ಜಾಗತಿಕ ಲಿಂಗಾಯಿತ ಮಹಾಸಭಾ ನೂತನ ಕಾರ್ಯಲಯ ಉದ್ಘಾಟನೆ

ಅಫಜಲಪುರ : ಅಫಜಲಪುರ ಪಟ್ಟಣದ ಬಸಣ್ಣ ಗುಣಾರಿ ಬಿಲ್ಡಿಂಗನಲ್ಲಿ ತಾಲೂಕ ಜಾಗತಿಕ ಲಿಂಗಾಯತ ಮಹಾಸಭಾ ಕಾರ್ಯಲಯವನ್ನು ಬೆಂಗಳೂರಿನ ಜಾಗತಿಕ ಲಿಂಗಾಯಿತ ಮಹಾಸಭಾ ಸದಸ್ಯರಾದ ಡಾ. ಜೆ.ಎಸ್.ಪಾಟೀಲ ಅವರು ಉದ್ಘಾಟಿಸಿ ನೆರವೇರಿಸಿದರು.

ನಂತರ ಮಾತನಾಡಿದ ಅವರು ಜಾಗತಿಕ ಲಿಂಗಾಯತ ಮಹಾಸಭೆ ರಾಷ್ಟ್ರ ಮಟ್ಟದಲ್ಲಿ ಉದ್ಘಾಟಿಸಿಲು ಕಾರಣ ಮತ್ತು ಅದರ ಅನಿವಾರ್ಯತೆಯನ್ನು ತಿಳಿಸಿದಲ್ಲದೇ ಲಿಂಗಾಯತ ಧರ್ಮದ ಒಗ್ಗಟ್ಟಿಗಾಗಿ ಐತಿಹಾಸಿಕ ಸೈದ್ದಾಂತಿಕ, ಸಂಘಟನಾತ್ಮಕ ನೆಲೆಗಟ್ಟು ಅನಿವಾರ್ಯವೆಂದರು.

ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಪೂಜ್ಯ ಶ್ರೀ ವಿಶ್ವನಾಥ ಕೋಣೇಶ್ವರರು ಮಾತನಾಡಿ ನಿಮ್ಮ‌ ನಂತರದ ಪೀಳಿಗೆಗೆ ಅಂದರೆ ಯುವಕರಿಗೆ ಲಿಂಗಾಯತ ಧರ್ಮದ ತತ್ವ ಸಿದ್ದಾಂತಗಳು ತಿಳುವಳಿಕೆ ನೀಡುವುದು ಬಹಳ ಅಗತ್ಯವಾಗಿದೆ ಎಂದು ಮಾರ್ಮಿಕವಾಗಿ ಹೇಳಿದರು.  ಕಲ್ಬುರ್ಗಿ ಜಿಲ್ಲಾ ಜಾಗತಿಕ ಲಿಂಗಾಯತ ಮಹಾಸಭಾ ಅದ್ಯಕ್ಷರಾದ ಪ್ರಭುಲಿಂಗ ಮಹಾಗಾಂವಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾರ್ಯಕ್ರಮದ ನೇತೃತ್ವವನ್ನು ಅಫಜಲಪುರ ತಾಲೂಕ ಜಾಗತಿಕ ಲಿಂಗಾಯತ ಮಹಾಸಭಾದ ಅಧ್ಯಕ್ಷ ಬಸಣ್ಣ ಗುಣಾರಿ ಅವರು ಮಾತನಾಡಿ ತಾಲೂಕ ಮಟ್ಟದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ಕಚೇರಿ ಪ್ರಾರಂಭ ಮಾಡುವುದು ಬಹುದಿನದ ಆಸೆಯಾಗಿತ್ತು ಇಂದು ಉದ್ಘಾಟನೆಗೊಂಡಿದೆ ಎಂದು ಸಂತಸ ವ್ಯಕ್ತಪಡಿಸಿದ ಅವರು ಈ ಕಾರ್ಯಲಯದಲ್ಲಿ ಇನ್ನು ಮುಂದೆ ಹತ್ತು ಹಲವಾರು ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದ ಅವರು ಈಗಾಗಲೇ ಮಹಾಸಭಾದ ಅಡಿಯಲ್ಲಿ ತಾಲೂಕ ಮಟ್ಟಣದಲ್ಲಿ ಅನೇಕ ಸಮಾಜಮುಖಿ ಕಾರ್ಯಕ್ರಮಗಳು ಮತ್ತು ಬಸವಣ್ಣನವರ ಚಿಂತನೆ ಹಾಗೂ ವಿಚಾರಗಳು ಜರುಗಿವೆ ಎಂದು ತಿಳಿಸಿದರು.
ಪ್ರಸ್ತಾವಿಕವಾಗಿ ಶರಣ ಅಮೃತರಾವ ಪಾಟೀಲ ಮಾತನಾಡಿದರು.

ಕಾರ್ಯಕ್ರಮದಲ್ಲಿ ಶರಣ ಗೋಪಾಲ ಹಳ್ಳಾಳ ಅವರು ಫ.ಗು.ಹಳಕಟ್ಟಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು, ಕಾರ್ಯಕ್ರಮದದಲ್ಲಿ ಕಲ್ಬುರ್ಗಿ ಜಾಗತಿಕ ಲಿಂಗಾಯತ ಮಹಾಸಭಾ ಪ್ರಧಾನ ಕಾರ್ಯದರ್ಶಿ ಆರ್.ಜಿ.ಶೆಟಗಾರ, ರೈತಪರ ಹೋರಾಟಗಾರ ಶ್ರೀಮಂತ ಬಿರಾದಾರ, ಸದಾಶಿವ ಮೇತ್ರೆ, ರಾಜೇಂದ್ರ ನಿರೋಣಿ, ಡಾ.ಸಿ.ವಿ.ಟಕ್ಕಳಕಿ, ಶಂಕ್ರೆಪ್ಪ ಮಣ್ಣೂರ, ಮುರಗೇಂದ್ರ ಮಸಳಿ, ಸಿದ್ದಣಗೌಡ ಮಾಲಿಪಾಟೀಲ, ಇದ್ದರು.

ವಚನ ಸಂಗೀತವನ್ನು ಶರಣೆ ಮಹಾನಂದ ಪಾಟೀಲ ನಡಿಸಿಕೊಟ್ಟರು,ಪ್ರ.ಕಾರ್ಯದರ್ಶಿ ಮಹೇಶ ಆಲೇಗಾಂವ ಅವರು ಸ್ವಾಗತಿಸಿದರು. ನಿರೂಪಣೆಯನ್ನು ಸ್ಪೂರ್ತಿ ಕಾಲೇಜಿನ ಸಂಸ್ಥಾಪಕರಾದ ಜಿ.ಎಸ್.ಬಾಳಿಕಾಯಿ ನಡಿಸಿಕೊಟ್ಟರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

11 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

13 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

13 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

13 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

13 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420