ಸೇಡಂ: ವಿನಾಕಾರಣ ಪುಸ್ತಕಗಳು ಪ್ರಕಟವಾಗಿರುವ ಉದಾಹರಣೆಗಳೇ ಇಲ್ಲ. ಕಾರಣ ಇದ್ದುಕೊಂಡೇ ಪುಸ್ತಕಗಳನ್ನು ಪ್ರಕಟಿಸಲಾಗಿದೆ. ಅವೆಲ್ಲವೂ ಕಾರಣಯುಕ್ತವಾಗಿವೆ ಎಂದು ಹಿರಿಯ ಲೇಖಕ ಲಿಂಗಾರೆಡ್ಡಿ ಶೇರಿ ಅಭಿಪ್ರಾಯಪಟ್ಟರು.
ಪಟ್ಟಣದ ರಾಮಚಂದ್ರ ಬಡಾವಣೆಯ `ಅಮ್ಮ’ ಸಭಾಂಗಣದಲ್ಲಿ ಸಂಸ್ಕøತಿ ಪ್ರಕಾಶನ ಹಾಗೂ ರಾಷ್ಟ್ರಕೂಟ ಪುಸ್ತಕ ಮನೆ ಜಂಟಿಯಾಗಿ ಆಯೋಜಿಸಿದ್ದ ಪ್ರಭಾಕರ ಜೋಶಿ ಅವರ `ರಂಗಕಾರಣ’ ಮತ್ತು ಮಹಿಪಾಲರೆಡ್ಡಿ ಮುನ್ನೂರ್ ಅವರ `ಕೃತಿಕಾರಣ’ ಎರಡು ಪುಸ್ತಕಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ರಂಗಭೂಮಿ ನಂಟಿನ ಬರಹಗಳು ಮತ್ತು ಪುಸ್ತಕಗಳ ವಿಮರ್ಶೆಯ ನೆಲೆಯಲ್ಲಿ ಕಂಡುಕೊಂಡ ಲೇಖನಗಳ ಸಂಕಲನಗಳನ್ನು `ಕಾರಣ’ವಿಲ್ಲದೇ ಓದತೊಡಗಬೇಕಾಗಿದೆ. ರಾಜಧಾನಿ ಸುತ್ತಮುತ್ತಲಿರುವ ಲೇಖಕರು ಸೇಡಂ ಕಡೆಗೆ ನೋಡುವಂತಹ ವಾತಾವರಣ ಮೂಡಿಸುತ್ತಿರುವ ನೆಲದ ಬಳ್ಳಿಗಳೆರಡು ಆಕಾಶದೆತ್ತರಕ್ಕೆ ಹಬ್ಬುತ್ತಿರುವುದಕ್ಕೆ ಅಭಿಮಾನ ಉಂಟಾಗುತ್ತದೆ ಎಂದು ಹೇಳಿದರು.
ರಂಗಕಾರಣ ಕುರಿತು ಹಿರಿಯ ಲೇಖಕ ಡಾ.ಎಂ.ಜಿ.ದೇಶಪಾಂಡೆ ಮತ್ತು ಕೃತಿಕಾರಣ ಕುರಿತು ಹಿರಿಯ ಲೇಖಕಿ ಡಾ.ಚಂದ್ರಕಲಾ ಬಿದರಿ ಪರಿಚಯ ಮಾಡಿಕೊಟ್ಟರು.
ಮುಖ್ಯ ಅತಿಥಿಗಳಾಗಿದ್ದ ಕೆರಳ್ಳಿ ಗುರುನಾಥರೆಡ್ಡಿ ಪ್ರತಿಷ್ಠಾನ ಅಧ್ಯಕ್ಷ ಸಿದ್ದಪ್ಪ ತಳ್ಳಳ್ಳಿ ಮಾತನಾಡಿದರು. ಹಿರಿಯ ವಿದ್ವಾಂಸ ಡಾ.ವಾಸುದೇವ ಅಗ್ನಿಹೋತ್ರಿ ಅಧ್ಯಕ್ಷತೆ ವಹಿಸಿದ್ದರು.
ಲೇಖಕರಾದ ಪ್ರಭಾಕರ ಜೋಶಿ ಮತ್ತು ಮಹಿಪಾಲರೆಡ್ಡಿ ಮುನ್ನೂರ್ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಸಿದ್ದಪ್ರಸಾದರೆಡ್ಡಿ ನಿರೂಪಿಸಿದ ಕಾರ್ಯಕ್ರಮದಲ್ಲಿ ವಿಜಯಭಾಸ್ಕರರೆಡ್ಡಿ ಸ್ವಾಗತಿಸಿದರು. ಆದಿತ್ಯ ಜೋಶಿ ವಂದಿಸಿದರು. ಮಹೇಶ ಅಲ್ಲೂರು ಭಾವಗೀತೆ ಹಾಡಿದರು.
