ನಿಪ್ಪಾನ್ ಕಂಪನಿಯಿಂದ ಆರೋಗ್ಯ ಕೇಂದ್ರಕ್ಕೆ ಆಕ್ಸಿಜನ್ ಕಾನ್ಸಂಟ್ರೇಟರ್ ಹಸ್ತಾಂತರ

0
46

ಶಹಾಬಾದ:ನಗರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ನಿಪ್ಪಾನ್ ಎಕ್ಸ್‍ಪ್ರೆಸ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಿಂದ ಶನಿವಾರ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳಿ ಹಾಗೂ ಬಿಜೆಪಿ ಮುಖಂಡೆ ಜಯಶ್ರೀ ಮತ್ತಿಮಡು ನೇತೃತ್ವದಲ್ಲಿ ಆಕ್ಸಿಜನ್ ಕಾನ್ಸಂಟ್ರೇಟರ್‍ನ್ನು ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳಿ, ಕೋವಿಡ್ 2 ನೇ ಅಲೆಯಲ್ಲಿ ಆಕ್ಸಿಜನ್ ಕೊರತೆ ಎಲ್ಲರನ್ನೂ ಕಾಡಿತ್ತು.ಅಲ್ಲದೇ ಆಕ್ಸಿಜನ್ ಕೊರತೆಯಿಂದ ಬಹಳಷ್ಟು ಜನರು ಪರದಾಡಿದರು. ಬಹುತೇಖ ಜನರು ಸಾವನಪ್ಪಿದರು. ಆದರೆ ನಿಪ್ಪಾನ್ ಸಂಸ್ಥೆ ಆಕ್ಸಿಜನ್ ಕಾನ್ಸಂಟ್ರೇಟರ್‍ಗಳನ್ನು ವಿತರಣೆ ಮಾಡುವ ಮೂಲಕ ಸೋಂಕಿತರ ಚಿಕಿತ್ಸೆಗೆ ನೆರವಾಗಲಿದೆ. ಇದರಿಂದ ಈ ಭಾಘದ ಜನರಿಗೆ ಬಹಳಷ್ಟು ಉಪಯೋಗವಾಗಲಿದೆ.ವೈದ್ಯರು ಇದರ ಸದುಪಯೋಗಪಡಿಸಿಕೊಂಡು ಉತ್ತಮ ಚಿಕಿತ್ಸೆ ನೀಡಬೇಕೆಂದು ಮನವಿ ಮಾಡಿದರು.

Contact Your\'s Advertisement; 9902492681

ಬಿಜೆಪಿ ಮುಖಂಡೆ ಜಯಶ್ರೀ ಮತ್ತಿಮಡು ಮಾತನಾಡಿ, ಕೋವಿಡ್ ಪ್ರಾರಂಭದಿಂದ ಕೋವಿಡ್ ಸಮಯದಲ್ಲಿ ವಾರಿಯರ್ಸ್ ಗಳಾಗಿ ಕಾರ್ಯ ನಿರ್ವಹಿಸಿದ ವೈದ್ಯರ, ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಪಾತ್ರ ಬಹಳ ದೊಡ್ಡದು.
ನಿಪ್ಪಾನ್ ಕಂಪನಿಯವರು ಆಕ್ಸಿಜನ್ ಕಾನ್ಸಂಟ್ರೇಟರ್ ಗಳ ಕೊರತೆಯ ಸಮಯದಲ್ಲಿ ನೆರವಿನ ಹಸ್ತ ನೀಡಿದೆ ಎಂದು ಕಾರ್ಯಕ್ರಮದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದರು. 3 ನೇ ಅಲೆಯಲ್ಲಿ ಮಕ್ಕಳ ಕುರಿತು ಪಾಲಕರು ಎಚ್ಚರಿಕೆ ವಹಿಸಬೇಕು. ಬರುವ ದಿನಗಳಲ್ಲಿ ಕೋವಿಡ್ ಚಿಕಿತ್ಸೆಗೆ ಯಾವುದೇ ಕೊರತೆ ಆಗದಂತೆ ಸಿದ್ಧತೆ ಮಾಡಿಕೊಳ್ಳಬೇಕಾಗಿದೆ ಎಂದು ಹೇಳಿದರು.

ನಿಪ್ಪಾನ್ ಸಂಸ್ಥೆ ಉಪಾಧ್ಯಕ್ಷ ಶ್ರೀನಿವಾಸ, ವ್ಯವಸ್ಥಾಪಕ ಬಿಜ್ಜು, ತಾಲೂಕಾ ಆರೋಗ್ಯ ಅಧಿಕಾರಿ ದೀಪಕ ಪಾಟೀಲ, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಬ್ದುಲ್ ರಹೀಮ್, ಬಿಜೆಪಿ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ಮುಖಂಡ ಗೋರಖನಾಥ ಶಾಖಾಪೂರ, ಜಿಲ್ಲಾ ಬಿಜೆಪಿ ಮಹಿಳಾ ಅಧ್ಯಕ್ಷ ಭಾಗಿರಥಿ ಗುನ್ನಾಪೂರ,ನಗರ ಅಧ್ಯಕ್ಷೆ ಜಯಶ್ರೀ ಸೂಡಿ, ನಗರಸಭೆಯ ಸದಸ್ಯರಾದ ಪಾರ್ವತಿ ಪವಾರ, ರವಿ ಚವ್ಹಾಣ,ಸದಾನಂದ ಕುಂಬಾರ, ಸಿದ್ರಾಮ ಕುಸಾಳೆ, ನಿಂಗಣ್ಣ ಹುಳಗೋಳಕರ್, ದತ್ತು, ಸಂಜೀವಕುಮಾರ ಸೂಡಿ, ಮೋಹನಕುಮಾರ ಗಾಯಕವಾಡ, ಯುಸೂಫ್ ನಾಕೇದಾರ ಸೇರಿದಂತೆ ಅನೇಕರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here