ಅಪರ ಕೇಂದ್ರಿಯ ಭವಿಷ್ಯ ನಿಧಿ ಆಯುಕ್ತರಾಗಿ ಮಾರುತಿ ಭೋಯಿ ಅಧಿಕಾರ ಸ್ವೀಕಾರ

0
17

ದಾರವಾಡ: ಮಾರುತಿ ಭೋಯಿ ಅವರು ಅಪರ ಕೇಂದ್ರಿಯ ಭವಿಷ್ಯ ನಿಧಿ ಆಯುಕ್ತರಾಗಿ, ಕರ್ನಾಟಕ ಮತ್ತು ಗೋವಾ ವಲಯದ ಭವೀಷ್ಯ ನಿಧಿ ಭವನ, ನವನಗರ, ಹುಬ್ಬಳ್ಳಿಯಲ್ಲಿ ಅಧಿಕಾರ ವಹಿಸಿಕೊಂಡಿದ್ದಾರೆ.

ಹುಬ್ಬಳ್ಳಿ ವಲಯದ ವ್ಯಾಪ್ತಿಯು ಇಡೀ ಕರ್ನಾಟಕ ರಾಜ್ಯಕ್ಕೆ (ಬೆಂಗಳೂರು ಹೊರತುಪಡಿಸಿ) ಮತ್ತು ಗೋವಾ ರಾಜ್ಯಕ್ಕೆ ವ್ಯಾಪಿಸಿದೆ. ಈ ವಲಯದಲ್ಲಿ ಕಾರ್ಮಿಕ ಭವಿಷ್ಯ ನಿಧಿಯ ಹತ್ತು ಪ್ರಾದೇಶಿಕ ಕಚೇರಿಗಳಿವೆ, ಹುಬ್ಬಳ್ಳಿ, ಮಂಗಳೂರು, ಮೈಸೂರು, ಕಲಬುರಗಿ, ಬಳ್ಳಾರಿ, ರಾಯಚೂರು, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಮತ್ತು ಗೋವಾಗಳಲ್ಲಿವೆ.

Contact Your\'s Advertisement; 9902492681

ಮಾರುತಿ ಭೋಯಿ ಅವರು 24 ವರ್ಷಗಳಿಗಿಂತ ಹೆಚ್ಚು ಕಾಲ ಆಡಳಿತಾತ್ಮಕ ಮತ್ತು ಕ್ರಿಯಾತ್ಮಕ ಅನುಭವವನ್ನು ಹೊಂದಿದ್ದಾರೆ. ಇವರು ದೇಶಾದ್ಯಂತ ಕೇರಳ, ಕರ್ನಾಟಕ, ತಮಿಳುನಾಡು, ಅಸ್ಸಾಂ, ತೆಲಂಗಾಣ, ಉತ್ತರಪ್ರದೇಶ ಮತ್ತು ನವದೆಹಲಿಯ ಮುಖ್ಯ ಕಚೇರಿಗಳಲ್ಲಿ ವಿವಿಧ ಸಾಮರ್ಥ್ಯಗಳಲ್ಲಿ ಕೆಲಸ ಮಾಡಿದ ಅನುಭವ ಪಡೆದವರಾಗಿದ್ದಾರೆ.

ಕಾರ್ಮಿಕರ ಭವಿಷ್ಯ ನಿಧಿ ಸೇವಾ ವಿತರಣೆಯ ಅನುಷ್ಠಾನಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗಾಗಿ, ಅವರ ಕಚೇರಿಯನ್ನು ವೈಯಕ್ತಿಕವಾಗಿ ಅಥವಾ ಇ-ಮೇಲ್ ಮೂಲಕ acc.hubligoa@epfindia.gov.in  ಸಂಪರ್ಕಿಸಬಹುದು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here