ಕಲಬುರಗಿ: ಪೊಲೀಸ್ ಠಾಣೆಯಲ್ಲಿ ಆರೋಪಿ ಸಾವು

0
49

ಕಲಬುರಗಿ: ಹೈವೇಯಲ್ಲಿ ರಾಬರಿ ಮಾಡುತ್ತಿದ್ದ ವೇಳೆ ಬಂಧಿಸಿ ಕರೆತಂದಿದ್ದ ಆರೋಪಿ ಠಾಣೆಯಲ್ಲಿ ಅಸ್ವಸ್ಥಗೊಂಡು ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿರುವ ಘಟನೆ ಎಂಬಿ ನಗರ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಹೈದ್ರಾಬಾದ್ ಮೂಲದ ಚಂದ್ರು (30) ಎಂಬಾತ ಪೊಲೀಸ್ ವಶದಲ್ಲಿ ಸಾವಿಗೀಡಾದ ವ್ಯಕ್ತಿಯಾಗಿದ್ದಾನೆ‌.

Contact Your\'s Advertisement; 9902492681

ಸದ್ಯ ಚಂದ್ರ ಕಲಬುರಗಿ ನಗರದ ಪೂಜಾ ಕಾಲೋನಿಯಲ್ಲಿ ವಾಸವಾಗಿದ್ದ. ಹೈವೆನಲ್ಲಿ ರಾಬರಿ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದರು.

ಈ ವೇಳೆ ಇನ್ನೊರ್ವ ಆರೋಪಿ ಮಹೇಶ್ ಎಂಬಾತ ಪರಾರಿಯಾಗಿದ್ದ, ಆರೋಪಿ ಚಂದ್ರುವನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತಿತ್ತು. ಈ ವೇಳೆ ಅಸ್ವಸ್ಥಗೊಂಡ ಆತನನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮದ್ಯೆ ಸಾವು ಸಂಭವಿಸಿದೆ ಎಂದು ತಿಳಿದುಬಂದಿದೆ.

ಎಂಬಿ ನಗರ ಠಾಣೆ ಪೊಲೀಸರ ವಶದಲ್ಲಿದ್ದ ಈತನ ಸಾವು ಲಾಕಪ್‌ಡೆತ್ ಅಥವಾ ಆಕಸ್ಮಿಕವೇ ಎಂಬುದನ್ನು ಪತ್ತೆ ಮಾಡಲು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಎಸಿಪಿ ಗಿರೀಶ್ ನೇತೃತ್ವದಲ್ಲಿ ತನಿಖೆ ಕೂಡಾ ಆರಂಭವಾಗಿದ್ದು, ತನಿಖೆಯ ನಂತರ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ‌.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here