ಕಲಬುರಗಿ: ಕೋವಿಡ್ ಭೀತಿಯಿಂದ ಮುಂದೂಡಲ್ಪಟ್ಟಿದ್ದ ಗುಲಬರ್ಗಾ ವಿಶ್ವವಿದ್ಯಾಲಯದ ಬಿಎ, ಬಿಎಸ್ಸಿ, ಬಿಕಾಂ ಹಾಗೂ ಸ್ನಾತಕೋತ್ತರ ಪದವಿ ಸೇರಿ ಇನ್ನಿತರ ಪದವಿ ಕೋರ್ಸ್ಗಳ ಮೊದಲನೇ, ಮೂರನೇ ಹಾಗೂ ಐದನೇ ಸೆಮಿಸ್ಟರ್ ಪರೀಕ್ಷೆಗಳನ್ನು ಇದೇ ಆಗಸ್ಟ್ 2 ರಿಂದ ನಡೆಸಲಾಗುತ್ತದೆ ಎಂದು ಗುಲಬರ್ಗಾ ವಿವಿಯ ಕುಲಪತಿಗಳಾದ ಪ್ರೊ. ದಯಾನಂದ ಅಗಸರ್ ಹೇಳಿದರು.
ಮಂಗಳವಾರ ಇಲ್ಲಿನ ಗುಲಬರ್ಗಾ ವಿವಿಯ ಕಾರ್ಯಸೌಧದ ರಾಧಾಕೃಷ್ಣ ಸಭಾಂಗಣದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉನ್ನತ ಶಿಕ್ಷಣ ಪರಿಷತ್ ಹಾಗೂ ಯುಜಿಸಿಯ ಮಾರ್ಗಸೂಚಿಗಳ ಅನ್ವಯ ಪರೀಕ್ಷೆ ನಡೆಸಲಾಗುತ್ತಿದ್ದು, 4 ಜಿಲ್ಲೆಗಳ ಸುಮಾರು 150 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 1 ಲಕ್ಷ 20 ಸಾವಿರ ಪದವಿ ಹಾಗೂ 12 ಸಾವಿರ ಸ್ನಾತಕೋತ್ತರ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಹಾಜರಾಗಲಿದ್ದಾರೆ ಎಂದು ಅವರು ವಿವರಿಸಿದರು.
ಮೊದಲನೇ, ಮೂರನೇ ಹಾಗೂ ಐದನೇ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶ ಆಧರಿಸಿ 2 ಹಾಗೂ 4ನೇ ಸೆಮಿಸ್ಟರ್ ಪದವಿ ವಿದ್ಯಾರ್ಥಿಗಳನ್ನು ಹಾಗೂ 2 ನೇ ಸೆಮಿಸ್ಟರ್ ವಿದ್ಯಾರ್ಥಿಗಳನ್ನು ಪ್ರಮೋಟ್ ಮಾಡಲಾಗುವುದರ ಮೂಲಕ ಮುಂದಿನ ತರಗತಿಗೆ ತೇರ್ಗಡೆಗೊಳಿಸಲಾಗುವುದು. ಇದಲ್ಲದೆ 6ನೇ ಸೆಮಿಸ್ಟರ್ ಪದವಿ ವಿದ್ಯಾರ್ಥಿಗಳಿಗೆ ಹಾಗೂ 4 ನೇ ಸೆಮಿಸ್ಟರ್ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಸಲಾಗುವುದು ಎಂದು ಅವರು ತಿಳಿಸಿದರು.
ಜುಲೈ 28ರಿಂದ ಬಿಎಡ್ ಪರೀಕ್ಷೆ: ಈಗಾಗಲೇ ತರಗತಿ ಮುಗಿಸಿರುವ ಬಿಎಡ್ ವಿದ್ಯಾರ್ಥಿಗಳಿಗೆ ಇದೇ ಜುಲೈ 28 ರಿಂದ ಪರೀಕ್ಷೆಗಳನ್ನು ನಡೆಸಲಾಗುವುದು. ವಿವಿ ವ್ಯಾಪ್ತಿಯ 4 ಜಿಲ್ಲೆಗಳ 9200 ವಿದ್ಯಾರ್ಥಿಗಳು ಬಿ.ಎಡ್ ಪರೀಕ್ಷೆ ಎದುರಿಸಲು ಸಿದ್ಧವಾಗಿದ್ದು, 26 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿವೆ ಎಂದು ಕುಲಪತಿ ಅಗಸರ್ ಅವರು ತಿಳಿಸಿದರು.
ಪರೀಕ್ಷೆಗಳು ಯುಜಿಸಿ ಹಾಗೂ ಸರ್ಕಾರದ ಅನುಸಾರದಂತೆ ನಡೆಯಲಿವೆ. ಈಗಾಗಲೇ ಶೇ. 70 ರಷ್ಟು ವಿದ್ಯಾರ್ಥಿಗಳು ಹಾಗೂ ಶೇ. 90 ರಷ್ಟು ಶಿಕ್ಷಕರು ಕೋವಿಡ್ ಲಸಿಕೆ ಪಡೆದಿದ್ದಾರೆ. ಪರೀಕ್ಷೆಗೆ ಹಾಜರಾಗುವ ಪ್ರತಿಯೊಬ್ಬರೂ ಸಹ ಕನಿಷ್ಠ ಪಕ್ಷ ಒಂದು ಡೋಸ್ ಆದರೂ ಪಡೆದಿರಬೇಕು. ಅದಲ್ಲದೆ ವಿವಿಯ ವ್ಯಾಪ್ತಿಗೆ ಬರುವ 4 ಜಿಲ್ಲೆಗಳ 1.25 ಲಕ್ಷ ವಿದ್ಯಾರ್ಥಿಗಳು 2020-21 ನೇ ಸಾಲಿನ ಪರೀಕ್ಷೆಗೆ ಹಾಜರಾಗಲಿದ್ದಾರೆ. ಎನ್.ಸಿ.ಇ.ಟಿ. ಮಾನ್ಯತೆ ಪಡೆದ ಮಹಾವಿದ್ಯಾಲಯಗಳಲ್ಲಿ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ವಿವಿಯ ಕುಲಸಚಿವ ಶರಣಬಸಪ್ಪ ಕೊಟ್ಟೇಪ್ಪಗೋಳ, ಮೌಲ್ಯಮಾಪನ ಕುಲಸಚಿವ ಸೋನಾರ್ ನಂದಪ್ಪ, ವಿತ್ತಾಧಿಕಾರಿ ಬಿ. ವಿಜಯ ಹಾಗೂ ವಿವಿಧ ನಿಕಾಯಗಳ ಡೀನರುಗಳು ಉಪಸ್ಥಿತರಿದ್ದರು.
ಕಲಬುರಗಿ: ಇಲ್ಲಿನ ಪ್ರಸಿದ್ಧಿ ಸೂಫಿ ಸಂತ ಹಜರತ್ ಖಾಜಾ ಶೇಖ ಮಗದೂಮ್ ಅಲ್ಲಾವುದ್ದೀನ್ ಅನ್ಸಾರಿ ಚಿಸ್ತಿ ಲಾಡ್ಲೆ ಮಶಾಕ ಅನ್ಸಾರಿ…
ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…
ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…
ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…
ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…
ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…