ಬಿಸಿ ಬಿಸಿ ಸುದ್ದಿ

ಜನಸೇವೆಯೇ ಜನಾರ್ದನ ಸೇವೆ ಎಂದು ಭಾವಿಸಿದ ವ್ಯಕ್ತಿ ರಾಠೋಡ:ಕಂಬಳೇಶ್ವರ ಶ್ರೀಗಳು

ಚಿತ್ತಾಪುರ: ಜನ ಸಾಮಾನ್ಯರ ಕಷ್ಟಕ್ಕೆ ತಕ್ಷಣ ಧಾವಿಸಿ,ಜನಸೇವೆಯೇ ಜನಾರ್ಧನ ಸೇವೆ ಎಂದು ಸೇವೆ ಮಾಡುತ್ತಿರುವ ಯುವ ನಾಯಕ ಅಶ್ವಥ ರಾಠೋಡ ಎಂದು ಕಂಬಳೇಶ್ವರ ಮಠದ ಪೀಠಾಧಿಪತಿ ಶ್ರೀ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಪಟ್ಟಣದ ಅಕ್ಕಮಹಾದೇವಿ ದೇವಾಲಯದ ಆವರಣದಲ್ಲಿ ಕಲಬುರ್ಗಿ ಜಿಲ್ಲಾ ಘೋರ ಸೇನಾ ಉಪಾಧ್ಯಕ್ಷ, ಬಿಜೆಪಿ ಯುವ ಮುಖಂಡ ಅಶ್ವಥ ರಾಠೋಡ ಅವರ 30ನೇ ವರ್ಷದ ಹುಟ್ಟು ಹಬ್ಬದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಶ್ರೀಗಳು ಜನಸಾಮಾನ್ಯರು ಕಷ್ಟದಲ್ಲಿರುವ ಪರಿಸ್ಥಿತಿಯಲ್ಲಿ ನೋಡಿ ತಮ್ಮ ಕೈಲಾದ ಸಹಾಯ ಮಾಡುತ್ತಾರೆ,ಸೇವಾ ಮನೋಭಾವ ಹೊಂದಿದ್ದಾರೆ.ಎಲ್ಲಾ ವರ್ಗದ ಜನರೊಂದಿಗೆ ಆರೋಗ್ಯಕರ ಸಂಬಂದ ಹೊಂದಿದ್ದಾರೆ.ಒಳ್ಳೆಯ ಸಂಸ್ಕಾರ ಹೊಂದಿದ್ದ ಇಂತಹ ಯುವಕರು ದೇಶದ ಭವಿಷ್ಯದ ನಿರ್ಮಾಣದಲ್ಲಿ ಅತ್ಯಂತ ಮಹತ್ವದ ಪಾತ್ರ ವಹಿಸುತ್ತಾರೆ ಎಂದು ಆಶೀರ್ವಚನ ನೀಡಿದರು.

ಪುರಸಭೆ ಸದಸ್ಯ ಶ್ಯಾಮ ಮೇಧಾ ಮಾತನಾಡಿ ರಾಷ್ಟ್ರದ ಬಗ್ಗೆ ಅತ್ಯಂತ ಗೌರವ ಪ್ರೀತಿ ಹೊದಿಂದ ವ್ಯಕ್ತಿ.ಇಂತಹ ಯುವಕರು ಈ ನಾಡಿಗೆ ಬೇಕು ಇವರಲ್ಲಿರುವ ಸೇವಾ ಮನೋಭಾವ ಯುವಕರಿಗೆ ಸ್ಫೂರ್ತಿ ನೀಡಲಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಜಿ.ಪಂ.ಸದಸ್ಯ ಅರವಿಂದ ಚೌಹಾಣ್,ಪುರಸಭೆ ನಾಮ ನಿರ್ದೇಶನ ಸದಸ್ಯರಾದ ಮನೋಜಕುಮಾರ ರಾಠೋಡ, ಶಶಿ ಭಂಡಾರಿ,ಪ್ರಮುಖರಾದ ಮಂಜುನಾಥ ಶಾಸ್ತ್ರೀ,ಶ್ರೀಕಾಂತ ಸುಲೇಗಾಂವ,ಚಂದ್ರು ಭಜಂತ್ರಿ,ರಾಜು ರಾಠೋಡ, ಕರಿಬಸವಯ್ಯ ಶಾಸ್ತ್ರೀ, ಆಕಾಶ, ರವಿ, ಆನಂದ, ಪ್ರೇಮ್, ಖ್ಯಾದಿಗಪ್ಪ, ನಾಗರಾಜ,ಅಜಯ ಬಿದ್ರಿ, ಮಲ್ಲು ಮುಗಳನಾಗಾಂವ,ಕಾಶಿ ಸಂಗಾವಿ,ಮಣಿಕಂಠ ಸೇರಿದಂತೆ ಇನ್ನಿತರರು ಇದ್ದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

4 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

4 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

4 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

5 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

5 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

6 hours ago