ಬಿಸಿ ಬಿಸಿ ಸುದ್ದಿ

ಐ.ಬಿ.ಪಿ.ಎಸ್. ನೇಮಕಾತಿಗಳಲ್ಲಿ ಪ್ರಾದೇಶಿಕ ಭಾಷೆಗೆ ಆದ್ಯತೆ, ಕೇಂದ್ರದ ಹುಸಿ ಭರವಸೆ: ಟಿ.ಎಸ್.ನಾಗಾಭರಣ

ಬೆಂಗಳೂರು: ಐ.ಬಿ.ಪಿ.ಎಸ್. ಸಂಸ್ಥೆಯು ಪ್ರಸ್ತುತ ನಡೆಸುತ್ತಿರುವ ನೇಮಕಾತಿ ಪ್ರಕ್ರಿಯೆಗಳಲ್ಲಿ ಕನ್ನಡದಲ್ಲಿಯೂ ಪರೀಕ್ಷೆಯನ್ನು ನಡೆಸಿ ಕನ್ನಡಿಗರಿಗೆ ನ್ಯಾಯ ಸಿಗುವಂತೆ ಕ್ರಮವಹಿಸುವ ತುರ್ತು ಅಗತ್ಯವಿದ್ದು, ಐ.ಬಿ.ಪಿ.ಎಸ್. ನೇಮಕಾತಿಗಳಲ್ಲೂ ಕೂಡ ಪ್ರಾದೇಶಿಕ ಭಾಷೆಗಳನ್ನು ಬಳಸುವ ಕುರಿತಾಗಿ ಸೂಕ್ತ ಕ್ರಮಕೈಗೊಳ್ಳಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಅವರು ಒತ್ತಾಯಿಸಿದ್ದಾರೆ.

ಪ್ರಸ್ತುತ ಕರ್ನಾಟಕದ ಕೆನರಾ ಬ್ಯಾಂಕ್ ಸೇರಿದಂತೆ ಒಟ್ಟು 11 ಬ್ಯಾಂಕುಗಳಲ್ಲಿ ಖಾಲಿ ಇರುವ 3000ಕ್ಕೂ ಹೆಚ್ಚು ಹುದ್ದೆಗಳಿಗೆ ಪರೀಕ್ಷೆಯನ್ನು ಕೇವಲ ಇಂಗ್ಲಿಷ್ ಮತ್ತು ಹಿಂದಿಯಲ್ಲಿ ನಡೆಸಿರುವುದರಿಂದ ಕನ್ನಡಿಗರಿಗೆ ಸಿಗಬೇಕಾದ ಹುದ್ದೆಗಳು ಕೈತಪ್ಪಿರುವುದನ್ನು ಪ್ರಾಧಿಕಾರ ಖಂಡಿಸುವುದಾಗಿ ಹೇಳಿದ್ದಾರೆ.

