಕಮಂಚಿ ಸಾನ್ನಿಧ್ಯ ವಹಿಸಲಿದ್ದು, ವಿಜಯವಾಣಿ ಪತ್ರಿಕೆ ಸ್ಥಾನಿಕ ಸಂಪಾದಕ ವಾದಿರಾಜ ವ್ಯಾಸಮುದ್ರ ಪುಸ್ತಕ ಬಿಡುಗಡೆಗೊಳಿಸುವರು. ಉತ್ತರಾದಿ ಮಠದ ಮಠಾಧಿಕಾರಿ ರಾಮಾಚಾರ್ಯ ಘಂಟಿ, ದಾಸ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರವಿ ಲಾತೂರಕರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ನಿವೃತ್ತ ಉಪನ್ಯಾಸಕ ವ್ಯಾಸರಾಜ ಸಂತೆಕೆಲ್ಲೂರ ಪುಸ್ತಕ ಪರಿಚಯ ಮಾಡುವರು ಎಂದು ದಾಸ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರವಿ ಲಾತೂರಕರ್ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here