ಸಾಕ್ಷಾತ್ ನರಕದರ್ಶನ ; ಜೇವರ್ಗಿ ಮಿನಿವಿಧಾನಸೌಧ ಆವರಣ: ತಾಲೂಕ ಕಚೇರಿಯ ಸ್ವಚ್ಛತೆ ಇಲ್ಲಿ ಮರಿಚಿಕೆ !!

ಜೇವರ್ಗಿ: ತಾಲ್ಲೂಕಿನ ಮಿನಿವಿಧಾನಸೌಧದ ಆವರಣವು ಸಾರ್ವಜನಿಕರಿಂದ ಸದಾ ಗಿಜಿಗುಡುತ್ತಿದ್ದು ಇಲ್ಲಿರುವ ಹೊಲಸು ಹಾಗೂ ಧೂಳಿನಿಂದಾಗಿ ಸಾರ್ವಜನಿಕರು ಮೂಗು ಮುಚ್ಚಿಕೊಂಡು ತಿರುಗಾಡುವ ಪರಿಸ್ಥಿತಿ ನಿರ್ಮಾಣವಾಗಿದೆ .

ಇಲ್ಲಿನ ತಾಲೂಕು ಕಚೇರಿ ಆಡಳಿತ ವ್ಯವಸ್ಥೆಯನ್ನು ಹತೋಟಿಯಲ್ಲಿಟ್ಟುಕೊಂಡು ತಾಲೂಕಿನ ಸುಭಿಕ್ಷವಾಗಿ ನಡೆಸುವ ಜವಾಬ್ದಾರಿ ಇರುವ ತಸಿಲ್ದಾರ್ ಕಾರ್ಯಲಯ ತಮ್ಮ ಕಛೇರಿಯ ಆವರಣವನ್ನು ಚೊಕ್ಕಟವಾಗಿ ನಿರ್ವಹಿಸದಿದ್ದರೆ ಸಂಪೂರ್ಣ ತಾಲೂಕನ್ನು ನಿರ್ವಹಿಸುವುದು ಹೇಗೆ ? ಜೇವರ್ಗಿ ತಾಲೂಕು ಆಡಳಿತ ಕೇಂದ್ರ ಮಿನಿ ವಿಧಾನಸೌಧದ ಆವರಣದಲ್ಲಿ ಎಲ್ಲೆಂದರಲ್ಲಿ ಗುಟ್ಕಾ ತಿಂದು ಉಗಿಯುವುದು ಹಾಗೂ ಉಳುವುದು ಕಸಕಡ್ಡಿಗಳನ್ನು ಎಸೆಯುವುದು ಸಾಮಾನ್ಯವಾಗಿದ್ದು ಇದನ್ನು ತಡೆಯುವ ಕಟ್ಟುನಿಟ್ಟಿನ ಕ್ರಮ ಹಾಗೂ ಸ್ವಚ್ಛಗೊಳಿಸುವಲ್ಲಿ ಇಲ್ಲಿನ ಸಿಬ್ಬಂದಿಗಳು ಆಲಸ್ಯತನ ತೋರುತ್ತಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ. ಇಲ್ಲಿನ ಸಾರ್ವಜನಿಕ ಶೌಚಾಲಯ ಹಾಗೂ ಮೂತ್ರಾಲಯ ಸಂಪೂರ್ಣವಾಗಿ ಹದಗೆಟ್ಟಿದ್ದು ಗಬ್ಬು ಹಾಗೂ ಕೊಳಕು ವಾಸನೆಯಿಂದ ತಾಲೂಕು ಕಚೇರಿಗೆ ಕೆಲಸದ ನಿಮಿತ್ತ ಆಗಮಿಸುವ ಸಾರ್ವಜನಿಕರು ಮಹಿಳೆಯರು, ವಯೋವೃದ್ಧರು, ನರಕ ಯಾತನೆ ಅನುಭವಿಸಿ ಮೂಗುಮುಚ್ಚಿಕೊಂಡು ತಿರುಗು ಪರಿಸ್ಥಿತಿ ನಿರ್ಮಾಣವಾಗಿದೆ.

