ಶಹಾಬಾದ: ನಗರಸಭೆಯ ವ್ಯಾಪ್ತಿಯಲ್ಲಿ ನಿರಂತರ ನೀರು ಸರಬರಾಜು ಯೋಜನೆ(೨೪*೭)ಯಡಿ ಬಳಕೆ ಮಾಡುತ್ತಿರುವ ಬಳಕೆದಾರರು ನೀರಿನ ಕರವನ್ನು ೭ ದಿನಗಳ ಒಳಗಾಗಿ ಸಾರ್ವಜನಿಕರು ನಗರಸಭೆಯ ಕಾರ್ಯಾಲಯದಲ್ಲಿ ಸಲ್ಲಿಸಿ ಸ್ವೀಕೃತಿಯನ್ನು ಪಡೆಯಬೇಕೆಂದು ನಗರಸಭೆಯ ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ ತಿಳಿಸಿದರು.
ಅವರು ಬುಧವಾರ ನಗರಸಭೆಯ ಕಾರ್ಯಾಲಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ,ಈಗಾಗಲೇ ನಿರಂತರ ನೀರು ಸರಬರಾಜು ಯೋಜನೆ(೨೪*೭)ಯಡಿ ವಾಸ/ವಾಣೀಜ್ಯ ಉದ್ದೇಶಕ್ಕಾಗಿ ನೀರನ್ನು ಬಳಕೆ ಮಾಡಲಾಗುತ್ತಿದೆ. ಸಂಪರ್ಕ ಪಡೆದ ಬಳಕೆದಾರರು ನೀರಿನ ಕರವನ್ನು ಬಾಕಿ ಮೊತ್ತ ಸಹಿತ ಚಾಲ್ತಿ (೨೦೨೧-೨೨) ನೇ ಸಾಲಿನವರೆಗಿನ ಕರವನ್ನು ನೀಡತಕ್ಕದ್ದು. ತಪ್ಪಿದಲ್ಲಿ ಯಾವುದೇ ಮುನ್ಸೂಚನೆ ನೀಡದೇ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು.
ಒಮ್ಮೆ ಕಡಿತಗೊಳಿಸಿದ ಸಂಪರ್ಕವನ್ನು ಮರು ಜೋಡಣೆ ಮಾಡಬೇಕಾದರೆ ಅದಕ್ಕೆ ತಗುಲುವ ನೀರಿನ ಸಂಪರ್ಕ ಕಡಿತದ ವೆಚ್ಚ ಹಾಗೂ ಮರುಜೋಡಣಾ ವೆಚ್ಚವನ್ನು ತಾವೇ ಭರಿಸಬೇಕಾಗುತ್ತದೆ.ಅಲ್ಲದೇ ಕರ್ನಾಟಕ ಪುರಸಭೆಗಳ ಅಧಿನಿಯಮ ೧೯೬೪ರ ಪ್ರಕಾರ ನೀರಿನ ಶುಲ್ಕ ವಸೂಲಾತಿಗೆ ಕ್ರಮ ಜರುಗಿಸಲಾಗುವುದು.ಸಾರ್ವಜನಿಕರು ಬಾಕಿ ಮೊತ್ತ ಸಹಿತ ಚಾಲ್ತಿ ನೀರಿನ ಕರವನ್ನು ನಿಗಧಿತ ಅವಧಿಯೊಳಗೆ ಸಲ್ಲಿಸತಕ್ಕದ್ದು ಎಂದು ತಿಳಿಸಿದ್ದಾರೆ.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…