ಸಿಎಂ ಯಡಿಯೂರಪ್ಪ ಅವರಿಂದ `ಮಹಾಪ್ರಳಯ’ ದೃಶ್ಯಕವನ ಪುಸ್ತಕ ಲೋಕಾರ್ಪಣೆ

ಕಲಬುರಗಿ: ಖ್ಯಾತ ಆರ್ಥೋಪೆಡಿಕ್ಸ್ ಸರ್ಜನ್ ಡಾ.ಎಸ್.ಎಸ್.ಗುಬ್ಬಿ ವಿರಚಿತ `ಮಹಾಪ್ರಳಯ’ ದೃಶ್ಯಕವನ ಪುಸ್ತಕವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಲ್ಲಿನ ಡಿಸಿಸಿ ಬ್ಯಾಂಕ್‌ನ ಶನಿವಾರ ನಡೆದ ಸಮಾರಂಭದಲ್ಲಿ ಲೋಕಾರ್ಪಣೆ ಮಾಡಿ, ಅಭಿನಂದಿಸಿದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಂಸದ ಉಮೇಶ ಜಾಧವ್, ಸಚಿವರಾದ ಬಿ.ಸೋಮಶೇಖರ, ಮುರುಗೇಶ ನಿರಾಣಿ, ಭೈರತಿ ಬಸವರಾಜ್ ಹಾಗೂ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದ ಅಧ್ಯಕ್ಷರು ಮತ್ತು ಕಲಬುರಗಿ-ಯಾದಗಿರಿ ಜಿಲ್ಲಾ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷರೂ ಆದ ಸೇಡಂ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ, ಶಾಸಕರಾದ ದತ್ತಾತ್ರೇಯ ಪಾಟೀಲ್ ರೇವೂರ, ಬಸವರಾಜ ಮತ್ತಿಮಡು ಸೇರಿದಂತೆ ಮೊದಲಾದ ಮುಖಂಡರು ಉಪಸ್ಥಿತರಿದ್ದರು.

ಕಲಬುರಗಿಯ ಗುಬ್ಬಿ ಪ್ರಕಾಶನದಿಂದ ಪ್ರಕಟಗೊಂಡ ೬೪ ಪುಟಗಳ `ಮಹಾಪ್ರಳಯ’ ಕವನ ಸಂಕಲನದಲ್ಲಿ ನೆರಹಾವಳಿಯ ದೃಶ್ಯಕವನ ಆಕರ್ಷಕ ಬಣ್ಣದ ಚಿತ್ರಗಳೊಂದಿಗೆ ಓದುಗರ ಆಸಕ್ತಿ ತಣಿಸುತ್ತದೆ. ಮನುಷ್ಯನ ಮಿತಿಮೀರಿದ ಸ್ವಾರ್ಥ, ದುರಾಸೆ-ದುರಂಹಕಾರಕ್ಕೆ ಪ್ರತ್ಯುತ್ತರ ಎನ್ನುವಂತೆ ಮುನಿಸಿಕೊಂಡ ಪ್ರಕೃತಿಯ ಈ ಮಹಾಪ್ರಳಯವನ್ನು ತನ್ನದೆ ಆದ ವೈಶಿಷ್ಟö್ಯಪೂರ್ಣ ಕಿರುಗವನಗಳಲ್ಲಿ ಹಿಡಿದಿಟ್ಟ ಡಾ.ಎಸ್.ಎಸ್.ಗುಬ್ಬ ಅವರ ಕಾವ್ಯಶೈಲಿ ಹಾಗೂ ಅತ್ಯಾಕರ್ಷಕ ಚಿತ್ರಗಳ ಜೋಡಣೆಯ ಕಲಾವಂತಿಕೆ ನಿಜಕ್ಕೂ ಅಭಿನಂದನಾರ್ಹ.

ಕಲಬುರಗಿ ಜಿಲ್ಲಾ ಕನ್ನಡ ವೈದ್ಯ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರೂ ಆಗಿರುವ ಕವಿ, ಲೇಖಕ, ಡಾ.ಎಸ್.ಎಸ್.ಗುಬ್ಬಿ ಅವರ `ಮಹಾಪ್ರಳಯ’ ದೃಶ್ಯಕವನವನ್ನು ಮೆಚ್ಚಿ ಡಾ.ಪಿ.ಎಸ್.ಶಂಕರ, ಟಿ.ವಿ.ಶಿವಾನಂದನ್, ಡಾ.ಸದಾನಂದ ಪೆರ್ಲ, ಡಾ.ಸ್ವಾಮಿರಾವ್ ಕುಲಕರ್ಣಿ, ಡಾ.ಶಶಿಶೇಖರ ರೆಡ್ಡಿ, ಎಸ್.ಎಸ್.ಹಿರೇಮಠ ಸೇರಿದಂತೆ ಮೊದಲಾದವರು ಮನಃಪೂರ್ವಕವಾಗಿ ಅಭಿನಂದಿಸಿದ್ದಾರೆ.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

4 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

7 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

11 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

12 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

14 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420