ಸಾರ್ವಜನಿಕರಿಂದ ಸಲಹೆ, ಆಕ್ಷೇಪಣೆ ಆಹ್ವಾನ

0
24

ಕಲಬುರಗಿ: ನಗರದ ರಾಷ್ಟ್ರಪತಿ ಚೌಕ್‍ದಿಂದ ರಾಮಮಂದಿರ ರಸ್ತೆಯಲ್ಲಿ ಬರುವ ರೈಲ್ವೆ ಮೇಲುಸೇತುವೆಗೆ ಸ್ವಾಮಿ ವಿವೇಕಾನಂದ ಅವರ ಹೆಸರನ್ನು ನಾಮಕರಣ ಮಾಡಲಾಗುತ್ತಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಮತ್ತು ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆಯ ವಲಯ ಕಚೇರಿ-1ರ ವಲಯ ಆಯುಕ್ತರು ತಿಳಿಸಿದ್ದಾರೆ.

ಈ ಕುರಿತು ಸಾರ್ವಜನಿಕರಿಂದ ಸಲಹೆ ಮತ್ತು ಆಕ್ಷೇಪಣೆಗಳಿದ್ದಲ್ಲಿ ಈ ಪತ್ರಿಕಾ ಪ್ರಕಟಣೆ ಪ್ರಕಟಗೊಂಡ 30 ದಿನದೊಳಗಾಗಿ ಕಲಬುರಗಿ ಮಹಾನಗರ ಪಾಲಿಕೆ ವಲಯ ಕಚೇರಿ-1ರಲ್ಲಿ ಸಲ್ಲಿಸಬೇಕು. ನಿಗದಿಪಡಿಸಿದ ಅವಧಿಯ ನಂತರ ಬಂದ ಸಲಹೆ ಮತ್ತು ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.

Contact Your\'s Advertisement; 9902492681

ಕಲಬುರಗಿ ನಗರದ ರಾಷ್ಟ್ರಪತಿ ಚೌಕ್‍ದಿಂದ ರಾಮಮಂದಿರ ರಸ್ತೆಯಲ್ಲಿ ಬರುವ ರೈಲ್ವೆ ಮೇಲುಸೇತುವೆಗೆ ಸ್ವಾಮಿ ವಿವೇಕಾನಂದ ಅವರ ಹೆಸರನ್ನು ನಾಮಕರಣ ಮಾಡಲು ಸೂಕ್ತ ಕ್ರಮಕೈಗೊಳ್ಳಬೇಕೆಂದು ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕರು ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃಧ್ದಿ ಮಂಡಳಿ ಅಧ್ಯಕ್ಷರಾದ ದತ್ತಾತ್ರೇಯ ಸಿ.ಪಾಟೀಲ ರೇವೂರ ಅವರು ಕಲಬುರಗಿ ಮಹಾನಗರ ಪಾಲಿಕೆಗೆ ಪತ್ರ ಬರೆದು ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here