ಬಿಸಿ ಬಿಸಿ ಸುದ್ದಿ

ಶಹಾಬಾದ: ನಗರದ ಬಸವೇಶ್ವರ ವೃತ್ತದ ರಸ್ತೆಯ ತುಂಬೆಲ್ಲಾ ನಿಂತ ಮಳೆ ನೀರು

ಶಹಾಬಾದ: ನಗರದಲ್ಲಿ ಎರಡು ದಿನಗಳಿಂದ ಸುರಿದ ಮಳೆಯಿಂದ ನಗರದ ಅನೇಕ ಬಡಾವಣೆಗಳಲ್ಲಿ ಮಳೆ ನೀರು ರಸ್ತೆಯ ಇಕ್ಕೆಲದ ಚರಂಡಿಗಳಲ್ಲಿ ಸರಾಗವಾಗಿ ಹರಿಯದೆ, ರಸ್ತೆಯ ತುಂಬ ಹೊಂಡದಂತೆ ತುಂಬಿಕೊಂಡು ಸಾರ್ವಜನಿಕರು ಫಜೀತಿಗೊಳಗಾದರು.
ನಗರದ ವಿವಿಧ ಬಡಾವಣೆಗಳಲ್ಲಿ ರಸ್ತೆಗಳ ಇಕ್ಕೆಲದಲ್ಲಿ ಮಳೆನೀರಿನ ಚರಂಡಿ ನಿರ್ಮಿಸಲಾಗಿದೆಯಾದರೂ, ಇದರ ನಿರ್ವಹಣೆ ಇಲ್ಲದಿರುವುದು ಈ ರೀತಿಯ ಸಮಸ್ಯೆಗೆ ಕಾರಣವಾಗಿದ್ದು, ಪ್ರತಿ ಮಳೆಗಾಲದಲ್ಲೂ ಈ ಸಮಸ್ಯೆ ಪುನರಾವರ್ತಿತವಾಗುತ್ತಿದೆ.

ಚರಂಡಿಯಲ್ಲಿ ಮಣ್ಣು ಹಾಗೂ ಕಸ ತುಂಬಿರುವುದರಿಂದ ಅನೇಕ ಕಡೆಗಳಲ್ಲಿ ಚರಂಡಿಗೆ ನೀರು ಹೋಗದೆ, ರಸ್ತೆಯಲ್ಲೇ ಹರಿಯಿತು. ಕೆಲವೆಡೆ ಚರಂಡಿಗಳನ್ನು ಅವೈಜ್ಞಾನಿಕವಾಗಿ ನಿರ್ಮಿಸಿರುವುದರಿಂದ ನೀರು ಚರಂಡಿಯಲ್ಲಿ ಮುಂದಕ್ಕೆ ಹರಿಯಲಾಗದೆ ಅಲ್ಲೇ ನಿಲ್ಲುವಂತಾಯಿತು.
ನಗರದ ಬಸವೇಶ್ವರ ವೃತ್ತದಿಂದ ಶಾಸ್ರ್ತಿ ವೃತ್ತದವರೆಗೆ ಹಾಗೂ ರೇಲ್ವೆ ನಿಲ್ದಾಣದಿಂದ ಬಸ್ ನಿಲ್ದಾಣವರೆಗಿನ ಚರಂಡಿ ನಿರರ್ಥಕವಾಗಿದ್ದು, ಮಳೆ ಬಂದಾಗ ನೀರು ಚರಂಡಿಯಲ್ಲಿ ಹರಿಯದೆ ರಸ್ತೆಯಲ್ಲೇ ಹರಿಯುತ್ತದೆ.ಅಲ್ಲದೇ ನೀರು ಹಳ್ಳದಂತೆ ನಿಲ್ಲುವುದರಿಂದ ಡಾಂಬರೀಕರಣ ರಸ್ತೆ ಹಾಳಾಗುತ್ತಿದ್ದರೂ ಯಾರೂ ಗಮನಿಸುತ್ತಿಲ್ಲ. ಈ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದರೂ ಯಾರು ಕ್ಯಾರೇ ಎನ್ನುತ್ತಿಲ್ಲ.

