ಆಳಂದ: ಕೋವಿಡ್ ಮಹಾಮಾರಿ ನಿರ್ಮೂಲನೆ ಮಾಡುವಲ್ಲಿ ಲಸಿಕೆ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದೆ ಅದಕ್ಕಾಗಿ ಯಾರೂ ಭಯ ಬೀಳದೇ ಭಾರತ ಸರ್ಕಾರ ನೀಡುತ್ತಿರುವ ಉಚಿತ ಲಸಿಕೆ ಪಡೆಯಲು ಮುಂದೆ ಬರಬೇಕು ಎಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಹೇಳಿದರು.
ಇತ್ತೀಚಿಗೆ ಆಳಂದ ಪಟ್ಟಣದ ಸತ್ಯ ಸಾಯಿ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಉದ್ಯೋಗ ಇಲಾಖೆಯ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಉಚಿತ ಲಸಿಕೆ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಈ ಸಂದರ್ಭದಲ್ಲಿ ಕೈಗಾರಿಕಾ ಮತ್ತು ತರಬೇತಿ ಇಲಾಖೆಯ ಜಂಟಿ ನಿರ್ದೇಶಕ ರವೀಂದ್ರನಾಥ ಬಾಳಿ, ಪುರಸಭೆ ಅಧ್ಯಕ್ಷೆ ರಾಜಶ್ರೀ ಖಜೂರಿ, ಉಪಾಧ್ಯಕ್ಷ ಚಂದ್ರಕಾಂತ ಹತ್ತರಕಿ, ಮುಖಂಡರಾದ ರಾಜಶೇಖರ ಮಲಶೆಟ್ಟಿ, ಮಲ್ಲಿಕಾರ್ಜುನ ತಡಕಲ, ಬಿಜೆಪಿ ಅಧ್ಯಕ್ಷ ಆನಂದರಾವ ಪಾಟೀಲ, ಪ್ರಾಚಾರ್ಯ ಮುರುಳಿಧರರಾವ, ಸಂಸ್ಥೆಯ ಅಧ್ಯಕ್ಷ ಶಾಂತಕುಮಾರ ಬೆಳಂ, ಕಂದಾಯ ನಿರೀಕ್ಷಕ ಶರಣಬಸಪ್ಪ ಹಕ್ಕೆ, ಸುನೀಲ ಹಿರೋಳಿಕರ, ಶ್ರೀಶೈಲ ಘಾಣೂರೆ, ಬೀರಪ್ಪ ಪೂಜಾರಿ, ಡಾ. ಸುಶಾಂತ ಸಂಗಾ, ಡಾ. ಪೃಥ್ವಿರಾಜ ಚವ್ಹಾಣ ಸೇರಿದಂತೆ ಇತರರು ಇದ್ದರು.