ಕಲಬುರಗಿ: ನಗರದ ವಾರ್ಡ್ ನಂ, ೪೮ರಲ್ಲಿ ಬರುವ ಜಮಶೆಟ್ಟಿ ನಗರ ಬಡಾವಣೆಗೆ ಅಗತ್ಯ ಮೂಲ ಭೂತ ಸೌಕರ್ಯಗಳನ್ನು ಒದಗಿ ಸುವಂತೆ ಜೈಕನ್ನಡಿಗರ ಸೇನೆಯ ನಿಯೋಗ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲಲಿಸಿ ಒತ್ತಾಯಿಸಿದೆ. ಜಮಶೆಟ್ಟಿ ಬಡಾವಣೆ ಅಗತ್ಯ ಮೂಲ ಭೂತ ಸೌಕರ್ಯಗಳಾದ ಕುಡಿಯುವ ನೀರು, ರಸ್ತೆ ಒಳಚರಂಡಿ, ವಿದ್ಯುತದೀಪ ಸೇರಿದಂತೆ ವಿವಿಧ ಸಮಸ್ಯೆಗಳಿಂದ ನರಳುತ್ತಿದ್ದು, ಮಳೆ ನೀರು ನಿಂತು ಸಂಚಾರಕ್ಕೆ ತೀವ್ರ ಅಡ್ಡಿಯಾಗುತ್ತಿದೆ, ಎಂದು ಸೇನೆಯ ಅಧ್ಯಕ್ಷ ದತ್ತು ಎಚ್. ಭಾಸಗಿ ಅವರು ಪಾಲಿಕೆ ಆಯುಕ್ತರಿಗೆ ಮನವಿಕೆ ಮಾಡಿದರು.
ಈ ಬಡಾವಣೆಯ ಮುಖ್ಯ ರಸ್ತೆಗಳು ಹಾಗೂ ಬಡಾವಣೆಯ ಒಳಗಿನ ರಸ್ತೆಗಳು ತುಂಬಾ ಹದಗೆಟ್ಟು ಹೋಗಿದ್ದು, ಮಳೆಬಂದಾಗ ರಸ್ತೆಯ ತುಂಬೆಲ್ಲ ನೀರು ನಿಲ್ಲುವುದರಿಂದ ರಸ್ತೆಯ ಮೇಲೆ ವಾಹನಗಳ ಸಂಚಾರಕ್ಕೂ ಮತ್ತು ನಡೆದುಕೊಂಡು ಹೋಗುವುದಕ್ಕೂ ಆಗುವುದಿಲ್ಲ. ವಯಸ್ಸಾದ ವಯೋವೃದ್ಧರು ಚಿಕ್ಕ ಮಕ್ಕಳಿಗೆ ತೊಂದರೆಯಾಗುತ್ತಿದೆ ಕೂಡಲೇ ರಸ್ತೆ, ಚರಂಡಿ ನಿಮಾರ್ಣಕ್ಕೆ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಅವರು ಮನವಿ ಮಾಡಿದರು.
ಓಡಾಡುವುದರಿಂದ ರಸ್ತೆ ಮೇಲೆ ನೀರಿನಿಂದ ಅಪಘಾತವಾಗುವ ಸಂದರ್ಭಗಳು ಇರುತ್ತವೆ ವಿದ್ಯುತ ದೀಪಗಳು ಸರಿಯಾಗಿಲ್ಲದ ಕಾರಣ ಸಾರ್ವಜನಿಕರಿಗೆ ಓಡಾಡಲು ತೊಂದರೆಯಾಗುತ್ತಿದೆ ಜನರಿಗೆ ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗಿದೆ.ಈ ಬೇಡಿಕೆಯನ್ನು ಪರಿಶೀಲಿಸಿ ಅತಿ ಶೀಘ್ರವೇ ಕ್ರಮ ಕೈಗೊಂಡು ಬಡಾವಣೆಗೆ ಮೂಲ ಭೂತ ಸೌಕರ್ಯ ಒದಗಿಸಿ ಕೊಡ ಬೇಕೆಂದು ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಶೇಷಗಿರಿ ಮರತೂರಕರ್, ಸಿದ್ದು ಬುರನ್ನಪುರ, ಶರಣು, ಸಿದ್ದು, ನವೀನ್, ಪ್ರಶಾಂತ್ ಇದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…