ಚವ್ಹಾಣ ಬಳಗದಿಂದ ಪತ್ರಿಕಾ ವಿತರಕರಿಗೆ ಆಹಾರದ ಕಿಟ್‌ ವಿತರಣೆ

ಶಹಾಬಾದ:ಕೋವಿಡ್‌ನಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕಲಬುರಗಿ ಗ್ರಾಮೀಣ ಮತಕ್ಷೇತ್ರದಲ್ಲಿ ಜನಸೇವೆಯ ಮೂಲಕ ಮನೆಮಾತಾಗಿರುವ ಕಾಂಗ್ರೆಸ್ ಮುಖಂಡ ರವಿ ಚವ್ಹಾಣ ಭವಿಷ್ಯದ ಉತ್ತಮ ನಾಯಕರಾಗಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮರ್ಚಂಟ್ ಹೇಳಿದರು. ಅವರು ನಗರದಲ್ಲಿ ಶಮ್ಸ್ ಸಭಾಂಗಣದಲ್ಲಿ ರವಿ ಚವ್ಹಾಣ ಅಭಿಮಾನಿ ಬಳಗದ ವತಿಯಿಂದ ಅವರ ೩೫ನೇ ಹುಟ್ಟು ಹಬ್ಬದಂದು ಪತ್ರಿಕಾ ವಿತರಕರಿಗೆ ಆಹಾರದ ಕಿಟ್‌ಗಳನ್ನು ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಲಾಕಡೌನ್ ಹೇರಲಾಗಿರುವ ಸಂದರ್ಭದಲ್ಲಿ ಸಂಕ?ದಲ್ಲಿ ಇರುವವರಿಗೆ ಬಹಳಷ್ಟು ಸಹಾಯ ಮಾಡಿದ್ದಾರೆ. ಮುಂದೆಯೂ ಈ ಕಾರ್ಯ ಮುಂದುವರಿಸಿದರೇ ಮುಂಬರುವ ದಿನಗಳಲ್ಲಿ ಜನರಿಂದಲೇ ಜನನಾಯಕರಾಗಿ ಹೊರಹೊಮ್ಮಲಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಮುಖಂಡ ರವಿ ಚವ್ಹಾಣ ಮಾತನಾಡಿ, ಕೋವಿಡ್ ಎರಡನೇ ಅಲೆಯಿಂದ ಇಡೀ ವಿಶ್ವವೇ ತತ್ತರಿಸಿ ಹೋಗಿದೆ. ಇಂಥ ಸಂದರ್ಭದಲ್ಲೂ ಪತ್ರಿಕೋದ್ಯಮ ಕ್ಷೇತ್ರ ಸಮಾಜ ಸೇವೆಯನ್ನು ಮುಂದುವರಿಸಿದೆ. ಪತ್ರಿಕೋದ್ಯಮ ಕ್ಷೇತ್ರಕ್ಕೆ ಬೆನ್ನೆಲುಬಾಗಿ ನಿಂತಿರುವ ಪತ್ರಿಕಾ ವಿತರಕರು ಅನೇಕ ಸವಾಲುಗಳನ್ನು ಎದುರಿಸಿ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ. ಪತ್ರಿಕಾ ವಿತರಕರು ಪ್ರತಿದಿನವೂ ಹಲವಾರ ಜನರೊಂದಿಗೆ ನಿಕಟ ಸಂಪರ್ಕದಲ್ಲಿರುತ್ತಾರೆ. ಪ್ರತಿಯೊಬ್ಬರೂ ಪರಸ್ಪರ ಅಂತರ ಕಾಪಾಡಿಕೊಂಡು, ಕೋವಿಡ್ ನಿಯಮಾವಳಿಗಳನ್ನು ಪಾಲಿಸುವ ಮೂಲಕ ಇತರರಿಗೆ ಮಾದರಿಯಾಗಬೇಕು ಎಂದು ಸಲಹೆ ನೀಡಿದರು.

ಕಾಂಗ್ರೆಸ್ ಉಪಾಧ್ಯಕ್ಷ ವಿಜಯಕುಮಾರ ಮುಟ್ಟತ್ತಿ, ಶರಣಗೌಡ ಪಾಟೀಲ, ಮೃತ್ಯುಂಜಯ್ ಹಿರೇಮಠ, ಗಿರೀಶ ಕಂಬಾನೂರ,ಹಾಷಮ್‌ಖಾನ, ವಿಶ್ವರಾಧ್ಯ ಬೀರಾಳ,ಕಿಶನ್ ನಾಯಕ, ಕುಮಾರ ಚವ್ಹಾಣ, ಅನ್ವರ ಪಾಶಾ, ಸುಲೇಮಾನ ಕೋಲಾರಕರ್, ಪೀರಪಾಶಾ, ಕಿರಣ ಚವ್ಹಾಣ,ಬಾಬಾಖಾನ, ಮಹ್ಮದ್ ಜಾವೀದ್,ಮೇರಾಜ ಸಾಹೇಬ,ಮರಲಿಂಗ ಕಮರಡಗಿ,ಸಾಹೇಬಗೌಡ ಬೋಗುಂಡಿ, ಮಹ್ಮದ್ ಬಾಕ್ರೋದ್ದಿನ್, ತಿಪ್ಪಣ್ಣ ನಾಟೇಕಾರ, ನಾಗರಾಜ ಕರಣಿಕ್, ಸಾಬೇರಾಬೇಗಂ,ಡಾ.ಅಹ್ಮದ್ ಪಟೇಲ್,ನಿಂಗಣ್ಣ ಸಂಗಾವಿಕರ್,ಮುನ್ನಾ ಪಟೇಲ್,ಮಲ್ಲಿಕಾರ್ಜುನ ವಾಲಿ, ಮೆಹಬೂಬ, ಸಯ್ಯದ್ ಜಹೀರ್,ರಾಜೇಶ ಯನಗುಂಟಿಕರ್,  ಅನ್ವರ ಚಪಾಟ್ಲೆ, ಮ.ರಫಿಕ್ ಕಾರೋಬಾರಿ,ಅವಿನಾಶ ಕಂಬಾನೂರ,ಮ. ಇಮ್ರಾನ್, ಶಂಕರ ಕೋಟನೂರ, ಭರತ್ ರಾಠೋಡ, ಅಜೀಮ್ ಸೇಠ ಇತರರು ಇದ್ದರು.

emedialine

Recent Posts

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

1 hour ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

2 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

4 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

15 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

17 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

17 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420