ಕೇಂದ್ರದ ವಿತ್ತ ಸಚಿವರು, ಈ ಹಿಂದೆ ನಡೆದ ಅಧಿವೇಶನದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಪ್ರಯತ್ನದ ಫಲವಾಗಿ ಆಯಾ ಸ್ಥಳೀಯ ಭಾಷೆಗಳಲ್ಲಿ ಬ್ಯಾಂಕಿಂಗ್‌ ನೇಮಕಾತಿಗಳನ್ನು ನಡೆಸುವುದಾಗಿ ಭರವಸೆ ನೀಡಿದ್ದರು. ಆದರೆ ಅದು ಹುಸಿಯಾಗಿದೆ. ಅದರಂತೆ ಎಸ್.ಬಿ.ಐ ನೇಮಕಾತಿಗಳಲ್ಲಿ ಪ್ರಾದೇಶಿಕ ಭಾಷೆಗಳಿಗೆ ಮನ್ನಣೆ ನೀಡಲಾಗಿದೆ. ಆದರೆ ಐ.ಬಿ.ಪಿ.ಎಸ್. ನೇಮಕಾತಿಗಳಲ್ಲಿ ಮಾತ್ರ ಕನ್ನಡವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದೊಂದು ಜ್ವಲಂತ ಸಮಸ್ಯೆಯಾಗಿದ್ದು, ಸ್ಥಳೀಯರಿಗೆ ಉದ್ಯೋಗ ದೊರೆಯಬೇಕೆಂದು ಹಲವು ರಾಜ್ಯಗಳಲ್ಲಿ ಹೋರಾಟ ನಡೆಸುತ್ತಿವೆ. ವಿಶ್ವದ ಹಲವು ರಾಷ್ಟ್ರಗಳು ಸ್ಥಳೀಯರಿಗೆ ಉದ್ಯೋಗದಲ್ಲಿ ಮೀಸಲು ನೀತಿಯನ್ನು ಸಹ ರೂಪಿಸಿವೆ. ರಾಜ್ಯ, ಕೇಂದ್ರ ಸಕಾ೵ರದ್ದಿರಲಿ, ಖಾಸಗಿ ವಲಯವಿರಲಿ ಶೇ.75ರಷ್ಟು ಹುದ್ದೆಗಳು ಸ್ಥಳೀಯರಿಗೆ ಅಂದರೆ ಆಯಾ ರಾಜ್ಯದವರಿಗೇ ಮೀಸಲಿರುವಂತೆ ಇಡೀ ರಾಷ್ಟ್ರಕ್ಕೆ ಅನ್ವಯವಾಗುವ ‘ಸ್ಥಳೀಯರಿಗೆ ಉದ್ಯೋಗ ರಾಷ್ಟ್ರೀಯ ನೀತಿ’ಯನ್ನು ರೂಪಿಸಿ ಅದನ್ನು ಸಂಸತ್ನಿಲ್ಲಿ ಮಂಡಿಸಿ ಕಾನೂನು  ರೂಪಿಸುವಂತೆ ಕ್ರಮವಹಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ರಾಷ್ಟ್ರೀಯ ಸಿಬ್ಬಂದಿ ಆಯ್ಕೆ ಆಯೋಗದ ಪ್ರಾದೇಶಿಕ ಕಚೇರಿ ಬೆಂಗಳೂರಿನಲ್ಲಿದೆ. ಆದರೆ, ನೇಮಕಾತಿ ಪರೀಕ್ಷೆಗಳು ಹಿಂದಿ, ಇಂಗ್ಲಿಷ್ಗೆಳಲ್ಲಿ ಮಾತ್ರ ನಡೆಯುತ್ತಿವೆ. ಇದರಿಂದ ಸ್ಥಳೀಯರಿಗೆ (ಕನ್ನಡಿಗರಿಗೆ) ಯಾವುದೇ ಉಪಯೋಗವಾಗಿಲ್ಲ. ಸ್ಥಳೀಯ ಉದ್ಯೋಗಾಕಾಂಕ್ಷಿಗಳಿಗೆ ಪ್ರಯೋಜನವಾಗುತ್ತಿಲ್ಲ. ರೈಲ್ವೆ ನೇಮಕಾತಿ ಸಮಿತಿಯು ಕೆಳಹಂತದ ಹುದ್ದೆಗಳಿಗೆ ಪ್ರಾದೇಶಿಕ ಭಾಷೆಯಲ್ಲಿ ಬರೆಯಲು ಅವಕಾಶಕಲ್ಪಿಸಿದೆ. ಅದೇ ಮಾದರಿಯನ್ನು ಐ.ಬಿ.ಪಿ.ಎಸ್.‌ ಹಾಗೂ ಇತರೆ ಸಿಬ್ಬಂದಿ ಆಯ್ಕೆ ಆಯೋಗಗಳು ಸಹ ಅನುಸರಿಸಬೇಕು ಮತ್ತು ಪ್ರಾದೇಶಿಕ ಕಚೇರಿಯ ವ್ಯಾಪ್ತಿಯಲ್ಲಿರುವ ರಾಜ್ಯದವರು ಮಾತ್ರ ಪರೀಕ್ಷೆ ತೆಗೆದುಕೊಳ್ಳಲು ಅವಕಾಶ ಇರುವಂತೆ ನಿಯಮ ರಚನೆಯಾಗಬೇಕು ಎಂದಿದ್ದಾರೆ.

ಐ.ಬಿ.ಪಿ.ಎಸ್ ಪ್ರಸ್ತುತ ನೇಮಕಾತಿ ಪರೀಕ್ಷೆಗಳನ್ನು ಹಿಂದಿ, ಇಂಗ್ಲಿಷ್ಗೆಳಲ್ಲಿ ಮಾತ್ರ ನಡೆಸುತ್ತಿದೆ. ಅಭ್ಯಥಿ೵ಯ ಆಯ್ಕೆ ಮಾಡಿಕೊಳ್ಳುವ ಪ್ರಾದೇಶಿಕ ಭಾಷಾ ಜ್ಞಾನವು ಅಪೇಕ್ಷಣೀಯ ಅಂದಿರುವುದರಿಂದ ಹಿಂದಿ ಮತ್ತು ಇಂಗ್ಲಿಷ್ ಜ್ಞಾನ ಇಲ್ಲದವರಿಗೆ ನೇಮಕಾತಿಯಲ್ಲಿ ಅವಕಾಶ ಸಿಗುತ್ತಿಲ್ಲ. ಅದನ್ನು ಸರಿಪಡಿಸಲು 2012ರವರೆಗೆ ಇದ್ದ ‘ಅಭ್ಯಥಿ೵ಯು ಆಯ್ಕೆ ಮಾಡಿಕೊಳ್ಳುವ ರಾಜ್ಯದ ಅಧಿಕೃತ ಭಾಷೆಯಲ್ಲಿ ಪರಿಣಿತರಾಗಿರಬೇಕು, ಅಂದರೆ ಮೆಟ್ರಿಕ್ಯುಲೇಷನ್/ ಎಸ್ಸೆಸ್ಸೆಲ್ಸಿ/ ಹತ್ತನೇ ತರಗತಿಗಳ ಹಂತದಲ್ಲಿ ಒಂದು ಭಾಷೆಯಾಗಿ ಕಡ್ಡಾಯವಾಗಿ ಓದಿರಲೇಬೇಕು’ ಎಂಬ ನಿಯಮವನ್ನು ಜಾರಿಗೆ ತರಬೇಕು ಎಂದು ಪ್ರಾಧಿಕಾರದ ಅಧ್ಯಕ್ಷರು ಆಗ್ರಹಿಸಿದ್ದಾರೆ.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

1 hour ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

1 hour ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

1 hour ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago