ಕಲಬುರಗಿ : ಜಿಲ್ಲೆಯ ಕಾಳಗಿ ಪಟ್ಟಣ ಹಿರೇಮಠದ ಮಠಾಧಿಪತಿಗಳಾಗಿದ್ದ ಷ.ಬ್ರ . ಶಿವಬಸವ ಶಿವಾಚಾರ್ಯರು ಲಿಂಗೈಕ್ಯರಾಗಿರುವುದರಿಂದ ಅವರ ಸ್ಥಾನಕ್ಕೆ ನೂತನ ಉತ್ತರಾಧಿಕಾರಿಯಾಗಿ ನೀಲಕಂಠ ಸ್ವಾಮಿಗಳನ್ನು ನೇಮಕ ಮಾಡಲಾಗಿದೆ . ಅವರು ಉತ್ತರಾಧಿಕಾರಿಯೇ ಹೊರತು ಪೀಠಾಧಿಪತಿಗಳಲ್ಲ ಎಂದು ಶ್ರೀಮಠದ ಹೊಣೆಗಾರಿಕೆ ವಹಿಸಿಕೊಂಡಿರುವ ಹೊನ್ನಕಿರಣಗಿಯ ಪೂಜ್ಯರಾದ ಚಂದ್ರಗುಂಡ ಶಿವಾಚಾರ್ಯರು ಸ್ಪಷ್ಟಪಡಿಸಿದ್ದಾರೆ.
ನಗರದ ಪತ್ರಿಕಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಳಗಿ ಶ್ರೀಮಠವು ಪುತ್ರವರ್ಗದ ಮಠವಾಗಿರುವುದರಿಂದ ಶ್ರೀಮಠದ ವಂಶಜರ ಕುಡಿಯನ್ನೇ ಉತ್ತರಾಧಿಕಾರಿಯಾಗಿ ನೇಮಕ ಮಾಡಿಕೊಂಡು ಬರುತ್ತಿರುವುದು ನಡೆದು ಬಂದ ಪರಂಪರೆಯಾಗಿದೆ, ನೇಮಕಗೊಂಡ ಉತ್ತರಾಧಿಕಾರಿಗಳಿಗೆಲ್ಲ ಪಟ್ಟಾಭಿಷೇಕ ಮಾಡಲಾಗುತ್ತದೆ ಎಂದರ್ಥವಲ್ಲ . ಅವರಿಗೆ ವೈದಿಕ ಸಂಸ್ಕೃತಿ ಹಾಗು ಸಂಸ್ಕಾರ ನೀಡಿ ಯೋಗ್ಯ ಸನ್ಯಾಸಿಯಾಗಿ ತಯಾರು ಮಾಡಿದ ನಂತರ ಓರ್ವ ಶಿವಾಚಾರ್ಯರಿಗೆ ಇರುವ ಎಲ್ಲ ಅರ್ಹತೆಗಳು ಇರುವುದನ್ನು ಖಚಿತಪಡಿಸಿಕೊಂಡಾದ ಮೇಲೆ ಪಟ್ಟಾಭಿಷೇಕ ಮಾಡಲಾಗುತ್ತದೆ ಎಂದು ತಿಳಿಸಿದರು.
ಸದ್ಯ ನೇಮಕ ಮಾಡಿರುವ ಉತ್ತರಾಧಿಕಾರಿ ಐದು ವರ್ಷದ ಶಿಶುವಾಗಿದ್ದು , ಎಳೆತನದಲ್ಲೇ ಸಂಸ್ಕಾರ ನೀಡುವುದು ಸೂಕ್ತ ಹಾಗು ಸುಲಭ ಎಂಬ ಕಾರಣಕ್ಕಾಗಿ ಪಂಚ ಶಿವಾಚಾರ್ಯರ ಸಮ್ಮತಿ ಮೇರೆಗೆ ಉತ್ತರಾಧಿಕಾರಿ ನೇಮಕ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.
ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ನೇಮಕಗೊಂಡ ಉತ್ತರಾಧಿಕಾರಿಗಳಿಗೆ ನೀಲಕಂಠ ಶಿವಾಚಾರ್ಯರು ಹಾಗು ಪೀಠಾಧಿಪತಿಗಳು ಎಂದು ಪದ ಪ್ರಯೋಗ ಮಾಡಿರುವದರಿಂದ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ . ಇದರಲ್ಲೇನು ಅಪಚಾರ ನಡೆದಿಲ್ಲ ಎಂದು ಹೊನ್ನಕಿರಣಗಿಯ ಚಂದ್ರಗುಂಡ ಶಿವಾಚಾರ್ಯರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಸೋಮನಾಥ ಶಿವಾಚಾರ್ಯರು, ಪ್ರಶಾಂತ ಡೊಂನೂರ್, ಶಿವಶರಣಪ್ಪ ಕಮಲಾಪುರ್, ಶರಣಗೌಡ ಪೊಲೀಸ್ ಪಾಟೀಲ್ ಇದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…