ಶ್ರೀನಿವಾಸ ಸರಡಗಿ ಸರಕಾರಿ ಪ್ರೌಢಶಾಲೆ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ

0
27

ಕಲಬುರಗಿ : ತಾಲ್ಲೂಕಿನ ಶ್ರೀನಿವಾಸ ಸರಡಗಿ ಸರಕಾರಿ ಪ್ರೌಢಶಾಲೆ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಪೆÇಲೀಸ್ ಸಹಾಯಕ ಆಯುಕ್ತರಾದ ಜೆ ಹೆಚ್ ಇನಾಮದಾರ ಅವರು ಚಾಲನೆ ನೀಡಿ ಮಾತನಾಡುತ್ತಾ ಈಗಾಗಲೇ ಸಾರ್ವಜನಿಕರು ಮಹಾಮಾರಿ ಕರೋನಾ ರೋಗದಿಂದ ಬಳಲುತ್ತಿದ್ದು ಬಹಳಷ್ಟು ರೋಗಿಗಳು ಆಕ್ಸಿಜನ್ ಇಲ್ಲದೆ ಸಾವನ್ನಪ್ಪಿದ್ದು ನಾವೆಲ್ಲರೂ ನೋಡಿದ್ದ ವಿಷಯವಾಗಿದ್ದರಿಂದ ಸಾರ್ವಜನಿಕರು ಹೆಚ್ಚಿನ ಮಟ್ಟದಲ್ಲಿ ಸಸಿಗಳನ್ನು ನೆಡಬೇಕು ಮುಂದಿನ ಪೀಳಿಗೆಗೆ ಅನುಕೂಲವಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣ್ ಬಿ ಆಡೆ, ಬಿಜೆಪಿ ಗ್ರಾಮೀಣ ಮಂಡಲ ಉಪಾಧ್ಯಕ್ಷ ವಿನೋದ್ ಪಾಟಿಲ್, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ ಆಡೆ, ಮಾಜಿ ಗ್ರಾಮ ಪಂಚಾಯತ್ ಸದಸ್ಯ ಸಂಗಯ್ಯ ಸ್ವಾಮಿ ಹಿರೇಮಠ, ಗ್ರಾಮ ಪಂಚಾಯತ ಉಪಾಧ್ಯಕ್ಷ ಇಂದುಬಾಯಿ ರಾಣಪ್ಪ ಮೀಸಿ, ಎಸ್‍ಡಿಎಮ್‍ಸಿ ಅಧ್ಯಕ್ಷ ಶರಣಗೌಡ ಬಿರಾದಾರ, ಗ್ರಾಮ ಪಂಚಾಯತ ಸದಸ್ಯರಾದ ಮಲ್ಲಿಕಾರ್ಜುನ ಹಳ್ಳಿ, ಅಶೋಕ್ ರಾಠೋಡ, ರಾಜು ಚವ್ಹಾಣ, ರಾಜು ಶ್ರೀಗನ್, ರವಿ ರಾಠೋಡ, ಯುವ ಮುಖಂಡರಾದ ರಮೇಶ್ ಮೀಸಿ, ಅಮೀರ್ ಪಾಷಾ, ಇಮಾಮ್ ಸಾಬ್ ಲದಾಫ್, ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ್ ಎಸ್ ಕಿಳ್ಳಿ, ಶಿವಾನಂದ ಆರ್ ಕಿಳ್ಳಿ, ಮಲ್ಲಿಕಾರ್ಜುನ ಶ್ರೀಗನ್ ಹಾಗೂ ಶಾಲೆಯ ಶಿಕ್ಷಕರು ಮತ್ತು ಗ್ರಾಮಸ್ಥರು ಯುವಕರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here