ತಾಲೂಕು ಮಕ್ಕಳ ಸಾಹಿತ್ಯ ಪರಿಷತ್ತಿನ ವತಿಯಿಂದ ಇಬ್ಬರು ಲೇಖಕರನ್ನು ಸನ್ಮಾನಿಸಲಾಯಿತು.
ಮಸಾಪ ಅಧ್ಯಕ್ಷೆ ಆರತಿ ಕಡಗಂಚಿ, ರುಕ್ಮಿಣಿ ಕಾಳಗಿ, ಕವಿತಾ, ಶಿಲ್ಪಾ ಕೊಳ್ಳಿ, ನಾಟಕ ನಿರ್ದೇಶಕ ಅಶೋಕ ತೊಟ್ನಳ್ಳಿ, ಪ್ರೊ.ಬಿ.ಆರ್.ಅಣ್ಣಾಸಾಗರ, ಕವಿ ಸಂತೋಷ ತೊಟ್ನಳ್ಳಿ, ಕಾನೂನು ಮಹಾವಿದ್ಯಾಲಯ ಪ್ರಾಚಾರ್ಯ ಶರಣಗೌಡ ಪಾಟೀಲ, ಶ್ರೀಪಾದ ಜೋಶಿ, ಶಿವು ಅಪ್ಪಾಜಿ, ನೀಲಕಂಠ ಮುತ್ತಗಿ, ಶರಣಪ್ಪ ಎಳ್ಳಿ, ವಿಷ್ಣುವರ್ಧನರೆಡ್ಡಿ, ಶ್ರೀಧರ ಗಡಾಳೆ, ಬಸವರಾಜ ಬಾಳಿ, ರತ್ನಕಲಾ, ಸುರೇಖಾ, ಭಾಗ್ಯ, ಕಾರ್ತಿಕರೆಡ್ಡಿ, ಮಹಾದೇವರೆಡ್ಡಿ ಇತರರು ಇದ್ದರು.
ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಆಲೂರು ನಿವಾಸಿ ಹಾಗೂ ಕಲಬುರಗಿ ಡಯಟ್ ಹಿರಿಯ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಹಣಮಂತರಾವ್ ನಾಟೀಕಾರ(53)…
ರಾಷ್ಟ್ರೀಯ ವೈದ್ಯಕೀಯ ಆಯೋಗದ ಅಧ್ಯಕ್ಷರಿಗೆ ಪತ್ರ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ.15ರಷ್ಟು ಎನ್ ಆರ್ ಐ ಕೋಟಾ ಕೊಡಿ 508…
ಭಾಗ್ಯ ವಂತಿ ದೇವಸ್ಥಾನ ಅಭಿವೃದ್ಧಿ ಘತ್ತರಗಾಕ್ಕೆ ಬಂದು ಕಣ್ತೆರೆದು ನೋಡಲಿ ಕಲಬುರಗಿ: ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಹಿಂದಿನ ಕಲಬುರಗಿ…
ಸುರಪುರ:ಪಟ್ಟಣದ ಉಪ ಕಾರಾಗೃಹಕ್ಕೆ ಜಿಲ್ಲಾ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉಪ…
ಸುರಪುರ:ಕರ್ನಾಟಕ ರಂಗಕ್ಷೇತ್ರಕ್ಕೆ ಹಿರಿಯ ನಾಟಕಕಾರರಾಗಿದ್ದ ಸಿ.ಜಿ.ಕೆ ಅವರ ಕೊಡುಗೆ ಅಪಾರವಾಗಿದೆ ಎಂದು ಸಗರನಾಡು ಸೇವಾ ಪ್ರತಿಷ್ಠಾನ ಅಧ್ಯಕ್ಷ ಪ್ರಕಾಶ ಅಂಗಡಿ…
ಸುರಪುರ: ಮೇರು ಸಾಹಿತಿ ಡಾ.ಕಮಲಾಹಂಪನಾ ಅವರ ಕೃತಿಗಳನ್ನು ಓದುವದು ಹಾಗೂ ಆ ಕೃತಿಗಳು ಸಾಮಾನ್ಯ ಜನರಿಗೆ ಸಿಗುವಂತೆ ಮಾಡುವದು ಇಂದಿನ…