ಆಳಂದ:ತಾಲೂಕಿನ ನಿಂಬರ್ಗಾ ಗ್ರಾಮದ ಕರ್ನಾಟಕ ರಕ್ಷಣಾ ವೇದಿಕೆಯ ಪ್ರ.ಕಾರ್ಯದರ್ಶಿ ಮಲ್ಲಿನಾಥ ನಾಟೀಕಾರ ಅವರ ೨೫ನೇ ವರ್ಷದ ಜನ್ಮದಿನದ ನಿಮಿತ್ತ ನಿಂಬರ್ಗಾ ಗ್ರಾಮದ ಆರಾಧ್ಯ ದೈವ ಮಹಾದಾಸೋಹಿ ಶ್ರೀ ಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿ ೨೫ ಸಸಿ ನೆಟ್ಟು ಸರಳವಾಗಿ ಜನ್ಮದಿನ ಆಚರಿಸಲಾಯಿತು. ಕೇಕ್ ಹಾಗೂ ಪಟಾಕಿ ಸಿಡಿಸಿ ಜನ್ಮದಿನ ಆಚರಿಸುವ ಬದಲು ಪರಿಸರ ಕಾಳಜಿಯೊಂದಿಗೆ ಸಸಿ ನೆಟ್ಟು ಜನ್ಮದಿನ ಆಚರಿಸಿ ಇನ್ನಿತರರಿಗೂ ಪ್ರೇರಣೆಯಾಗಿದ್ದಾರೆ.
ಈ ಸಂಧರ್ಭದಲ್ಲಿ ನಿಂಬರ್ಗಾ ವಲಯ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಬಸವರಾಜ ಯಳಸಂಗಿ ಮಾತನಾಡಿ, ಜನ್ಮದಿನಕ್ಕೆ ದುಂದು ವೆಚ್ಚ ಮಾಡದೇ ಸಸಿ ವಿತರಣೆ, ಅಥವಾ ಬಡವರಿಗೆ, ಕೂಲಿ ಕಾರ್ಮಿಕರಿಗೆ, ನಿರ್ಗತಿಕರಿಗೆ ತಮ್ಮ ಕೈಲಾದಷ್ಟು ಸಹಾಯ ಮಾಡಿದರೆ ತುಂಬಾ ಅರ್ಥಪೂರ್ಣವಾಗಿ ಜನ್ಮದಿನ ಆಚರಿಸಿಕೊಂಡಂತಾಗುತ್ತದೆ ಎಂದು ಅಭಿಪ್ರಾಯ ಪಟ್ಟರು.
ಈ ಸಂಧರ್ಭದಲ್ಲಿ ಮಲ್ಲಿನಾಥ ನಾಗಶೆಟ್ಟಿ, ಈರಪ್ಪ ನಂದಿ, ಲಕ್ಷ್ಮಿಕಾಂತ ದುಗೊಂಡ, ರಾಜು ಮಠಪತಿ, ಈರಣ್ಣ ಮಠಪತಿ, ಹಣಮಂತ ಹೂಗಾರ, ಶ್ರೀಶೈಲ್ ನಿಗಶೆಟ್ಟಿ, ಸಚಿನ ಶೀಲವಂತ, ರಾಕೇಶ ಬೀರಾದಾರ, ಅನೀಲ ನಾಗೂರ, ಮಡಿವಾಳಪ್ಪ ಮಡಿವಾಳ, ಶರಣು ಹಳಿಮನಿ, ಸಿದ್ದಾರಾಮ ಬಣಗಾರ, ಕ್ಷೇಮಲಿಂಗ ಕಂಭಾರ, ಈರಣ್ಣ ಶರಣ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…