ಬಿಸಿ ಬಿಸಿ ಸುದ್ದಿ

ಪ್ರತಿಯೊಬ್ಬರೂ ಸಹಕಾರ ನೀಡಿದರೆ ಇನ್ನೂ ಉತ್ತಮ ಕೆಲಸ ಮಾಡುವೆ : ಮತ್ತಿಮಡು

ಶಹಾಬಾದ:ಕಲಬುರಗಿ ಗ್ರಾಮೀಣ ಕ್ಷೇತ್ರದ ನಂದೂರ.ಕೆ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ೪.೫ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಾಣ ಮತ್ತು ೧೦ ಲಕ್ಷ ರೂ. ವೆಚ್ಚದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಭೂಮಿ ಪೂಜೆ ನೇರವೇರಿಸಿದರು.

ನಂತರ ಮಾತನಾಡಿದ ಶಾಸಕ ಬಸವರಾಜ ಮತ್ತಿಮಡು, ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರದಿಂದ ಗರಿ? ಮಟ್ಟದಲ್ಲಿ ಅನುದಾನ ತಂದು ಕೆಲಸಗಳನ್ನು ಕೈಗೊಳ್ಳಲಾಗುತ್ತಿದೆ. ಸಾರ್ವಜನಿಕರು, ಮುಖಂಡರು ಮತ್ತು ಅಧಿಕಾರಿಗಳ ಸಹಯೋಗದೊಂದಿಗೆ ಗುಣಮಟ್ಟದ ಕಾಮಗಾರಿ ನಡೆಸಲಾಗುತ್ತಿದೆ. ಪ್ರತಿಯೊಬ್ಬರ ಸಹಕಾರ, ಸಲಹೆ ನೀಡಿದರೆ ಇನ್ನೂ ಉತ್ತಮ ಕೆಲಸ ಮಾಡುವೆ. ಪ್ರತಿಯೊಬ್ಬರೂ ಕೊರೊನಾ ಮುನ್ನೆಚ್ಚರಿಕೆ ವಹಿಸಬೇಕು. ಆರೋಗ್ಯ ಕ್ಷೇತ್ರ, ಮೂಲಸೌಕರ್ಯ, ಕೃಷಿ, ಶಿಕ್ಷಣ ಹೀಗೆ ಎಲ್ಲ ವಿಭಾಗಕ್ಕೂ ಉತ್ತಮ ಕೆಲಸವನ್ನು ಕೇಂದ್ರ, ರಾಜ್ಯ ಸರ್ಕಾರಗಳು ಮಾಡುತ್ತಿವೆ. ಇವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಗ್ರಾಮದ ಅಭಿಮಾನಿಗಳು ಬೆಳ್ಳಿರಥದ ಉಡುಗೊರೆ ನೀಡಿ ಗೌರವಿಸಿದರು. ರಾಜ್ಯ ಎಸ್‌ಸಿ ಮೋರ್ಚಾ ಉಪಾಧ್ಯಕ್ಷ ಅಂಬಾರಾಯ ಅ?ಗಿ, ಕಲಬುರ್ಗಿ ಗ್ರಾಮೀಣ ಮಂಡಲ ಅಧ್ಯಕ್ಷ ಸಂಗಮೇಶ ವಾಲಿ, ಉಪಾಧ್ಯಕ್ಷ ವಿನೋದ ಪಾಟೀಲ್ ಸರಡಗಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರಮಾದೇವಿ ಕಲ್ಲಾ , ಗ್ರಾಪಂ ಸದಸ್ಯರಾದ ಗಂಗಾಧರ ಸ್ವಾಮಿ ,ಶರಣಬಸಪ್ಪ, ಶಿವಕುಮಾರ ಅಂಬಲಗಿ, ನಿಂಗಣ್ಣ, ಪ್ರಭು ರಾವೂರ, ವಿಶ್ವನಾಥ ವೆಂಕಟಬೇನೂರ , ನೀಲಕಂಠರಾವ ಪಾಟೀಲ್, ಶಿವು ಗುತ್ತೇದಾರ, ಅಶೋಕ ಬಬಲಾದ, ರೇವಣ್ಯಸ್ವಾಮಿ , ಶಾಂತಕುಮಾರ ಪಾಟೀಲ್ , ಚಂದ್ರಶೇಖರ್ ಪಾಟೀಲ್, ಭೀಮಾಶಂಕರ , ಮಹಾಲಿಂಗಸ್ವಾಮಿ, ಬಸವೇಶ ಪಾಳಾ, ಜಗನ್ನಾಥ ಹರಳಯ್ಯ , ರಮೇಶ ಸಾಹುಕಾರ , ಮಹೇಶ ಪಾಳಾ, ಗಂಗಾಧರ ಅಪಚಂದ , ಬಸವರಾಜ ಪೋಲಿಸ ಪಾಟೀಲ್, ಅರುಣಕುಮಾರ ಹಿರೇಗೌಡ, ಮಲ್ಲಿಕಾರ್ಜುನ ಪ್ಯಾಟಿ , ಮಲ್ಲಿಕಾರ್ಜುನ ಹಿರೇಗೌಡ, ನಾಗರಾಜ ಕಲ್ಲಾ, ಈಶ್ವರ ರಾಠೋಡ್, ಮೈಲಾರಿ , ಅಮ್ರತ ಡಿಗ್ಗಿ , ಗುರುಶಾಂತ ಬೆಳಗುಂಪಿ ,ದಶರಥ ನಾಟೀಕರ , ಶರಣು ಬಿಲಗುಂದಿ , ಪಪ್ಪು ಕಣಕಿ , ಸಂಗುಗೌಡ ಪಾಳಾ , ನಂದೂರ ಕೆ ಗ್ರಾಮದ ಹಿರಿಯರು ಮುಖಂಡರು ಪಕ್ಷದ ಅಪಾರ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು .

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

42 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

45 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

48 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago