ಕಲಬುರಗಿ: ವಿಜಯ ಭಾಸ್ಕರ ಸಮಿತಿಯ ಆಡಳಿತ ಸುಧಾರಣೆ ವರದಿಯಂತೆ ಪ್ರಾದೇಶಿಕ ಆಯುಕ್ತರ ಕಛೇರಿ ರದ್ದು ಮಾಡುವುದು ಆಡಳಿತ ವಿಕೇಂದ್ರಿಕರಣ ವ್ಯವಸ್ಥೆಗೆ ವಿರುದ್ಧವಾಗಿದೆ. ಹಿಂದುಳಿದ ಕಲ್ಯಾಣ ಕರ್ನಾಟಕ ಪ್ರದೇಶದಂತಾ ನಮ್ಮ ಭಾಗದ ಅಭಿವೃದ್ಧಿಗೆ ಇದು ಮಾರಕವಾಗುತ್ತದೆ ಎಂದು ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾದ ಲಕ್ಷ್ಮಣ ದಸ್ತಿಯವರು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
ವಿಜಯ ಭಾಸ್ಕರ ಸಮಿತಿಯ ಆಡಳಿತ ಸುಧಾರಣೆಯ ವರದಿಯಲ್ಲಿ ಬಹಳಷ್ಟು ಅಂಶಗಳು ಜನಪರ ಆಡಳಿತಕ್ಕೆ ಪೂರಕವಾಗಿವೆ ಅದಕ್ಕೆ ನಮ್ಮ ಸಮತಿ ಸ್ವಾಗತಿಸುತ್ತದೆ ಆದರೆ ಪ್ರಾದೇಶಿಕ ಆಯುಕ್ತರ ಕಛೇರಿ ರದ್ದು ಮಾಡಿ ಕಂದಾಯ ಆಯುಕ್ತಾಲಯದ ರಚನೆಯ ಶಿಫಾರಸ್ಸು ರಾಜಧಾನಿ ಬೆಂಗಳೂರಿಗೆ ಅಧಿಕಾರ ಕೇಂದ್ರೀರಣ ಮಾಡಿದಂತಾಗುವದು. ರಾಜಧಾನಿ ಬೆಂಗಳೂರಿನಿಂದ ಬಹು ದೂರವಿರುವ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಇದರಿಂದ ಬಹಳ ತೊಂದರೆ ಆಗುವುದರಲ್ಲಿ ಸಂಶಯವೆ ಇಲ್ಲಾ ಸಮಿತಿ ಇದಕ್ಕೆ ಬಲವಾಗಿ ಖಂಡಿಸುತ್ತದೆ.
ಸರಕಾರ ಪ್ರಾದೇಶಿಕ ಆಯುಕ್ತರ ಕಛೇರಿ ರದ್ದು ಮಾಡುವ ಶಿಫಾರಸ್ಸು ಕೈ ಬಿಡಬೇಕು. ಈ ಬಗ್ಗೆ ಕಲ್ಯಾಣ ಕರ್ನಾಟಕ ಪ್ರದೇಶದ ಸಚಿವರು, ಸಂಸದರು, ಶಾಸಕರು ಗಂಭೀರವಾಗಿ ಪರಿಗಣಿಸಲು ಸಮಿತಿ ಒತ್ತಾಯಿಸುತ್ತದೆ.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…