ಪ್ರತಿನಿತ್ಯ ಒಂದಾದರೂಂದು ಕೆಲಸದ ನಿಮಿತ್ತ ತಾಲೂಕು ಆಡಳಿತ ಕಚೇರಿ ಆಗಮಿಸುವ ರೈತರು ಹಾಗೂ ಮಹಿಳೆಯರು ಸೇರಿದಂತೆ ವಿದ್ಯಾರ್ಥಿ ಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಇರುವುದಿಲ್ಲ , ಅಲ್ಲದೆ ಸಾರ್ವಜನಿಕರಿಗೆ ಕುಳಿತುಕೊಳ್ಳಲು ಆಸನ ವ್ಯವಸ್ಥೆ ಇರುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಲ್ಲಿನ ವಿಧಾನಸೌಧ ಆವರಣದಲ್ಲಿ ಮುದ್ರಣಾಲಯವನ್ನು ನೋಡಿದರೆ ನರಕ ಎಂದರೆ ಇದೇನಾ ಎನ್ನುವುದು ಕಂಡುಬರುತ್ತದೆ. ಇದರಿಂದಾಗಿ ರೋಗರುಜಿನಗಳು ಹುಟ್ಟಿಕೊಳ್ಳುವುದು ಸಾಮಾನ್ಯವಾಗಿದೆ ಎನ್ನುವುದು ಸಾರ್ವಜನಿಕರ ಅಭಿಮತವಾಗಿದೆ.

ಜೇವರ್ಗಿ ತಾಲೂಕ ಸಂಕಿರಣ ಮಿನಿ ವಿಧಾನಸೌಧವನ್ನು ಸ್ವಚ್ಛಗೊಳಿಸಿ ಸಾರ್ವಜನಿಕರಿಗೆ ವಿಧಾನಸೌಧ ಒಳಗಡೆ ಮುಕ್ತವಾಗಿ ಉಸಿರಾಡುತ್ತಾ ಆಗಮಿಸುವಂತೆ ಕ್ರಮಕೈಗೊಳ್ಳುವಲ್ಲಿ ಕ್ಷೇತ್ರದ ಯುವ ಶಾಸಕರಾದ ಡಾಕ್ಟರ್ ಅಜಯ್ ಸಿಂಗ್ ಕ್ರಮ ಕೈಗೊಳ್ಳಬೇಕಿದೆ, ಇವರು ಕೇವಲ ಕಾಟಾಚಾರಕ್ಕಾಗಿ ಮಾತ್ರ ಅಧಿಕಾರಿಗಳ ಸಭೆ ಹಾಗೂ ಮೇಲುಸ್ತುವಾರಿಯನ್ನು ವಹಿಸಿಕೊಂಡು ರಾಜ್ಯಧಾನಿ ಯತ್ತ ಮುಖ ಮಾಡುತ್ತಾರೆ. ಇಲ್ಲಿನ ಆಡಳಿತ ಕಛೇರಿಗಳ ಸ್ವಚ್ಛತೆ ಬಗ್ಗೆ ಗಮನ ಕೊಡುತ್ತಿಲ್ಲ ಎನ್ನುವುದು ಸಾರ್ವಜನಿಕರ ದೂರಾಗಿದೆ.

ಈ ಹಿಂದೆ ಹಲವು ಬಾರಿ ಈ ಕುರಿತಂತೆ ತಶಿಲ್ದಾರ ಗಮನಕ್ಕೆ ಈ ವಿಷಯವನ್ನು ತಂದರೂ ಸಹ ಅವರು ಕ್ಯಾರೆ ಎನ್ನುತ್ತಿಲ್ಲ ! ಇನ್ನಾದರೂ ತಾಲೂಕು ಕಚೇರಿ ಸಂಖ್ಯೆಯನ್ನು ಸ್ವಚ್ಛ ಹಾಗೂ ಸುಂದರ ಗಳಿಸುವಲ್ಲಿ ಕ್ರಮಕೈಗೊಳ್ಳುವರೆ? ಕಾದುನೋಡಬೇಕಿದೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

2 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

5 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

5 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

5 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

5 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

5 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420