ಚರಂಡಿಗಾಗಿ ನಗರಸಭೆ ಕೋಟ್ಯಂತರ ರೂ. ವೆಚ್ಚ ಮಾಡಿದೆ. ಆದರೆ ಎಲ್ಲೂ ಸಹ ಇದು ವೈಜ್ಞಾನಿಕವಾಗಿ ನಿರ್ಮಾಣಗೊಂಡಿಲ್ಲ. ಮಳೆ ಬಂದಾಗ ಮಳೆಯ ನೀರು ಸರಾಗವಾಗಿ ಮುಂದಕ್ಕೆ ಹರಿದು ಹೋಗುವಂತೆ ಸಂಪರ್ಕ ಜಾಲ ಇಲ್ಲವೇ ಇಲ್ಲ. ರಸ್ತೆಯ ಮೇಲೆ ಬಿದ್ದ ಮಳೆ ನೀರು ತಕ್ಷಣವೇ ಅಕ್ಕಪಕ್ಕದ ಚರಂಡಿಗೆ ಹರಿದುಬರುವಂತೆ ವೈಜ್ಞಾನಿಕವಾಗಿ ಚರಂಡಿಗಳನ್ನು ನಿರ್ಮಿಸಿಲ್ಲ. ಮನಬಂದಂತೆ ನಿರ್ಮಿಸಿ ಬಿಲ್ ಮಾಡಿಕೊಳ್ಳಲಾಗಿದೆ. ನೆಪಕ್ಕ? ಚರಂಡಿ ಇರುತ್ತದೆ.

ಆದರೆ ಅದೂ ಸಂಪೂರ್ಣವಾಗಿ ನಿರುಪಯೋಗವಾಗಿರುತ್ತದೆ. ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಮಳೆ ಬಂದಾಗ ಈ ಚರಂಡಿಗಳಲ್ಲಿ ಮಳೆ ನೀರು ಹರಿದು, ಮುಂದಕ್ಕೆ ಹೋಗುತ್ತಿದೆಯೇ ಎಂಬುದನ್ನು ಪರಿಶೀಲನೆ ಮಾಡುವುದೇ ಇಲ್ಲ. ಹೀಗಾಗಿ ಪ್ರತಿ ಬಾರಿ ಮಳೆ ಬಂದಾಗಲೂ ನೀರು ಮನೆಗಳಿಗೆ ನುಗ್ಗಿ ತೊಂದರೆ ಆಗುತ್ತದೆ. ಮಳೆ ನೀರು ರಸ್ತೆಯಲ್ಲೇ ಹೊಂಡದಂತೆ ನಿಂತು ಜನತೆಗೆ ಸಮಸ್ಯೆ ಆಗುತ್ತದೆ ಎಂಬುದು ಸಾರ್ವಜನಿಕರ ಆರೋಪವಾಗಿದೆ.

ಮಳೆ ಬಂದಾಗಲೊಮ್ಮೆ ನಗರದ ಬಸವೇಶ್ವರ ವೃತ್ತದಿಂದ ಬಾಲಕರ ವಸತಿ ನಿಲಯದ ಮುಂಭಾಗದಲ್ಲಿ ತೊಡೆ ಮಟ್ಟ ನೀರು ಸಂಗ್ರಹವಾಗಿ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತದೆ.ಅಲ್ಲದೇ ಮಳೆ ನಿಂತ ಎರಡು ಮೂರು ದಿನಗಳವರೆಗೆ ನೀರು ರಸ್ತೆಯ ಮೇಲೆ ನಿಲ್ಲುತ್ತದೆ.ಇದರಿಂದ ರಸ್ತೆಯೂ ಹಾಳಾಗುತ್ತಿದ್ದರೂ ಅಧಿಕಾರಿಗಳು ಮಾತ್ರ ಗಮನಹರಿಸುತ್ತಿಲ್ಲ- ಜಗನ್ನಾಥ.ಎಸ್.ಹೆಚ್ ಎಐಡಿವಾಯ್‌ಓ ಸಂಘಟನೆ

ಅವೈಜ್ಞಾನಿಕ ಹಾಗೂ ಕಳಪೆ ಚರಂಡಿ ನಿರ್ಮಾಣ ಮಾಡಿದ್ದರಿಂದ ನೀರು ರಸ್ತೆಯ ಮೇಲೆ ನಿಲ್ಲುವಂತಾಗಿದೆ.ಅಧಿಕಾರಿಗಳ ಬೇಜವಾಬ್ದಾರಿತನದಿಂದ ಎಲ್ಲೆಂದರಲ್ಲಿ ರಸ್ತೆಯ ಮೇಲೆ ನೀರು ನಿಲ್ಲುವಂತಾಗಿದೆ.ಅಲ್ಲದೇ ಕಳಪೆ ಮಾಡಿದರೂ ಕೆಳಮಟ್ಟದ ಅಧಿಕಾರಿಗಳಿಂದ ಮೇಲ್ಮಟ್ಟ ಅಧಿಕಾರಿಗಳು ಯಾವುದೇ ಕ್ರಮತೆಗೆದುಕೊಳ್ಳದಿರುವುದು ದುರಾದೃಷ್ಟಕರ-ಲೋಹಿತ್ ಕಟ್ಟಿ ಪ್ರಧಾನ ಕಾರ್ಯದರ್ಶಿ ಜೆಡಿಎಸ್.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

6 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

6 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

7 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

8 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

8 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

8 hours ago