ಶಹಾಪುರ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ದೌರ್ಜನ್ಯಕ್ಕೆ ಒಳಗಾದಾಗ ಅವರ ರಕ್ಷಣೆಗಾಗಿ ಹಲವಾರು ಕಾನೂನುಗಳಿವೆ,ಅವುಗಳನ್ನು ದುರುಪಯೋಗ ಮಾಡಿಕೊಳ್ಳದೆ ಸದುಪಯೋಗವನ್ನು ಪಡಿಸಿಕೊಳ್ಳಬೇಕು ಎಂದು ಸುರಪುರದ ಶ್ರೀ ಮೈಲಾರಲಿಂಗೇಶ್ವರ ಎಂ.ಎಸ್.ಡಬ್ಲ್ಯು ಕಾಲೇಜಿನ ಪ್ರಾಂಶುಪಾಲರಾದ ಡಾ.ಮಲ್ಲಿಕಾರ್ಜುನ್ ಹೇಳಿದರು.
ತಾಲ್ಲೂಕಿನ ಸಗರ ಗ್ರಾಮದ ವಾಲ್ಮೀಕಿ ಭವನದಲ್ಲಿ ಕಲಬುರಗಿ ರಂಗಾಯಣದ ವತಿಯಿಂದ ಹಮ್ಮಿಕೊಂಡಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಅಧಿನಿಯಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ನಮ್ಮ ದೇಶದ ಗ್ರಾಮಾಂತರ ಭಾಗದಲ್ಲಿ ಪ್ರತಿ ದಿನ ನಿರಂತರವಾಗಿ ನಮ್ಮ ಜನಗಳ ಮೇಲೆ ದೌರ್ಜನ್ಯ ನಡೆಯುತ್ತಲೇ ಇದೆ ಸಾಮಾಜಿಕ ಬಹಿಷ್ಕಾರ,ಕ್ಷೌರ ನಿರಾಕರಣೆ,ದೇವಸ್ಥಾನ ಪ್ರವೇಶ ನಿಷೇಧ,ಇಂಥ ಮುಂತಾದ ಘಟನೆಗಳು ನಡೆಯುತ್ತಲೇ ಇವೆ ಇಂಥವುಗಳನು ತೊಡೆದು ಹಾಕುವ ಸದುದ್ದೇಶದಿಂದ ಕಲಬುರಗಿ ರಂಗಾಯಣ ಈ ಕಾರ್ಯಕ್ರಮ ಹಮ್ಮಿಕೊಂಡಿರುವುದು ಕಾರ್ಯ ನಿಜಕ್ಕೂ ಶ್ಲಾಘನೀಯವಾದದ್ದು ಎಂದು ಬಣ್ಣಿಸಿದರು.
ಯಾವುದೇ ಗ್ರಾಮದಲ್ಲಿ ದೌರ್ಜನ್ಯ ಘಟನೆಗಳು ನಡೆದಾಗ ತಕ್ಷಣವೇ ಶಾಂತಿ ಸಭೆ ನಡೆಸಿ ಸೂಕ್ತ ಪರಿಹಾರ ಕಂಡುಕೊಳ್ಳಬೇಕು,ಅದು ಮಿತಿ ಮೀರಿದಾಗ ಕಾನೂನಿನ ಮೊರೆ ಹೋಗಿ ತಜ್ಞರ ಮಾಹಿತಿ ಮೇರೆಗೆ ಅವಕಾಶ ಸದುಪಯೋಗಪಡಿಸಿಕೊಳ್ಳಿ ಎಂದು ಯುವ ಮುಖಂಡರಾದ ಸಂತೋಷ ಗೌಡ ಸುಬೇದಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು
ಈ ಸಮಾರಂಭದ ವೇದಿಕೆಯ ಮೇಲೆ ಮಾಜಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಸೋಪಣ್ಣ ನಾಯಕ್,ಯುವ ಮುಖಂಡ ಭೀಮಣ್ಣ ಮಕಾಶಿ,ಚಾಲಕರ ಸಂಘದ ಅಧ್ಯಕ್ಷರಾದ ಪರಶುರಾಮ ಅಂಬ್ಲಪ್ಪಸ್ವಾಮಿ,ಯಲ್ಲಪ್ಪ ಗಡ್ಡೆ, ಶಿವರಾಯ್ ಭಾಗಣ್ಣ ಸುರಪುರ,ಶಿವಪ್ಪ ನಾಯಕ,ವಿಜಯ ಕುಮಾರ,ರಾಮು ಹಾಗೂ ಸಮಾಜದ ಎಲ್ಲ ಹಿರಿಯ ಮುಖಂಡರು ಉಪಸ್ಥಿತರಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…