ಬೆಳಗಾವಿ: ರಮೇಶ್ ಜಾರಕಿಹೊಳಿ ರಾಜೀನಾಮೆಗೆ ತ್ರಿ ಈಡಿಯಟ್ಸ್ ಅಳಿಯಂದಿರೇ ಕಾರಣ ಎಂದು ಗೋಕಾಕ್ ನಲ್ಲಿ ಸಹೋದರ ಲಖನ್ ಜಾರಕಿಹೊಳಿ ಗಂಭೀರ ಆರೋಪಿಸಿದ್ದಾರೆ.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಕಳೆದ ಒಂದು ವರ್ಷದಿಂದ ನಮ್ಮೊಂದಿಗೆ ಸಂಪರ್ಕದೊಂದಿಗೆ ಇಲ್ಲ. ಅಂಬಿರಾವ್, ಅಪ್ಪಿರಾವ್, ಶಂಕರ್ ಪಾಟೀಲ್ ಮೂರು ಜನ ಅಳಿಯಂದಿರ ಮಾತು ಕೇಳಿ ಈ ರೀತಿ ರಮೇಶ್ ಮಾಡುತ್ತಿದ್ದಾರೆ ಎಂದು ಗುಡುಗಿದ ಅವರು, ನಾನು ಕಾಂಗ್ರೆಸ್ ನ ನಿಷ್ಠಾವಂತ ಕಾರ್ಯಕರ್ತರಾಗಿದ್ದೇವೆ. ಗೋಕಾಕ್ ಕಾಂಗ್ರೆಸ್ ನ ಭದ್ರಕೋಟೆ ಪಕ್ಷವನ್ನು ಕಟ್ಟಿ ಬೆಳೆಸುತ್ತೇವೆ ಎಂದರು.
ಅವರು ಹೇಳಿದರೆ ಚುನಾವಣೆಯಲ್ಲಿ ರಮೇಶ್ ವಿರುದ್ಧ ಸ್ಪರ್ಧೆಗೆ ಸಿದ್ದ. ಕಳೆದ ಒಂದು ವರ್ಷದಿಂದ ಅವರ ಸಂಪರ್ಕ ಬಿಟ್ಟಿದ್ದೇನೆ. ಅಳಿಯರ ಮಾತು ಕೇಳಿ ಸಹೋದರರನ್ನ ರಮೇಶ್ ದೂರು ಮಾಡಿಕೊಂಡಿದ್ದಾರೆ. ಅಳಿಯ ಅಪ್ಪಿರಾವ್ ಪಾಟೀಲ್ ಮಹಾರಾಷ್ಟ್ರದ ಗಡಹಿಂಗ್ಲಜ್ ನಿಂದ ಶಾಸಕರಾಗಲು ರಮೇಶ್ ನ ತಲೆಕೆಡಸಿದ್ದಾರೆ ಎಂದು ಆರೋಪಿಸಿದರು.
ಅಳಿಯರ ಮಾತು ಕೇಳಿ ರಮೇಶ್ ಸಚಿವ ಸ್ಥಾನ ಕಳೆದುಕೊಂಡಿದ್ದಾರೆ, ಈಗ ರಾಜೀನಾಮೆ ಕೊಡುತ್ತಿದ್ದಾರೆ. ರಮೇಶ್ ಹೋದ ಮೇಲೆ ಗೋಕಾಕ್ ನಲ್ಲಿ ನಾನೇ ಕಾಂಗ್ರೆಸ್ ಮುನ್ನಡೆಸುತ್ತೇನೆ ಎಂದು ಹೇಳಿದರು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…