ಬಿಸಿ ಬಿಸಿ ಸುದ್ದಿ

ಶ್ರೀಗಿರಿ ಮಠದ ಆವರಣದಲ್ಲಿ ರಾಷ್ಟ್ರೀಯ ವಿದ್ಯಾರ್ಥಿ ದಿವಸ್ ಆಚರಣೆ

ಸುರಪುರ: ತಾಲೂಕಿನ ಲಕ್ಷ್ಮೀಪುರ ಶ್ರೀಗಿರಿ ಮಠದ ಆವರಣದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‍ನ 73ನೇ ಸಂಸ್ಥಾಪನ ದಿನದ ಅಂಗವಾಗಿ ರಾಷ್ಟ್ರೀಯ ವಿದ್ಯಾರ್ಥಿ ದಿವಸ್ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಸರಸ್ವತಿ ಮತ್ತು ಸ್ವಾಮಿವಿವೇಕಾನಂದರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸುವ ಜೊತೆಗೆ ಶ್ರೀಮಠದ ಆವರಣದಲ್ಲಿ ಸಸಿಗಳನ್ನು ನೆಡುವ ಜೊತೆಗೆ ಮಠದ ಬಳಿಯ ಗುಡ್ಡದಲ್ಲಿ ವಿವಿಧ ಜಾತಿಯ ಮರಗಳ ಬೀಜಗಳನ್ನು ಚೆಲ್ಲುವ ಮೂಲಕ ವಿಶೇಷವಾಗಿ ವಿದ್ಯಾರ್ಥಿ ದಿವಸ್ ಆಚರಿಸಿದರು.

ಈ ಸಂದರ್ಭದಲ್ಲಿ ಮಠದ ಪೂಜ್ಯರಾದ ಚೆನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ,ವಿದ್ಯಾರ್ಥಿ ದಿನಾಚರಣೆ ಅಂಗವಾಗಿ ಮಠದ ಆವರಣದಲ್ಲಿ ಸಸಿಗಳನ್ನು ನೆಡುವುದರ ಜೊತೆಗೆ ಗುಡ್ಡದಲ್ಲಿ ಮರಗಳನ್ನು ಬೆಳೆಸುವ ನಿಟ್ಟಿನಲ್ಲಿ ಬೀಜಗಳನ್ನು ಚೆಲ್ಲುವ ಮೂಲಕ ಅರ್ಥಪೂರ್ಣವಾಗಿ ಆಚರಿಸುತ್ತಿರುವುದು ಇತರೆ ಸಂಘಟನೆಗಳಿಗೆ ಮಾದರಿಯಾಗಿದೆ ಎಂದರು.

ನಂತರ ಎಬಿವಿಪಿ ಕಲಬುರಗಿ ವಿಭಾಗಿಯ ಸಹ ಪ್ರಮುಖ ಡಾ:ಉಪೇಂದ್ರ ನಾಯಕ ಸುಬೇದಾರ ಮಾತನಾಡಿ,ಈ ಜುಲೈ 9ಕ್ಕೆ ನಮ್ಮ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸ್ಥಾಪನೆಯಾಗಿ 73 ವರ್ಷಗಳಾಗಿದೆ.ಎಬಿವಿಪಿಯ ಸಂಸ್ಥಾಪನ ದಿನವನ್ನು ರಾಷ್ಟ್ರೀಯ ವಿದ್ಯಾರ್ಥಿ ದಿನವನ್ನಾಗಿ ಆಚರಿಸುವ ಮೂಲಕ ದೇಶದ ಎಲ್ಲಾ ವಿದ್ಯಾರ್ಥಿಗಳ ಏಕತೆಯನ್ನು ಮೆರೆಯುತ್ತಿದೆ.ಅಲ್ಲದೆ ವಿಶ್ವದ ಅತಿ ದೊಡ್ಡ ವಿದ್ಯಾರ್ಥಿ ಸಂಘಟನೆಯಾಗಿ ಗುರುತಿಸಿಕೊಂಡಿದೆ.ದೇಶದಲ್ಲಿನ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಎದುರಾದಲ್ಲಿ ತಕ್ಷಣಕ್ಕೆ ಧ್ವನಿ ಎತ್ತುವ ಎಬಿವಿಪಿ ಸದಾಕಾಲ ವಿದ್ಯಾರ್ಥಿಗಳ ಶ್ರೇಯೋಭಿಧ್ಧಿಗೆ ಕೆಲಸ ಮಾಡುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಅನೇಕ ವಿದ್ಯಾರ್ಥಿಗಳಿಗೆ ಸಸಿಗಳನ್ನು ವಿತರಿಸಿ ಪರಿಸರ ಜಾಗೃತಿಯನ್ನು ಮೂಡಿಸಲಾಯಿತು.ಈ ಸಂದರ್ಭದಲ್ಲಿ ಪರಿಷತ್‍ನ ಜಿಲ್ಲಾ ಪ್ರಮುಖ ಅನೀಲ್ ಪಾಟೀಲ್,ಜಿಲ್ಲಾ ಸಂಚಾಲಕ ಕ್ಯಾತಪ್ಪ ಮೇದಾ, ರಾಮ್ ಸೇನಾ ತಾಲೂಕು ಪ್ರಧಾನ ಕಾರ್ಯದರ್ಶಿ ಶರಣು ನಾಯಕ ದಿವಳಗುಡ್ಡ,ಹುಲಗಪ್ಪ,ಧರ್ಮರಾಜ,ನಾಗರಾಜ ಮಕಾಶಿ,ಅಯ್ಯಣ್ಣ ಸುಂಗಿ,ಶರಣು,ಹುಲಗಪ್ಪ ಮೇದಾ,ಧರ್ಮರಾಜ,ಗುರುನಾಥರಡ್ಡಿ ಶೀಲವಂತ ಸೇರಿದಂತೆ ಅನೇಕರಿದ್ದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

6 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

7 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

7 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

7 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

8 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

9 hours ago